AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿ ಬೊಜ್ಜಿನ ಸಮಸ್ಯೆಯೇ? ತೂಕ ಇಳಿಸಿಕೊಳ್ಳಲು ಇಲ್ಲಿದೆ ಸಲಹೆಗಳು

ಅಧಿಕ ತೂಕ ಹೊಂದಿರುವವರು ಮತ್ತು ಮದ್ಯ ಸೇವಿಸುವ ಜನರು ಶೇ. 50 ರಷ್ಟು ಪಿತ್ತಜನಕಾಂಗದ ಅಪಾಯವನ್ನು ಎದುರಿಸಬೇಕಾಗುತ್ತದೆ. ಜತೆಗೆ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ ಎಂದು ಸಂಶೋಧನೆ ತಿಳಿಸಿದೆ.

ದೇಹದಲ್ಲಿ ಬೊಜ್ಜಿನ ಸಮಸ್ಯೆಯೇ? ತೂಕ ಇಳಿಸಿಕೊಳ್ಳಲು ಇಲ್ಲಿದೆ ಸಲಹೆಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 08, 2021 | 1:28 PM

Share

ಜೀವನ ಶೈಲಿಯ ಕೆಲವು ಬದಲಾವಣೆಯ ಮೂಲಕ ಸ್ಥೂಲಕಾಯತೆ ಮತ್ತು ಅಧಿಕ ತೂಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಅದರಲ್ಲಿಯೂ ಮುಖ್ಯವಾಗಿ ಬೊಜ್ಜು ಮತ್ತು ಮದ್ಯಪಾನ ಒಂದಕ್ಕೊಂದು ಯಾವ ರೀತಿ ಪರಿಣಾಮ ಬೀರಬಲ್ಲದು ಎಂಬ ಸಂಶೋಧನೆ ಕೂಡಾ ನಡೆದಿದೆ. ಅಂದರೆ ಅಧಿಕ ತೂಕ ಹೊಂದಿರುವ ಜನರು ಮದ್ಯಪಾನ ಸೇವಿಸಿದರೆ ಆರೋಗ್ಯಕ್ಕೆ ಯಾವ ರೀತಿಯಲ್ಲಿ ಪರಿಣಾಮ ಬೀರಬಲ್ಲದು ಎಂಬುದನ್ನು ಸಂಶೋಧನೆ ತಿಳಿಸಿದೆ.

ಆಲ್ಕೋಹಾಲ್ ಮತ್ತು ಬೊಜ್ಜು ಅಧಿಕ ತೂಕ ಅಥವಾ ಸ್ಥೂಲಕಾಯದ ಸಮಸ್ಯೆ ಹೊಂದಿರುವವರು ಅದರಲ್ಲಿಯೂ ಮುಖವಾಗಿ ಮದ್ಯ ಸೇವಿಸುವವರು ಯಕೃತ್ತಿನ ಖಾಯಿಲೆಯನ್ನು ಅನುಭವಿಸುತ್ತಾರೆ ಎಂದು ಆರೋಗ್ಯ ವಿಭಾಗದ ಹಿರಿಯ ಲೇಖಕರು ಹಾಗೂ ಸಂಶೊಧನಾ ಅಧ್ಯಯನದ ನಿರ್ದೇಶಕರಾದ ಪ್ರೊಫೆಸರ್ ಎಮ್ಯಾನುಯೆಲ್ ಸ್ಟಾಮಟಕಿಸ್ ಹೇಳಿದ್ದಾರೆ.ಈ ಕುರಿತಂತೆ ಟೈಮ್ಸ್ ನೌ ಸುದ್ದಿ ಮಾಧ್ಯಮ ವರದಿ ಮಾಡಿದೆ.

ಅಧಿಕ ತೂಕ ಹೊಂದಿರುವವರು ಮತ್ತು ಮದ್ಯ ಸೇವಿಸುವ ಜನರು ಶೇ. 50 ರಷ್ಟು ಪಿತ್ತಜನಕಾಂಗದ ಅಪಾಯವನ್ನು ಎದುರಿಸಬೇಕಾಗುತ್ತದೆ. ಜತೆಗೆ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ ಎಂದು ಸಂಶೋಧನೆ ತಿಳಿಸಿದೆ.

ಬೊಜ್ಜು ನಿವಾರಣೆಗೆ ಸಲಹೆಗಳು ಸಾಧ್ಯವಾದಷ್ಟು ಸಕ್ಕರೆ ಪದಾರ್ಥಗಳನ್ನು ಸೇವಿಸದಿರಿ. ಅತಿಯಾಗಿ ಸಿಹಿ ಪದಾರ್ಥ ಸೇವನೆಯು ಅನಾರೋಗ್ಯವನ್ನು ಉಂಟು ಮಾಡುತ್ತದೆ.

ದಿನನಿತ್ಯದ ದಿನಚರಿಯಲ್ಲಿ ವ್ಯಾಯಾಮ ಒಂದು ಭಾಗವಾಗಿರಲಿ. ಕನಿಷ್ಟ 30 ನಿಮಿಷಗಳ ಕಾಲ ನಿಯಮಿತವಾಗಿ ವ್ಯಾಯಾಮ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ಮತ್ತು ನೀರನ್ನು ಕುಡಿಯಿರಿ. ನಿಮ್ಮ ದೇಹವನ್ನು ಹೈಡ್ರೇಟ್ ಆಗಿರಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಕೇವಲ ತೂಕ ಕಳೆದುಕೊಳ್ಳುವ ಗುರಿ ಮಾತ್ರವಲ್ಲ. ನಿಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನವಿರಲಿ. ತೂಕ ಇಳಿಸಿಕೊಳ್ಳುವ ಸಲುವಾಗಿ ಆಹಾರವನ್ನು ತ್ಯಜಿಸುವ ನಿರ್ಧಾರ ಎಂದಿಗೂ ಮಾಡಬೇಡಿ. ಇದು ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಕುಂಠಿತಗೊಳಿಸುತ್ತದೆ.

ಇದನ್ನೂ ಓದಿ:

ಮದ್ಯಪಾನ ಏನು ಪರಿಣಾಮ ಬೀರುತ್ತದೆ? ಕುಡಿದ ಮೇಲೆ ದೇಹದೊಳಗೆ ಏನಾಗುತ್ತದೆ?

Women Health: ಮಹಿಳೆಯರೇ ಗಮನಿಸಿ! ಋತುಚಕ್ರದಲ್ಲಿ ಈ ಆಹಾರಗಳು ನಿಮ್ಮ ಹೊಟ್ಟೆ ನೋವನ್ನು ಹೆಚ್ಚಿಸುತ್ತದೆ

(Avoid the alcohol and lose weight health benefits check in kannada)

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!