AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies : ಔಷಧೀಯ ಗುಣಗಳ ಅಗರ ಈ ಅಶ್ವಗಂಧ, ಇದರ ಪ್ರಯೋಜನ ತಿಳಿದರೆ ಅಚ್ಚರಿ ಪಡ್ತೀರಾ!

ನಮ್ಮ ಹಿತ್ತಲಿನಲ್ಲಿ ಬೆಳೆಯುವ ಪ್ರತಿಯೊಂದು ಸಸ್ಯವು ಔಷಧೀಯ ಗುಣವನ್ನು ಹೊಂದಿದ್ದು, ಈ ಸಸ್ಯಗಳ ಪ್ರಯೋಜನಗಳು ಎಷ್ಟಿದೆ ಎನ್ನುವುದು ನಮ್ಮ ಹಿರಿಯರಿಗಷ್ಟೇ ಗೊತ್ತು. ಸಣ್ಣ ಪುಟ್ಟ ಕಾಯಿಲೆಗಳು ಬಂದಾಗ ಮೊದಲು ಹೋಗುತ್ತಿದ್ದದ್ದೇ ಈ ಹಿತ್ತಲಿಗೆ. ಇಲ್ಲಿ ಸಿಗುವ ಸಸ್ಯಗಳಿಂದ ಔಷಧವನ್ನು ತಯಾರಿಸಿ ಆರೋಗ್ಯ ಸಮಸ್ಯೆಯಿಂದ ಮುಕ್ತಿ ಕಾಣುತ್ತಿದ್ದರು. ಇಂತಹ ಔಷಧೀಯ ಸಸ್ಯಗಳಲ್ಲಿ ಅಶ್ವಗಂಧ ಕೂಡ ಒಂದಾಗಿದ್ದು, ಸರ್ವರೋಗಗಳಿಗೂ ರಾಮಬಾಣವಾಗಿದೆ.

Home Remedies : ಔಷಧೀಯ ಗುಣಗಳ ಅಗರ ಈ ಅಶ್ವಗಂಧ, ಇದರ ಪ್ರಯೋಜನ ತಿಳಿದರೆ ಅಚ್ಚರಿ ಪಡ್ತೀರಾ!
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 09, 2024 | 4:49 PM

ಆಯುರ್ವೇದದಲ್ಲಿ ಔಷಧಗಳ ತಯಾರಿಕೆಯಲ್ಲಿ ಹೇರಳವಾಗಿ ಬಳಸುವ ಅಶ್ವಗಂಧ ಎಲ್ಲಾ ತೆರೆನಾದ ಕಾಯಿಲೆಗಳಿಗೆ ಮನೆ ಮದ್ದಾಗಿದೆ. ಇದರ ಬೇರು, ತೊಗಟೆ, ಬೀಜ ಹಾಗೂ ಹಣ್ಣುಗಳಲ್ಲಿ ಔಷಧೀಯ ಗುಣವು ಹೇರಳವಾಗಿದೆ. ಹಿರೇಮದ್ದು ಎನ್ನುವ ಹೆಸರಿನಿಂದ ನಮ್ಮ ಹಿರಿಯರು ಕರೆಯುತ್ತಿದ್ದಾರೆ. ಅಶ್ವಗಂಧ ಗಿಡ ಮೂಲಿಕೆಯಲ್ಲಿ ಆರೋಗ್ಯ ಪ್ರಯೋಜನಗಳು ಹಲವಾರಿದ್ದು, ಒಮ್ಮೆ ಇದರ ಗುಣವನ್ನರಿತರೆ ಈ ಮನೆ ಮದ್ದಿನಿಂದಲೇ ಆರೋಗ್ಯವನ್ನು ಕಾಪಾಡುತ್ತೀರಿ.

