Health Tips: ಅಪ್ಪಿ ತಪ್ಪಿಯೂ ಈ ಹಣ್ಣು ತಿಂದ ಕೂಡಲೇ ನೀರು ಕುಡಿಯಬೇಡಿ

ಹೆಚ್ಚಿನವರು ಆಹಾರ ಅಥವಾ ಊಟವನ್ನು ಸೇವಿಸಿದ ತಕ್ಷಣವೇ ನೀರನ್ನು ಕುಡಿಯುತ್ತಾರೆ. ಆಹಾರವನ್ನು ತಿಂದ ತಕ್ಷಣ ನೀರನ್ನು ಕುಡಿಯಬಾರದು ಎಂದು ಆರೋಗ್ಯ ತಜ್ಞರು ಸಲಹೆಯನ್ನು ನೀಡುತ್ತಾರೆ. ನಿಮಗೆ ಗೊತ್ತಾ ಕೇವಲ ಊಟ ಮಾಡಿದ ಬಳಿಕ ಮಾತ್ರವಲ್ಲ, ಈ ಕೆಲವೊಂದು ಹಣ್ಣುಗಳನ್ನು ತಿಂದ ತಕ್ಷಣವೇ ನೀರನ್ನು ಕುಡಿದರೆ ಹೊಟ್ಟೆಗೆ ಸಂಬಂಧಿ ಸಮಸ್ಯೆಗಳು ಭಾದಿಸಬಹುದು. ಹಾಗಾದರೆ ಯಾವ ಹಣ್ಣನ್ನು ತಿಂದ ಬಳಿಕ ನೀರು ಕುಡಿಯಬಾರದು ಎಂದು ಇಲ್ಲಿ ತಿಳಿಯೋಣ.

Health Tips: ಅಪ್ಪಿ ತಪ್ಪಿಯೂ ಈ ಹಣ್ಣು ತಿಂದ ಕೂಡಲೇ ನೀರು ಕುಡಿಯಬೇಡಿ
Follow us
| Updated By: ಅಕ್ಷತಾ ವರ್ಕಾಡಿ

Updated on: Aug 26, 2023 | 6:37 PM

ಹಣ್ಣುಗಳ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನೈಸರ್ಗಿಕ ಜೀವಸತ್ವಗಳು, ಖನಿಜಗಳು, ಪೋಷಕಾಂಶಗಳು ಹಣ್ಣಿನಲ್ಲಿ ಕಂಡುಬರುತ್ತವೆ. ಅದ್ದಕ್ಕಾಗಿಯೇ ವೈದ್ಯರು ಮತ್ತು ಆಹಾರ ತಜ್ಞರು ಪ್ರತಿನಿತ್ಯ ಹಣ್ಣುಗಳನ್ನು ತಿನ್ನಲು ಶಿಫಾರಸು ಮಾಡುತ್ತಾರೆ. ಹಣ್ಣುಗಳನ್ನು ಸೇವಿಸುವ ಮೂಲಕ ನೀವು ಆರೋಗ್ಯವನ್ನು ಸರಿಯಾದ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ಆದರೆ ಹಣ್ಣುಗಳನ್ನು ಸೇವಿಸಿದ ತಕ್ಷಣ ನೀರನ್ನು ಕುಡಿಯಲು ಹೋಗಬೇಡಿ. ಏಕೆಂದರೆ ಈ ಒಂದು ತಪ್ಪಿನಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇದಲ್ಲದೆ ನೀವು ಶೀತ ಮತ್ತು ಕೆಮ್ಮಿನಿಂದ ಕೂಡಾ ತೊಂದರೆಗೊಳಗಾಬಹುದು. ಹಾಗಾದರೆ ಯಾವ ಹಣ್ಣ ತಿಂದ ನಂತರ ನೀರು ಕುಡಿಯಬಾರದು ಎಂಬುದನ್ನು ನೋಡೋಣ.

ಈ  ಹಣ್ಣುಗಳನ್ನು ಸೇವಿಸಿದ ತಕ್ಷಣ ನೀರನ್ನು ಕುಡಿಯಬೇಡಿ:

ಸೇಬು:

ಸೇಬು ಆರೋಗ್ಯಕ್ಕೆ ವರದಾನ ಇದ್ದಂತೆ. ಇದು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದ್ದು, ಹಲವಾರು ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ. ಅಲ್ಲದೆ ಇದು ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಆದರೆ ಸೇಬು ತಿಂದ ತಕ್ಷಣ ನೀವೇನಾದರೂ ನೀರು ಕುಡಿದರೆ ಅದು ಜೀರ್ಣಕ್ರಿಯೆಯ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಗ್ಯಾಸ್ ಅಥವಾ ಅಜೀರ್ಣ ಸಮಸ್ಯೆ ಉಂಟಾಗುತ್ತದೆ.

