AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ವಿಪರೀತ ತಲೆ ನೋವಿನಿಂದ ಬಳಲುತ್ತಿದ್ದೀರಾ, ಮನೆಯಲ್ಲೇ ಪರಿಹಾರ ಕಂಡುಕೊಳ್ಳಿ

ಇತ್ತೀಚೆಗಿನ ದಿನಗಳಲ್ಲಿ ಎಲ್ಲರೂ ಒಂದಲ್ಲ ಒಂದು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ ಬಹುತೇಕರಲ್ಲಿ ತಲೆನೋವಿನ ಸಮಸ್ಯೆಯು ಕಾಡುತ್ತಿದೆ. ಸುಡು ಬಿಸಿಲಿನಲ್ಲಿ ಸುತ್ತಾಡಿ ಬಂದರೆ, ಸ್ವಲ್ಪ ಒತ್ತಡವೇನಾದರೂ ಆದರೆ ತಲೆ ನೋವು ಕಾಣಿಸಿಕೊಳ್ಳುತ್ತದೆ. ಅತಿಯಾದ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಫೋನ್ ಗಳ ಬಳಕೆಯಿಂದ ಈ ಸಮಸ್ಯೆಯ ತೀವ್ರತೆಯು ಹೆಚ್ಚಾಗುತ್ತಿದೆ. ಆಗಾಗ ತಲೆ ನೋವು ಕಾಣಿಸಿಕೊಂಡರೆ ಮನೆಯಲ್ಲಿ ಮದ್ದನ್ನು ತಯಾರಿಸಿ ಸೇವಿಸಿದರೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ನೀವು ವಿಪರೀತ ತಲೆ ನೋವಿನಿಂದ ಬಳಲುತ್ತಿದ್ದೀರಾ, ಮನೆಯಲ್ಲೇ ಪರಿಹಾರ ಕಂಡುಕೊಳ್ಳಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Feb 08, 2024 | 6:53 PM

Share

ವಿಪರೀತವಾದ ತಲೆ ನೋವಿನ ಸಮಸ್ಯೆಯಿಂದ ಬಳಲುವವರ ಸಂಖ್ಯೆಗೇನು ಕಡಿಮೆಯಿಲ್ಲ. ಕೆಲವರಂತೂ ಪದೇ ಪದೇ ಕಾಡುವ ತಲೆನೋವಿನಿಂದ ನರಕಯಾತನೆ ಅನುಭವಿಸುತ್ತಾರೆ. ಈ ನೋವು ಕಡಿಮೆಯಾಗಲಿ ಎಂದು ನೋವು ನಿವಾರಣೆ ಮಾತ್ರೆಗಳ ಮೊರೆ ಹೋಗುತ್ತಾರೆ. ಆದರೆ ಅಡುಗೆ ಮನೆಯಲ್ಲೇ ಇರುವ ಕೆಲವು ಪದಾರ್ಥಗಳನ್ನು ಬಳಸಿ ತಲೆನೋವಿನ ಸಮಸ್ಯೆಯನ್ನು ಸಂಪೂರ್ಣವಾಗಿ ದೂರವಿಡಬಹುದು.

ತಲೆನೋವಿನ ಸಮಸ್ಯೆ ನಿವಾರಣೆಗೆ ಮನೆ ಮದ್ದುಗಳು

* ನಿಂಬೆಹಣ್ಣಿನ ರಸದಲ್ಲಿ ದಾಲ್ಪಿನಿಯನ್ನು ತೇಯ್ದು, ಹಣೆಗೆ ಲೇಪಿಸಿಕೊಂಡರೆ ಅರ್ಧ ತಲೆನೋವು ಕಡಿಮೆಯಾಗುತ್ತದೆ.

* ಒತ್ತಡದಿಂದ ತಲೆನೋವು ಉಂಟಾಗುತ್ತಿದ್ದರೆ ಹುಳಿ ದಾಳಿಂಬೆ ಹಣ್ಣಿನ ರಸಕ್ಕೆ ಜೇನುತುಪ್ಪವನ್ನು ಬೆರೆಸಿ, ಒಂದೆರಡು ವಾರಗಳ ಕಾಲ ಸೇವಿಸುತ್ತಿದ್ದರೆ ಗುಣ ಮುಖವಾಗುತ್ತದೆ.

* ಹಸುವಿನ ತುಪ್ಪದಲ್ಲಿ ಸ್ವಲ್ಪ ಬೆಲ್ಲ ಬೆರೆಸಿ, ಬರಿಹೊಟ್ಟೆಯಲ್ಲಿ ಮೂರು-ನಾಲ್ಕು ದಿನಗಳ ಕಾಲ ತಿನ್ನುತ್ತಿದ್ದರೆ ಅರ್ಧ ತಲೆನೋವು ನಿವಾರಣೆಯಾಗುತ್ತದೆ.