  • ಅಶ್ವಗಂಧವನ್ನು ಹಾಲಿನಲ್ಲಿ ಬೇಯಿಸಿ ಒಣಗಿಸಿ ಪುಡಿ ಮಾಡಿಟ್ಟುಕೊಂಡು, ಈ ಪುಡಿಯನ್ನು ಹಾಲು ಮತ್ತು ಜೇನುತುಪ್ಪದೊಂದಿಗೆ ಸೇವಿಸಿದರೆ ಬೆನ್ನುನೋವಿನ ಸಮಸ್ಯೆಯೂ ಗುಣಮುಖವಾಗುತ್ತದೆ.
  • ಅಶ್ವಗಂಧದ ಬೇರನ್ನು ಕುಟ್ಟಿ ಪುಡಿ ಮಾಡಿ ಹಾಲಿನಲ್ಲಿ ಅಥವಾ ಜೇನು ತುಪ್ಪದಲ್ಲಿ ಬೆರೆಸಿ ಸೇವಿಸಿದರೆ ರಕ್ತ ಹೀನತೆ ಸಮಸ್ಯೆಯೂ ದೂರವಾಗುತ್ತದೆ.
  • ಸಮಪ್ರಮಾಣದಲ್ಲಿ ಅಶ್ವಗಂಧ ಮತ್ತು ಶತಾವರಿ ತೆಗೆದುಕೊಂಡು ಕಷಾಯ ಮಾಡಿ, ಇದಕ್ಕೆ ಹಾಲು ಬೆರೆಸಿ ಕುಡಿಯುವುದರಿಂದ ಲೈಂಗಿಕ ಸಮಸ್ಯೆಗೆ ನಿವಾರಣೆಯಾಗುತ್ತದೆ.
  •  ಅಶ್ವಗಂಧದ ಪುಡಿಯನ್ನು ಹಾಲಿಗೆ ಬೆರೆಸಿ ದಿನಕೆರಡು ಬಾರಿ ಸೇವಿಸಿದರೆ ಲೈಂಗಿಕ ದೌರ್ಬಲ್ಯಕ್ಕೆ ಉತ್ತಮ ಮನೆ ಮದ್ದು.
  • ಒಂದು ಚಮಚ ಅಶ್ವಗಂಧ ಪುಡಿಯನ್ನು ಹಾಲಿನಲ್ಲಿ ಬೆರೆಸಿ ಬೆಳಗ್ಗೆ ಸಂಜೆ ಸೇವಿಸುವುದರಿಂದ ಮಹಿಳೆಯರಲ್ಲಿ ಮುಟ್ಟು ನಿಲ್ಲುವ ಸಮಯದಲ್ಲಿ ಎದುರಾಗುವ ತೊಂದರೆಗಳು ಶಮನವಾಗುತ್ತದೆ.
  • ಅಶ್ವಗಂಧದ ಕಷಾಯವನ್ನು ನಿಯಮಿತವಾಗಿ ಸೇವನೆ ಮಾಡುತ್ತಿದ್ದರೆ ಜೀರ್ಣ ಕ್ರಿಯೆಗೆ ಸಂಬಂಧ ಪಟ್ಟ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ.
  • ಅಶ್ವಗಂಧದ ಬೇರನ್ನು ನೆಲ್ಲಿಕಾಯಿ ರಸದಲ್ಲಿ ಕಲಸಿ, ತುಪ್ಪ ಮತ್ತು ಜೇನುತುಪ್ಪವನ್ನು ಸಮ ಪ್ರಮಾಣದಲ್ಲಿ ಸೇವನೆ ಮಾಡಿದರೆ ಕಣ್ಣಿನ ದೋಷಗಳು ದೂರವಾಗುತ್ತದೆ.
  • ಖಿನ್ನತೆಯಿಂದ ಬಳಲುತ್ತಿರುವವರು ಅಶ್ವಗಂಧದ ಚೂರ್ಣ, ಲೋದ್ರದ ಚಕ್ಕೆ ಮತ್ತು ನೆಲಗುಂಬಳದ ಗಡ್ಡೆಯ ಮಿಶ್ರಣವನ್ನು ತಯಾರಿಸಿಕೊಳ್ಳಿ. ದಿನವು ಒಂದು ಲೋಟ ಹಾಲಿಗೆ ಇದನ್ನು ಸ್ವಲ್ಪ ಪ್ರಮಾಣದಲ್ಲಿ ಬೆರೆಸಿ ಕುಡಿದರೆ ಕಾಡುವ ಈ ಎಲ್ಲಾ ಸಮಸ್ಯೆಯೂ ಕಡಿಮೆಯಾಗುತ್ತದೆ.
  • ನಿದ್ದೆ ಸಮಸ್ಯೆಯಿದ್ದರೆ ಈ ಅಶ್ವಗಂಧದ ಪುಡಿಯನ್ನು ಹಾಲಿನೊಂದಿಗೆ ಸೇರಿಸಿ ಕುಡಿದರೆ ಈ ಕಾಯಿಲೆಯೂ ಗುಣಮುಖವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