AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Artificial sweeteners: ಕೃತಕ ಸಿಹಿಕಾರಕ ನಿಯೋಟೇಮ್ ಕರುಳಿನ ಆರೋಗ್ಯಕ್ಕೆ ಹಾನಿಕಾರಕ!

ಸಿಹಿತಿಂಡಿಗಳಲ್ಲಿ ಸಕ್ಕರೆಗೆ ಪರ್ಯಾಯವಾಗಿ ಕೃತಕ ಸಿಹಿಕಾರಕ ಉತ್ಪನ್ನಗಳ ಬಳಕೆ ಹೆಚ್ಚಾಗಿದೆ. ಇತ್ತೀಚೆಗಿನ ದಿನಗಳಲ್ಲಿ ಸಿಹಿ ತಿಂಡಿಗಳು, ಐಸ್ ಕ್ರೀಮ್ ಹಾಗೂ ಕೇಕ್ ಗಳಲ್ಲೂ ಕೃತಕ ಸಿಹಿಕಾರಕ ಉತ್ಪನ್ನಗಳು ಗ್ರಾಹಕರನ್ನು ಆಕರ್ಷಸುತ್ತಿದೆ ಆದರೆ, ಕೃತಕ ಸಿಹಿಕಾರಕವಾಗಿರುವ ನಿಯೋಟೇಮ್ ಕರುಳಿನ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ಆಘಾತಕಾರಿ ಸುದ್ದಿಯೊಂದು ಸಂಶೋಧನೆಯಿಂದ ಹೊರ ಬಿದ್ದಿದೆ.

Artificial sweeteners: ಕೃತಕ ಸಿಹಿಕಾರಕ ನಿಯೋಟೇಮ್ ಕರುಳಿನ ಆರೋಗ್ಯಕ್ಕೆ ಹಾನಿಕಾರಕ!
ಸಾಯಿನಂದಾ
| Edited By: |

Updated on: Apr 26, 2024 | 5:19 PM

Share

ಬೇಕರಿಯ ಸಿಹಿ ತಿಂಡಿಗಳಲ್ಲೂ ಹೆಚ್ಚಾಗಿ ಕೃತಕ ಸಿಹಿಕಾರಕಗಳನ್ನು ಬಳಸಲಾಗುತ್ತದೆ. ಈ ಸಿಹಿಕಾರಕಗಳು ತಿನಿಸುಗಳ ರುಚಿಯನ್ನು ಹೆಚ್ಚಿಸುತ್ತದೆಯಾದರೂ ಆರೋಗ್ಯಕ್ಕೆ ಅಪಾಯಕಾರಿ ಎನ್ನುವುದು ಅನೇಕರಿಗೆ ತಿಳಿದಿಲ್ಲ. ಆದರೆ ಇದೀಗ ಹೊಸ ಸಂಶೋಧನೆಯ ಪ್ರಕಾರ, ಕೃತಕ ಸಿಹಿಕಾರಕವಾದ ನಿಯೋಟೇಮ್ ಕರುಳಿಗೆ ಹಾನಿ ಮಾಡುತ್ತದೆ ಹಾಗೂ ಕರುಳಿನ ಕಾಯಿಲೆಗಳನ್ನು ದಾರಿ ಮಾಡಿಕೊಡುತ್ತವೆ ಎನ್ನುವುದು ತಿಳಿದು ಬಂದಿದೆ.

ಸಹಜವಾಗಿ ಸಿಹಿಕಾರಕವಾಗಿ ಈ ನಿಯೋಟೇಮನ್ನು ಕೇಕ್, ತಂಪು ಪಾನೀಯಗಳು ಮತ್ತು ಚೂಯಿಂಗ್ ಗಮ್ ಗಳಲ್ಲಿ ಬಳಸಲಾಗುತ್ತದೆ. ಆದರೆ ಫ್ರಾಂಟಿಯರ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಮತ್ತು ಆಂಗ್ಲಿಯಾ ರಸ್ಕಿನ್ ವಿಶ್ವವಿದ್ಯಾನಿಲಯದಲ್ಲಿ (ARU) ನಡೆಸಿದ ಅಧ್ಯಯನವು ನಿಯೋಟೇಮ್ ಮಾನವ ಕರುಳಿಗೆ ಹಾನಿ ಮಾಡುವ ಸಾಮರ್ಥ್ಯವನ್ನು ಹೊಂದಿದೆ.

ಇದನ್ನೂ ಓದಿ: ನೀವು ಸ್ಲಿಮ್ ಆಗಿ ಕಾಣಬೇಕೆ? ಈ ಪಾನೀಯ ಕುಡಿದರೆ ಬೊಜ್ಜು ಮಂಜಿನಂತೆ ಕರಗುತ್ತೆ

ನಿಯೋಟೇಮ್ ಆರೋಗ್ಯಕರ ಕರುಳಿನ ಬ್ಯಾಕ್ಟೀರಿಯಾದ ಸಮತೋಲನವನ್ನು ಅಲ್ಲೋಲಾ ಕಲ್ಲೋಲ್ಲ ಮಾಡುತ್ತದೆ. ಅದಲ್ಲದೇ ಕರುಳಿನ ಗೋಡೆಯನ್ನು ದುರ್ಬಲಗೊಳಿಸುತ್ತದೆ. ಜೀವಕೋಶಗಳ ಹಾನಿಗೂ ಕಾರಣವಾಗುತ್ತದೆ. ಕರುಳಿಗೆ ಆರೋಗ್ಯವನ್ನು ಕಾಪಾಡಲು ಪ್ರಯೋಜನಕಾರಿ ಕರುಳಿನ ಬ್ಯಾಕ್ಟೀರಿಯಾವನ್ನು ಹಾನಿಗೊಳಿಸುತ್ತದೆ ಎನ್ನುವುದು ಬಹಿರಂಗವಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್