AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pimple Problem : ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ರೆ, ಈ ಆಹಾರಗಳನ್ನು ಅಪ್ಪಿತಪ್ಪಿಯು ಸೇವಿಸಲೇಬೇಡಿ

ಹೆಣ್ಣು ಮಕ್ಕಳು ಸೌಂದರ್ಯಕ್ಕೆ ಹೆಚ್ಚು ಒತ್ತು ನೀಡುತ್ತಾರೆ. ಹೀಗಾಗಿ ಮುಖದಲ್ಲಿ ಒಂದೇ ಒಂದು ಮೊಡವೆ ಕಾಣಿಸಿಕೊಂಡರೂ ಸಹಿಸಿಕೊಳ್ಳಲಾರರು. ಕೆಲವರಿಗೆ ಮುಖದ ತುಂಬಾ ಮೊಡವೆಯಿದ್ದು ಮುಖದ ಸೌಂದರ್ಯವನ್ನು ಕುಂದುವಂತೆ ಮಾಡಿರುತ್ತದೆ. ಹೀಗಾಗಿ ಮಾರುಕಟ್ಟೆಯಲ್ಲಿ ಸಿಗುವ ನಾನಾ ರೀತಿಯ ಪ್ರಾಡಕ್ಟ್ ಗಳನ್ನು ಬಳಸಿದರೂ ಯಾವುದು ಕೂಡ ಪ್ರಯೋಜನಕ್ಕೆ ಬರುವುದೇ ಇಲ್ಲ. ಈ ಆಹಾರದಿಂದ ದೂರವಿದ್ದರೆ ಮೊಡವೆ ಸಮಸ್ಯೆಯನ್ನು ಸುಲಭವಾಗಿ ನಿವಾರಿಸಿಕೊಳ್ಳಬಹುದು.

Pimple Problem : ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ರೆ, ಈ ಆಹಾರಗಳನ್ನು ಅಪ್ಪಿತಪ್ಪಿಯು ಸೇವಿಸಲೇಬೇಡಿ
ಸಾಯಿನಂದಾ
| Edited By: |

Updated on: Jun 03, 2024 | 6:08 PM

Share

ಹೆಣ್ಣು ಸೌಂದರ್ಯ ಪ್ರಿಯೆ. ಹೀಗಾಗಿ ಅಂದವನ್ನು ಹೆಚ್ಚಿಸುವ ನಾನಾ ಪ್ರಾಡಕ್ಟ್ ಗಳನ್ನು ಬಳಸಿ ಪ್ರಯೋಗಗಳು ಮಾಡುತ್ತಲೇ ಇರುತ್ತಾರೆ. ಆದರೆ ಕೆಲವೊಮ್ಮೆ ಎಣ್ಣೆ ತ್ವಚೆ ಇರುವವರಲ್ಲಿ ಮುಖದ ಅಂದವು ಹಾಳಾಗುವುದೇ ಹೆಚ್ಚು. ಧೂಳು, ಬೆವರು ಹಾಗೂ ಮಾಲಿನ್ಯವು ಮುಖದ ಮೇಲೆ ದಾಳಿ ಮಾಡಿ ಮೊಡವೆ ಸಮಸ್ಯೆಯನ್ನು ದುಪ್ಪಾಟ್ಟಾಗಿಸುತ್ತದೆ. ಮೊಡವೆ ಹಾಗೂ ಅದರ ಕಲೆಗಳು ಮುಖ ಸೌಂದರ್ಯವನ್ನು ಹಾಳು ಮಾಡುವ ಕಾರಣ ಮನೆಯಲ್ಲೇ ಪರಿಹಾರ ಕಂಡುಕೊಳ್ಳುವುದು ಕಷ್ಟವೇನಲ್ಲ.

ಮೊಡವೆ ಸಮಸ್ಯೆಯಿರುವವರು ಈ ಆಹಾರಗಳಿಂದ ದೂರವಿರಿ

* ಚಹಾ ಮತ್ತು ಕಾಫಿ ಕುಡಿಯುವ ಅಭ್ಯಾಸವಿದ್ದರೆ ಅದನ್ನು ತಕ್ಷಣವೇ ನಿಲ್ಲಿಸುವುದು ಉತ್ತಮ. ಕಾಫಿಯಲ್ಲಿರುವ ಕೆಫೀನ್ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸಿ ಮೊಡವೆ ಸಮಸ್ಯೆಗೆ ಕಾರಣವಾಗುತ್ತದೆ.

* ಹಾಲಿನಲ್ಲಿ ಬೆಳವಣಿಗೆಯ ಹಾರ್ಮೋನ್‌ ಐಜಿಎಫ್‌-1 ಹಾಗೂ ಬೊವಿನ್‌ ಇರುವುದರಿಂದ ಚರ್ಮದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದೇ ಹೆಚ್ಚು. ಹೀಗಾಗಿ ಮುಖದ ಮೇಲೆ ಕೂದಲು ಹಾಗೂ ಮೊಡವೆಗಳಾಗುತ್ತದೆ. ಹಾಲಿನ ಸೇವನೆಯು ಮಿತವಾಗಿರಲಿ.

* ಅತಿಯಾದ ಉಪ್ಪಿನಾಂಶವಿರುವ ತಿಂಡಿಗಳ ಸೇವನೆಯು ಮೊಡವೆಗಳಾಗುವುದಕ್ಕೆ ಮುಖ್ಯ ಕಾರಣವಾಗಿದೆ. ಉಪ್ಪು ಚರ್ಮದ ಮೇಲೆ ಪ್ರಭಾವ ಬೀರುತ್ತದೆ. ಕಡಿಮೆ ಪ್ರಮಾಣದಲ್ಲಿ ಉಪ್ಪನ್ನು ತಿನ್ನುವ ಅಭ್ಯಾಸ ರೂಢಿಸಿಕೊಂಡರೆ ಮೊಡವೆ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.

ಇದನ್ನೂ ಓದಿ: ನಿಮ್ಮ ಮನೆಯ ಕನ್ನಡಿ ಫಳಫಳ ಹೊಳೆಯುವಂತೆ ಮಾಡುವುದೇಗೆ? ಈ ಟಿಪ್ಸ್ ಫಾಲೋ ಮಾಡಿ

* ಒಮೆಗಾ ಇರುವ ಆಹಾರಗಳಾದ ಸಂಸ್ಕರಿಸಿದ ಎಣ್ಣೆಗಳು, ಸ್ಪೋರ್ಟ್ಸ್‌ ಡ್ರಿಂಕ್‌ಗಳು, ಸಾಸ್‌ ಹಾಗೂ ಕೆಚಪ್‌ಗಳು, ಸಂಸ್ಕರಿಸಿದ ಮಾಂಸ, ಬೇಕ್ಡ್‌ ಆಹಾರಗಳ ಸೇವನೆಯಿಂದ ಮೊಡವೆಗಳು ಉಂಟಾಗಿ ಮುಖದ ಅಂದವು ಹಾಳಾಗುತ್ತವೆ. ಹೀಗಾಗಿ ಇದರ ಬಳಕೆ ಹಾಗೂ ಸೇವನೆಯು ಇತಿಮಿತಿಯಲ್ಲಿರಲಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್