ಬಾಳೆಹಣ್ಣು:

ಸಾಮಾನ್ಯವಾಗಿ ಹೆಚ್ಚಿನವರು ಪ್ರತಿನಿತ್ಯ ಬಾಳೆಹಣ್ಣು ತಿನ್ನಲು ಇಷ್ಟಪಡುತ್ತಾರೆ. ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ ಇತ್ಯಾದಿ ಪೋಷಕಾಂಶಗಳು ಇದರಲ್ಲಿ ಕಂಡುಬರುವುದರಿಂದ ಇದರ ಸೇವನೆಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಬಾಳೆಹಣ್ಣು ತಿಂದ ತಕ್ಷಣ ನೀರು ಕುಡಿಯುವುದು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ ದೇಹದಲ್ಲಿ ಇನ್ಸುಲಿನ್ ಪ್ರಮಾಣವು ಹೆಚ್ಚಾಗಬಹುದು. ಅದಕ್ಕಾಗಿಯೇ ಬಾಳೆಹಣ್ಣು ತಿಂದ ತಕ್ಷಣ ನೀರು ಕುಡಿಯಬೇಡಿ.

ದಾಳಿಂಬೆ:

ದಾಳಿಂಬೆ ಹಣ್ಣು ತಿನ್ನುವುದರಿಂದ ಅದ್ಭುತ ಆರೋಗ್ಯ ಪ್ರಯೋಜನಗಳು ನಮಗೆ ಲಭಿಸುತ್ತದೆ. ಹಾಗೂ ಈ ಹಣ್ಣು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಆದರೆ ಇದನ್ನು ತಿಂದ ಕೂಡಲೇ ನೀರನ್ನು ಕುಡಿಯಬಾರದು. ಹೀಗೆ ಮಾಡುವುದರಿಂದ ವಾಕರಿಕೆ, ಅಸಿಡಿಟಿ ಮತ್ತು ವಾಂತಿ ಬರಬಹುದು.

ಇದನ್ನು ಓದಿ: ಬೂದುಗುಂಬಳಕಾಯಿಯ ರಸದ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು ಇಲ್ಲಿವೆ

ಸಿಟ್ರಸ್ ಹಣ್ಣುಗಳು:

ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ನೆಲ್ಲಿಕಾಯಿ, ದ್ರಾಕ್ಷಿ ಇತ್ಯಾದಿ ಹಣ್ಣುಗಳನ್ನು ತಿಂದ ನಂತರ ನೀರು ಕುಡಿಯುವ ತಪ್ಪನ್ನು ಮಾಡಬೇಡಿ. ಹೀಗೆ ಮಾಡುವುದರಿಂದ ನಿಮ್ಮ ದೇಹದ ಪಿಹೆಚ್ ಮಟ್ಟವು ಹದಗೆಡುತ್ತದೆ ಮತ್ತು ಜೀರ್ಣಕ್ರಿಯೆ ಸಮಸ್ಯೆಯೂ ಉಂಟಾಗುತ್ತದೆ.

ನೇರಳೆ ಹಣ್ಣು:

ಮಧುಮೇಹ ರೋಗಿಗಳಿಗೆ ನೇರಳೆ ತುಂಬಾ ಪ್ರಯೋಜನಕಾರಿ ಹಣ್ಣು. ಅಲ್ಲದೆ ಇದರ ಬೀಜವೂ ಕೂಡ ಮಧುಮೇಹ ರೋಗಿಗಳಿಗೆ ಅತ್ಯುತ್ತಮ ಮನೆಮದ್ದಾಗಿದೆ. ನೀವೇನಾದರೂ ನೇರಳೆ ಹಣ್ಣನ್ನು ತಿಂದ ತಕ್ಷಣ ನೀರನ್ನು ಕುಡಿದರೆ ಕೆಮ್ಮು ಮತ್ತು ನೆಗಡಿ ಬರಬಹುದು. ಅದಕ್ಕಾಗಿ ಈ ಹಣ್ಣನ್ನು ತಿಂದ ತಕ್ಷಣ ನೀರು ಕುಡಿಯಬಾರದು.

ಕಲ್ಲಂಗಡಿ:

ಹೆಚ್ಚಾಗಿ ಜನರು ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಇದರಲ್ಲಿ ನೀರಿನಾಂಶ ಹೆಚ್ಚಿರುತ್ತದೆ. ನೀರಿನಾಂಶವಿರುವ ಈ ಹಣ್ಣುನ್ನು ತಿಂದ ಬಳಿಕ ನೀರು ಕುಡಿಯುವುದನ್ನು ತಪ್ಪಿಸಬೇಕು. ಇಲ್ಲದಿದ್ದರೆ ಜೀರ್ಣಕ್ರಿಯೆ ಸಮಸ್ಯೆ ಕಾಡಬಹುದು.

ಪೇರಳೆ:

ಪೇರಳೆ ಫೈಬರ್, ವಿಟಮಿನ್ ಎ ಮತ್ತು ಸಿ, ಪೋಲಿಕ್ ಆಮ್ಲ, ಪೊಟ್ಯಾಸಿಯಂನ ಉತ್ತಮ ಮೂಲವಾಗಿದೆ. ಇದನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಸಮಸ್ಯೆ ದೂರವಾಗುತ್ತದೆ. ಇದನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಸಂಬಂಧಿ ದೂರವಾಗುತ್ತದೆಯಾದರೂ ಇದನ್ನು ತಿಂದ ತಕ್ಷಣ ನೀರು ಕುಡಿದರೆ ಜೀರ್ಣಾಂಗ ವ್ಯವಸ್ಥೆ ಹದಗೆಡಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