AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Food Tips: ಬೀದಿಬದಿಯಲ್ಲಿ ಸಿಗುವ ಎಳನೀರಿನಲ್ಲಿ ಅಧಿಕ ನೀರು ಇದೆಯೋ, ಇಲ್ವೋ ಎಂದು ಪತ್ತೆ ಮಾಡುವುದು ಹೀಗೆ

ಎಳನೀರು ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿನ ಅನೇಕ ಪೋಷಕಾಂಶಗಳ ಕಾರಣ ಹಲವರು ಪ್ರತಿನಿತ್ಯ ಒಂದು ಎಳನೀರನ್ನು ಸೇವನೆ ಮಾಡುತ್ತಾರೆ. ಆದರೆ ಮಾರುಕಟ್ಟೆಯಲ್ಲಿ ಕೊಂಡುಕೊಳ್ಳುವ ಸೀಯಾಳದಲ್ಲಿ ಹಲವು ಬಾರಿ ಕಡಿಮೆ ನೀರು ಇರುತ್ತದೆ. ಇದರಿಂದಾಗಿ ಹೆಚ್ಚಿನವರು ಯಾವುದು ಉತ್ತಮ ಎಳನೀರು, ಯಾವ ಎಳನೀರು ಹೆಚ್ಚು ಕೆನೆಯನ್ನು ಹೊಂದಿರುತ್ತದೆ ಎಂಬ ಗೊಂದಲಕ್ಕೆ ಒಳಗಾಗುತ್ತಾರೆ. ಹಾಗಾಗಿ ಅಧಿಕ ನೀರಿರುವ ಕೆನೆಭರಿತ ಎಳನೀರನ್ನು ಆಯ್ಕೆ ಮಾಡುವುದು ಹೇಗೆ ಎಂದು ತಿಳಿಯೋಣ.

Food Tips: ಬೀದಿಬದಿಯಲ್ಲಿ ಸಿಗುವ ಎಳನೀರಿನಲ್ಲಿ ಅಧಿಕ ನೀರು ಇದೆಯೋ, ಇಲ್ವೋ ಎಂದು ಪತ್ತೆ ಮಾಡುವುದು ಹೀಗೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Jun 22, 2023 | 3:52 PM

Share

ಎಳನೀರು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ವಿಶೇಷವಾಗಿ ಬೇಸಿಗೆಯಲ್ಲಿ. ಇದು ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಕಾರಿಯಾದ ಅಗತ್ಯ ಪೋಷಕಾಂಶಗಳು ಮತ್ತು ವಿಟಮಿನ್ ಗಳಿಂದ ಕೂಡಿದೆ. ಹಾಗಾಗಿ ತಜ್ಞರು ಖಾಲಿ ಹೊಟ್ಟೆಯಲ್ಲಿ ಎಳನೀರನ್ನು ಸೇವನೆ ಮಾಡಲು ಶಿಫಾರಸು ಮಾಡುತ್ತಾರೆ. ಇಂತಹ ಅದ್ಭುತ ಆರೋಗ್ಯ ಪ್ರಯೋಜನವನ್ನು ಹೊಂದಿರುವ ಎಳನೀರು ಬಹುತೇಕ ಎಲ್ಲರಿಗೂ ಇಷ್ಟ. ಆದರೆ ಬೀದಿಬದಿಯಲ್ಲಿ ಸಿಗುವ ಅಧಿಕ ನೀರಿರುವ ಕೆನೆಭರಿತ ಸೀಯಾಳವನ್ನು ಖರೀದಿಸುವುದು ಸವಾಲಿನ ಸಂಗತಿಯಾಗಿದೆ. ಕೆಲವೊಂದು ಬಾರಿ ಗಾತ್ರದಲ್ಲಿ ದೊಡ್ಡದಾಗಿರುವ ಸೀಯಾಳವು ಕಡಿಮೆ ನೀರನ್ನು ಹೊಂದಿರುತ್ತದೆ, ಇನ್ನೂ ಕೆಲವು ಬಾರಿ ಎಳೆಯ ಸೀಯಾಳ ಎಂದು ಖರೀದಿಸಿದರೆ ಅದು ಮಾಗಿ ತೆಂಗಿನಕಾಯಿಯಂತಾಗಿರುತ್ತವೆ. ಹೀಗೆ ಒಂದು ಸೀಯಾಳವನ್ನು ಖರೀದಿಸಬೇಕಾದರೆ ಅಳೆದು ತೂಗಬೇಕಾಗುತ್ತದೆ. ಹಾಗಾಗಿ ಈ ಕೆಲವು ಸರಳ ತಂತ್ರವನ್ನು ಬಳಸಿ ಅಧಿಕ ನೀರಿರುವ ಎಳನೀರನ್ನು ಖರೀದಿಸಬಹುದು.