* ಬಾರ್ಲಿಗಂಜಿ ಕುಡಿಯುತ್ತಿದ್ದರೆ ತಲೆ ನೋವಿನ ಸಮಸ್ಯೆಗೆ ರಾಮಬಾಣ.

* ಎಳೆಯ ಬೇವಿನೆಲೆಗಳನ್ನು ರಸ ತೆಗೆದು, ಪ್ರತಿದಿನ ಒಂದೆರಡು ಚಮಚ ಸೇವಿಸುತ್ತಿದ್ದರೆ ತಲೆನೋವಿಗೆ ದಿವ್ಯ ಔಷಧಿಯಾಗಿದೆ.

* ಕಿರು ನೆಲ್ಲಿಕಾಯಿಗೆ ಉಪ್ಪು ಸೇವಿಸಿದರೆ ಅರ್ಧಭಾಗ ತಲೆನೋವು ಹಾಗೂ ತಲೆ ಸುತ್ತುವಿಕೆ ಶಮನವಾಗುತ್ತದೆ.

* ಅರ್ಧ ತಲೆನೋವು ಸಮಸ್ಯೆಯಿರುವವರು ಸೇಬಿನ ಹೋಳುಗಳಿಗೆ ಉಪ್ಪು ಬೆರೆಸಿ ತಿಂದರೆ ಪರಿಣಾಮಕಾರಿಯಾದ ಔಷಧವಾಗಿದೆ.

* ಕೆಂಪಕ್ಕಿ ಅನ್ನಕ್ಕೆ ಮೊಸರು ಹಾಕಿಕೊಂಡು ತಿನ್ನುವ ಅಭ್ಯಾಸ ಬೆಳೆಸಿಕೊಂಡರೆ ತಲೆ ನೋವಿನ ಸಮಸ್ಯೆಯು ಬಾಧಿಸುವುದಿಲ್ಲ.

* ಈರುಳ್ಳಿಯನ್ನು ಸೇವಿಸುತ್ತಿದ್ದರೆ ತಲೆ ನೋವು ಸಮಸ್ಯೆಯು ಕಾಡುವುದಿಲ್ಲ.

* ನುಗ್ಗೆಸೊಪ್ಪಿನ ರಸದಲ್ಲಿ ಕರಿಮೆಣಸಿನ ಪುಡಿಯನ್ನು ಸೇರಿಸಿ, ಇದನ್ನು ಹಣೆಯ ಮೇಲೆ ಲೇಪಿಸಿಕೊಂಡರೆ ತಲೆನೋವು ದೂರವಾಗುತ್ತದೆ.

* ಪಿತ್ತದಿಂದಾಗಿ ತಲೆನೋವು ಶುರುವಾಗಿದ್ದರೆ, ಒಂದು ಲೋಟ ಚಹಾಕ್ಕೆ ಒಂದು ಚಮಚ ನಿಂಬೆ ಹಣ್ಣಿನ ರಸವನ್ನು ಸೇರಿಸಿ ಕುಡಿದರೆ ನಿವಾರಣೆಯಾಗುತ್ತದೆ.

ಇದನ್ನೂ ಓದಿ: ಪೌಷ್ಟಿಕಾಂಶಯುಕ್ತ ಈ ಬೇಳೆಕಾಳುಗಳು ಆರೋಗ್ಯ ವೃದ್ಧಿಗೆ ಅಗತ್ಯ

* ಏಲಕ್ಕಿ ಪುಡಿ ಬೆರೆಸಿದ ನಿಂಬೆಹಣ್ಣಿನ ಪಾನಕವನ್ನು ಸೇವಿಸುತ್ತಿದ್ದರೆ ತಲೆ ಸುತ್ತುವುದು ನಿಂತು ಹೋಗುತ್ತದೆ.

* ಕೊತ್ತುಂಬರಿ ಬೀಜದ ಕಷಾಯ ಮಾಡಿ ಅದಕ್ಕೆ ಸ್ವಲ್ಪ ಪ್ರಮಾಣದಲ್ಲಿ ಸಕ್ಕರೆ ಬೆರೆಸ ಕುಡಿಯುವುದರಿಂದ ತಲೆ ನೋವಿನ ಜೊತೆಗೆ ತಲೆಸುತ್ತುವಿಕೆ ಸಮಸ್ಯೆಯಿದ್ದರೆ ನಿವಾರಣೆಯಾಗುತ್ತದೆ.

* ನುಗ್ಗೆಸೊಪ್ಪನ್ನು ಬೇಯಿಸಿ ತೆಗೆದ ನೀರಿಗೆ ನಿಂಬೆರಸವನ್ನು ಬೆರೆಸಿ ಒಂದು ವಾರಗಳ ಕಾಲ ಕುಡಿಯುವುದರಿಂದ ತಲೆನೋವು ದೂರವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?