AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Astro Tips For Money: ಮನೆಯಲ್ಲಿ ಆರ್ಥಿಕ ಸಮಸ್ಯೆ ಕಾಡುತ್ತಿದೆಯಾ? ಲಕ್ಷ್ಮಿ ಕೃಪೆಗಾಗಿ ಹೀಗೆ ಮಾಡಿ

Vastu Tips: ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಸ್ಫಟಿಕದ ತಟ್ಟೆಯಲ್ಲಿ ಆಮೆಯನ್ನು ಇಟ್ಟುಕೊಳ್ಳುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಇದು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ನಕಾರಾತ್ಮಕ ಶಕ್ತಿಯೂ ದೂರವಾಗುತ್ತದೆ.

Astro Tips For Money: ಮನೆಯಲ್ಲಿ ಆರ್ಥಿಕ ಸಮಸ್ಯೆ ಕಾಡುತ್ತಿದೆಯಾ? ಲಕ್ಷ್ಮಿ ಕೃಪೆಗಾಗಿ ಹೀಗೆ ಮಾಡಿ
ಮನೆಯಲ್ಲಿ ಆರ್ಥಿಕ ಸಮಸ್ಯೆ ಕಾಡುತ್ತಿದೆಯಾ? ಲಕ್ಷ್ಮಿ ಕೃಪೆಗಾಗಿ ಹೀಗೆ ಮಾಡಿ
ಸಾಧು ಶ್ರೀನಾಥ್​
|

Updated on:Feb 15, 2024 | 10:25 AM

Share

ಜ್ಯೋತಿಷ್ಯ ಮತ್ತು ವಾಸ್ತು ವಿಜ್ಞಾನ ಎರಡರಲ್ಲೂ ಆಮೆಯನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ. ಆಮೆ ವಿಷ್ಣುವಿಗೆ ಸಂಬಂಧಿಸಿದೆ. ನಂಬಿಕೆಗಳ ಪ್ರಕಾರ ವಿಷ್ಣು ಕೂರ್ಮದ ರೂಪದಲ್ಲಿ ಅವತರಿಸಿದನು. ಆದ್ದರಿಂದಲೇ ಆಮೆಯಿರುವ ಮನೆಯಲ್ಲಿ (Home) ಲಕ್ಷ್ಮೀದೇವಿಯೂ ನೆಲೆಸಿದ್ದಾಳೆ ಎಂದು ಹೇಳಲಾಗುತ್ತದೆ. ಆಮೆಯನ್ನು (Tortoise) ಲಕ್ಷ್ಮಿ ದೇವಿಗೆ ಬಹಳ ಪ್ರಿಯವೆಂದು ಪರಿಗಣಿಸಲಾಗಿದೆ. ಅದನ್ನು ಮನೆಯಲ್ಲಿ ಇಡುವುದು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಹಾಗಾಗಿ ಮನೆಯಲ್ಲಿ ತಾಮ್ರದ ಅಥವಾ ಯಾವುದೇ ಲೋಹದ ತಟ್ಟೆಯಲ್ಲಿ ಆಮೆಯ ವಿಗ್ರಹವನ್ನು ಇಡಬಹುದು. ಹೀಗೆ ಮಾಡಿದರೆ ಯಾವ ರಾಶಿಯವರು ಯಾವ ದಿನ ಎಂತಹ ಅದೃಷ್ಟವನ್ನು ಹೊಂದಿರುತ್ತಾರೆ ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ತಿಳಿದುಕೊಳ್ಳೋಣ.. (Astrology, Vastu Tips)

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಲೋಹದಿಂದ ಮಾಡಿದ ಆಮೆಯನ್ನು ಮನೆಯಲ್ಲಿ ಇಟ್ಟುಕೊಂಡರೆ ಅದು ನಿಮ್ಮ ಇಚ್ಛೆಯನ್ನು ಪೂರೈಸುತ್ತದೆ. ಆಮೆಯನ್ನು ಉತ್ತರ ದಿಕ್ಕಿನಲ್ಲಿ ಇಡಿ. ಹೀಗೆ ಮಾಡುವುದರಿಂದ ನಿಮ್ಮ ಇಷ್ಟಾರ್ಥ ಶೀಘ್ರದಲ್ಲೇ ಈಡೇರುತ್ತದೆ ಎಂಬ ನಂಬಿಕೆ ಇದೆ.

Also Read: ಹಣಕಾಸಿನ ಸಮಸ್ಯೆ ಕಾಡುತ್ತಿದೆಯೇ? ಲಕ್ಷ್ಮಿ ಕಟಾಕ್ಷಕ್ಕಾಗಿ ಪ್ರತಿ ದಿನ ಈ ಕೆಲಸಗಳನ್ನು ಮಾಡಿ ನೋಡಿ

ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಅಥವಾ ತೊಂದರೆಯನ್ನು ಎದುರಿಸುತ್ತಿದ್ದರೆ, ನಿಮ್ಮ ಮನೆಯಲ್ಲಿ ಸ್ಪಟಿಕದ ತಟ್ಟೆಯನ್ನು ಆಮೆಯನ್ನು ಇಡಿ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಸ್ಫಟಿಕದ ತಟ್ಟೆಯಲ್ಲಿ ಆಮೆಯನ್ನು ಇಟ್ಟುಕೊಳ್ಳುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಇದು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ನಕಾರಾತ್ಮಕ ಶಕ್ತಿಯೂ ದೂರವಾಗುತ್ತದೆ.