ಸರಿಯಾದ ಎಳನೀರನ್ನು ಖರೀದಿಸಲು ಸಹಾಯಕವಾಗುವ ಸುಲಭ ತಂತ್ರಗಳು:

ಸಿಪ್ಪೆಯನ್ನು ಪರಿಶೀಲಿಸಿ:

ಸೀಯಾಳವನ್ನು ಖರೀದಿಸುವ ಮೊದಲು ನೀವು ಯಾವಾಗಲೂ ಅದರ ಸಿಪ್ಪೆಯನ್ನು ಪರೀಕ್ಷಿಸಬೇಕು. ಕೆನೆಭರಿತ ಮತ್ತು ನೀರಿರುವ ಎಳನೀರು ಹಸಿರು ಸಿಪ್ಪೆಯನ್ನು ಹೊಂದಿರುತ್ತದೆ. ಸಿಪ್ಪೆಯಲ್ಲಿ ಯಾವುದೇ ಹಾನಿಯಾಗಿ ಕಂದು ಬಣ್ಣಕ್ಕೆ ತಿರುಗಿದ್ದರೆ ಅದು ಉತ್ತಮ ಗುಣಮಟ್ಟದ್ದಲ್ಲ ಎಂಬುದರ ಸೂಚಕವಾಗಿದೆ. ನೀವು ಸಂಪೂರ್ಣವಾಗಿ ಹಸಿರು ಬಣ್ಣ ಹೊಂದಿರುವ ಸೀಯಾಳವನ್ನು ಹುಡುಕಲು ಸಾಧ್ಯವಾಗದಿದ್ದರೆ, ಕಡಿಮೆ ಪ್ರಮಾಣದ ಬಣ್ಣ ಹೊಂದಿರುವ ಸೀಯಾಳ ಆಯ್ಕೆ ಮಾಡಿ, ಏಕೆಂದರೆ ಅದು ತಾಜಾವಾಗಿರುತ್ತದೆ. ಹಾಗೆಯೇ ದಟ್ಟವಾದ ಕಂದು ಸಿಪ್ಪೆಯನ್ನು ಹೊಂದಿದ್ದರೆ, ಅದು ಮಾಗಿ ತೆಂಗಿನಕಾಯಿಯ ರೂಪಕ್ಕೆ ತಿರುಗುತ್ತಿದೆ ಎಂದರ್ಥ, ಅದರಲ್ಲಿನ ನೀರು ಅಷ್ಟೊಂದು ತಾಜಾ ಮತ್ತು ರುಚಿಕವಾಗಿರುವುದಿಲ್ಲ.

ಗಾತ್ರ ಪರಿಶೀಲಿಸಿ:

ಸೀಯಾಳ ಗಾತ್ರದಲ್ಲಿ ತುಂಬಾ ಚಿಕ್ಕದಿರದಂತೆ ನೋಡಿಕೊಳ್ಳಿ. ಯಾಕೆಂದರೆ ಅವುಗಳಲ್ಲಿ ಅಷ್ಟೇನು ನೀರಿರುವುದಿಲ್ಲ. ಗಾತ್ರದಲ್ಲಿ ದೊಡ್ಡವಿರುವ ಎಳನೀರು ಎಂದರೆ ಅದರಲ್ಲಿ ಹೆಚ್ಚು ನೀರು ಇದೆ ಎಂದರ್ಥವಲ್ಲ. ಗಾತ್ರದಲ್ಲಿ ದೊಡ್ಡದಾಗಿರುವ ಸೀಯಾಳದಲ್ಲೂ ನೀರಿನಾಂಶ ಕಡಿಮೆ ಇರುತ್ತದೆ. ಆದ್ದರಿಂದ ಯಾವಾಗಲೂ ಮಧ್ಯಮ ಗಾತ್ರದ ಸೀಯಾಳವನ್ನು ಆಯ್ಕೆ ಮಾಡಿಕೊಳ್ಳಿ. ಅವುಗಳಲ್ಲಿ ಹೆಚ್ಚಿನ ಪ್ರಮಾಣದ ನೀರಿನಾಂಶವಿರುತ್ತದೆ ಮತ್ತು ಅದು ಕೆನೆಭರಿತವಾಗಿರುತ್ತದೆ.

