AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿ ಬೊಜ್ಜಿನ ಸಮಸ್ಯೆಯೇ? ತೂಕ ಇಳಿಸಿಕೊಳ್ಳಲು ಇಲ್ಲಿದೆ ಸಲಹೆಗಳು

ಅಧಿಕ ತೂಕ ಹೊಂದಿರುವವರು ಮತ್ತು ಮದ್ಯ ಸೇವಿಸುವ ಜನರು ಶೇ. 50 ರಷ್ಟು ಪಿತ್ತಜನಕಾಂಗದ ಅಪಾಯವನ್ನು ಎದುರಿಸಬೇಕಾಗುತ್ತದೆ. ಜತೆಗೆ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ ಎಂದು ಸಂಶೋಧನೆ ತಿಳಿಸಿದೆ.

ದೇಹದಲ್ಲಿ ಬೊಜ್ಜಿನ ಸಮಸ್ಯೆಯೇ? ತೂಕ ಇಳಿಸಿಕೊಳ್ಳಲು ಇಲ್ಲಿದೆ ಸಲಹೆಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 08, 2021 | 1:28 PM

Share

ಜೀವನ ಶೈಲಿಯ ಕೆಲವು ಬದಲಾವಣೆಯ ಮೂಲಕ ಸ್ಥೂಲಕಾಯತೆ ಮತ್ತು ಅಧಿಕ ತೂಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಅದರಲ್ಲಿಯೂ ಮುಖ್ಯವಾಗಿ ಬೊಜ್ಜು ಮತ್ತು ಮದ್ಯಪಾನ ಒಂದಕ್ಕೊಂದು ಯಾವ ರೀತಿ ಪರಿಣಾಮ ಬೀರಬಲ್ಲದು ಎಂಬ ಸಂಶೋಧನೆ ಕೂಡಾ ನಡೆದಿದೆ. ಅಂದರೆ ಅಧಿಕ ತೂಕ ಹೊಂದಿರುವ ಜನರು ಮದ್ಯಪಾನ ಸೇವಿಸಿದರೆ ಆರೋಗ್ಯಕ್ಕೆ ಯಾವ ರೀತಿಯಲ್ಲಿ ಪರಿಣಾಮ ಬೀರಬಲ್ಲದು ಎಂಬುದನ್ನು ಸಂಶೋಧನೆ ತಿಳಿಸಿದೆ.

ಆಲ್ಕೋಹಾಲ್ ಮತ್ತು ಬೊಜ್ಜು ಅಧಿಕ ತೂಕ ಅಥವಾ ಸ್ಥೂಲಕಾಯದ ಸಮಸ್ಯೆ ಹೊಂದಿರುವವರು ಅದರಲ್ಲಿಯೂ ಮುಖವಾಗಿ ಮದ್ಯ ಸೇವಿಸುವವರು ಯಕೃತ್ತಿನ ಖಾಯಿಲೆಯನ್ನು ಅನುಭವಿಸುತ್ತಾರೆ ಎಂದು ಆರೋಗ್ಯ ವಿಭಾಗದ ಹಿರಿಯ ಲೇಖಕರು ಹಾಗೂ ಸಂಶೊಧನಾ ಅಧ್ಯಯನದ ನಿರ್ದೇಶಕರಾದ ಪ್ರೊಫೆಸರ್ ಎಮ್ಯಾನುಯೆಲ್ ಸ್ಟಾಮಟಕಿಸ್ ಹೇಳಿದ್ದಾರೆ.ಈ ಕುರಿತಂತೆ ಟೈಮ್ಸ್ ನೌ ಸುದ್ದಿ ಮಾಧ್ಯಮ ವರದಿ ಮಾಡಿದೆ.

ಅಧಿಕ ತೂಕ ಹೊಂದಿರುವವರು ಮತ್ತು ಮದ್ಯ ಸೇವಿಸುವ ಜನರು ಶೇ. 50 ರಷ್ಟು ಪಿತ್ತಜನಕಾಂಗದ ಅಪಾಯವನ್ನು ಎದುರಿಸಬೇಕಾಗುತ್ತದೆ. ಜತೆಗೆ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ ಎಂದು ಸಂಶೋಧನೆ ತಿಳಿಸಿದೆ.

ಬೊಜ್ಜು ನಿವಾರಣೆಗೆ ಸಲಹೆಗಳು ಸಾಧ್ಯವಾದಷ್ಟು ಸಕ್ಕರೆ ಪದಾರ್ಥಗಳನ್ನು ಸೇವಿಸದಿರಿ. ಅತಿಯಾಗಿ ಸಿಹಿ ಪದಾರ್ಥ ಸೇವನೆಯು ಅನಾರೋಗ್ಯವನ್ನು ಉಂಟು ಮಾಡುತ್ತದೆ.

ದಿನನಿತ್ಯದ ದಿನಚರಿಯಲ್ಲಿ ವ್ಯಾಯಾಮ ಒಂದು ಭಾಗವಾಗಿರಲಿ. ಕನಿಷ್ಟ 30 ನಿಮಿಷಗಳ ಕಾಲ ನಿಯಮಿತವಾಗಿ ವ್ಯಾಯಾಮ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ಮತ್ತು ನೀರನ್ನು ಕುಡಿಯಿರಿ. ನಿಮ್ಮ ದೇಹವನ್ನು ಹೈಡ್ರೇಟ್ ಆಗಿರಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಕೇವಲ ತೂಕ ಕಳೆದುಕೊಳ್ಳುವ ಗುರಿ ಮಾತ್ರವಲ್ಲ. ನಿಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನವಿರಲಿ. ತೂಕ ಇಳಿಸಿಕೊಳ್ಳುವ ಸಲುವಾಗಿ ಆಹಾರವನ್ನು ತ್ಯಜಿಸುವ ನಿರ್ಧಾರ ಎಂದಿಗೂ ಮಾಡಬೇಡಿ. ಇದು ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಕುಂಠಿತಗೊಳಿಸುತ್ತದೆ.

ಇದನ್ನೂ ಓದಿ:

ಮದ್ಯಪಾನ ಏನು ಪರಿಣಾಮ ಬೀರುತ್ತದೆ? ಕುಡಿದ ಮೇಲೆ ದೇಹದೊಳಗೆ ಏನಾಗುತ್ತದೆ?

Women Health: ಮಹಿಳೆಯರೇ ಗಮನಿಸಿ! ಋತುಚಕ್ರದಲ್ಲಿ ಈ ಆಹಾರಗಳು ನಿಮ್ಮ ಹೊಟ್ಟೆ ನೋವನ್ನು ಹೆಚ್ಚಿಸುತ್ತದೆ

(Avoid the alcohol and lose weight health benefits check in kannada)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