ವಾಸ್ತು ಪ್ರಕಾರ ವಿದ್ಯಾರ್ಥಿಗಳು ಅಧ್ಯಯನದಲ್ಲಿ ಆಸಕ್ತಿ ಹೊಂದಿಲ್ಲದಿದ್ದರೆ ಮತ್ತು ಅಧ್ಯಯನ ಮಾಡುವಾಗ ತಮ್ಮ ಮನಸ್ಸಿನ ಮೇಲೆ ಕೇಂದ್ರೀಕರಿಸಲು ಬಯಸಿದರೆ, ಅಂತಹ ವಿದ್ಯಾರ್ಥಿಗಳು ಈ ಲೋಹದಿಂದ ಮಾಡಿದ ಆಮೆಯನ್ನು ತಮ್ಮ ಅಧ್ಯಯನದ ಮೇಜಿನ ಮೇಲೆ ಇಡಬೇಕು. ಈ ರೀತಿ ಸಿದ್ಧಪಡಿಸಿದ ಆಮೆ ತಟ್ಟೆಯನ್ನು ಸ್ಟಡಿ ಟೇಬಲ್ ಮೇಲೆ ಇಡುವುದರಿಂದ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಅಧ್ಯಯನದ ಮೇಲೆ ಕೇಂದ್ರೀಕರಿಸುತ್ತಾರೆ ಎಂದು ನಂಬಲಾಗಿದೆ. ಈ ಪರಿಹಾರವು ನಿಮ್ಮನ್ನು ದೃಷ್ಟಿ ದೋಷದಿಂದಲೂ ರಕ್ಷಿಸುತ್ತದೆ.

Also Read: ವಿವಿಧ ರಾಶಿಯವರಿಗೆ ಸರಿಹೊಂದುವ ಉದ್ಯೋಗಾವಕಾಶಗಳು ಹೀಗಿವೆ ನೋಡಿ

ನೀವು ಹೊಸ ವ್ಯಾಪಾರ ಅಥವಾ ಹೊಸ ಉದ್ಯೋಗವನ್ನು ಪ್ರಾರಂಭಿಸುತ್ತಿದ್ದರೆ ನಿಮ್ಮ ಅಂಗಡಿ ಅಥವಾ ಕಚೇರಿಯಲ್ಲಿ ಬೆಳ್ಳಿ ಲೋಹದಿಂದ ಮಾಡಿದ ಆಮೆಯನ್ನು ಇರಿಸಿ. ಹೀಗೆ ಮಾಡುವುದರಿಂದ ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿ ದೇವಿಯು ಸ್ಥಿರವಾಗಿರುತ್ತಾಳೆ ಎಂದು ನಂಬಲಾಗಿದೆ.

ಲೋಹದಿಂದ ಮಾಡಿದ ಆಮೆ ಉಂಗುರ ಸಹ ವ್ಯಾಪಕ ಬಳಕೆಯಲ್ಲಿದೆ. ಈ ಉಂಗುರವು ತುಂಬಾ ಮಂಗಳಕರ ಫಲಿತಾಂಶಗಳನ್ನು ನೀಡುತ್ತದೆ ಎಂದು ನಂಬಲಾಗಿದೆ. ಅದಕ್ಕಾಗಿಯೇ ಹೆಚ್ಚಿನ ಜನರು ಬೆರಳಿಗೆ ಆಮೆಯ ಉಂಗುರ ಧರಿಸುತ್ತಾರೆ. ನಂಬಿಕೆಗಳ ಪ್ರಕಾರ, ಶುಕ್ರವಾರ ಅಥವಾ ಅಕ್ಷಯ ತೃತೀಯ, ಧನ್ ತೇರಸ್ ಅಥವಾ ದೀಪಾವಳಿ ಅಥವಾ ಪವಿತ್ರ ದಿನಗಳಲ್ಲಿ ಲೋಹದಿಂದ ಮಾಡಿದ ಆಮೆಯ ಉಂಗುರವನ್ನು ಖರೀದಿಸಿ, ಧರಿಸುವುದರಿಂದ ಲಕ್ಷ್ಮಿ ದೇವಿ ಆಶೀರ್ವಾದ ಮಾಡುತ್ತಾಳೆ ಎಂಬುದು ನಂಬಿಕೆ.

ಹೆಚ್ಚಿನ ಆಧ್ಯಾತ್ಮಿಕ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Published On - 10:22 am, Thu, 15 February 24

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್