ಇದನ್ನೂ ಓದಿ: Breakfast Tips: ಬೆಳಗಿನ ಉಪಹಾರ ಸೇವನೆಯಲ್ಲಿ ಈ 6 ತಪ್ಪುಗಳನ್ನು ಎಂದಿಗೂ ಮಾಡಬೇಡಿ

ಆಕಾರ ಪರಿಶೀಲಿಸಿ:

ತೆಂಗಿನ ಮರದಲ್ಲಿ ಎಳನೀರು ಚಿಕ್ಕದಾಗಿ ದುಂಡಾಗಿ ಬೆಳೆಯಲು ಪ್ರಾರಂಭವಾಗುತ್ತವೆ. ಅವುಗಳು ಬೆಳೆಯುತ್ತಾ ಹೋದಂತೆ ಅದು ಆಕಾರದಲ್ಲಿ ಉದ್ದವಾಗಲು ಪ್ರಾರಂಭವಾಗುತ್ತದೆ. ದೊಡ್ಡ ಗಾತ್ರದ ಸೀಯಾಳದಲ್ಲಿ ನೀರಿನ ಅಂಶ ಕಡಿಮೆ ಇರುವುದರಿಂದ ಯಾವಾಗಲೂ ದುಂಡಗಿನ ಸೀಯಾಳವನ್ನು ಆರಿಸಿಕೊಳ್ಳುವುದು ಉತ್ತಮ.

ಎಳನೀರಿನ ಕಾಯಿಯನ್ನು ಅಲುಗಾಡಿಸಿ:

ಸೀಯಾಳವನ್ನು ಅಲುಗಾಡಿಸುವುದರ ಮೂಲಕ ಅದರಲ್ಲಿನ ನೀರಿನಾಂಶವನ್ನು ಪರೀಕ್ಷಿಸಬಹುದು. ಸೀಯಾಳವನ್ನು ನಿಮ್ಮ ಕಿವಿಯ ಹತ್ತಿರ ಹಿಡಿದುಕೊಳ್ಳಿ ಮತ್ತು ಅದನ್ನು ಬಲವಾಗಿ ಅಲ್ಲಾಡಿಸಿ. ಸುತ್ತಲೂ ನೀರು ಹರಿಯುವ ಶಬ್ಧ ನೀವು ಕೇಳುತ್ತೀರಾ? ಹೌದು ಎಂದಾದರೆ, ಅದು ಒಳ್ಳೆಯ ಸಂಕೇತವಲ್ಲ. ಅಧಿಕ ನೀರಿನಾಂಶವಿರುವ ಸೀಯಾಳದಲ್ಲಿ ನೀರು ತುಂಬಿರುವುದರಿಂದ ಅದು ಯಾವುದೇ ಸದ್ದು ಮಾಡುವುದಿಲ್ಲ. ಆದುದರಿಂದ ಎಳನೀರನ್ನು ಒಂದು ಬಾರಿ ಅಲ್ಲಾಡಿಸಿ ಅದರಲ್ಲಿ ನೀರು ಹರಿಯುವ ಶಬ್ದ ಕೇಳಿಲ್ಲವೆಂದಾದರೆ ಮಾತ್ರ ಅಂತಹ ಎಳನೀರನ್ನು ಖರೀದಿಸಿ.

ತೂಕವನ್ನು ಪರಿಶೀಲಿಸಿ:

ತೆಂಗಿನಕಾಯಿಯನ್ನು ಖರೀದಿಸುವಾಗ, ನೀವು ಯಾವಾಗಲೂ ಅವುಗಳ ತೂಕವನ್ನು ಪರೀಕ್ಷಿಸಬೇಕು. ಕೆನೆಭರಿತವಾದ ಮತ್ತು ಅಧಿಕ ನೀರಿರುವ ತೆಂಗಿನಕಾಯಿಯು ನೀರಿನಿಂದ ತುಂಬಿರುವುದರಿಂದ ಸ್ವಾಭಾವಿಕವಾಗಿ ಭಾರವಾಗಿರುತ್ತದೆ. ಅದು ತುಂಬಾ ಹಗುರವಾಗಿದ್ದರೆ, ಅದರೊಳಗೆ ನೀರು ಇಲ್ಲ ಎಂದು ಅರ್ಥ. ಹಾಗಾಗಿ ಯಾವಾಗಲೂ ತೂಕದಲ್ಲಿ ಭಾರವಾಗಿರುವ ಎಳನೀರನ್ನು ಖರೀದಿಸುವುದು ಉತ್ತಮ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು