AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayurveda beauty: ನಿಮ್ಮ ತ್ವಚೆ, ಕೂದಲಿಗೆ ರಕ್ಷಣೆ ನೀಡುತ್ತದೆ ಈ ಆಯುರ್ವೇದ ಉತ್ಪನ್ನಗಳು

ತ್ವಚೆಯನ್ನು ಆರೋಗ್ಯಕರವಾಗಿ ಕಾಪಡುವಲ್ಲಿ ಆಯುರ್ವೇದ ಸೌಂದರ್ಯ ಉತ್ಪನ್ನಗಳು ನಮ್ಮ ತ್ವಚೆಯ ಸೌಂದರ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ ನಮ್ಮ ತ್ವಚೆಯನ್ನು ಆರೋಗ್ಯಕರವಾಗಿ ಇರಿಸುತ್ತದೆ. ಇಂದು ಕೆಲವು ಆಯುರ್ವೇದ ಉತ್ಪನ್ನಗಳ ಬಗ್ಗೆ ನಿಮಗೆ ತಿಳಿಸಿಕೊಡುತ್ತೇವೆ. ಇದರ ಜತೆಗೆ ನಿಮ್ಮ ಆರೋಗ್ಯಕ್ಕೆ ಬೇಕಾದ ಎಲ್ಲ ರೀತಿಯ ಸಹಾಯವನ್ನು ಕೂಡ ಮಾಡುತ್ತದೆ. ಈ ಬಗ್ಗೆ ಇಲ್ಲಿದೆ ನೋಡಿ

Ayurveda beauty: ನಿಮ್ಮ ತ್ವಚೆ, ಕೂದಲಿಗೆ ರಕ್ಷಣೆ ನೀಡುತ್ತದೆ ಈ ಆಯುರ್ವೇದ ಉತ್ಪನ್ನಗಳು
ಸಾಂದರ್ಭಿಕ ಚಿತ್ರ Image Credit source: Getty Images
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 04, 2025 | 10:41 AM

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಯುರ್ವೇದ (Ayurveda )ಸೌಂದರ್ಯ ಉತ್ಪನ್ನಗಳ ಮೊರೆ ಹೋಗುತ್ತಿದ್ದಾರೆ. ಇದರಿಂದ ಆಯುರ್ವೇದ ಉತ್ಪನ್ನಗಳಿಗೂ ಹೆಚ್ಚಿನ ಬೇಡಿಕೆ ಇವೆ. ಆಯುರ್ವೇದ ಉತ್ಪನ್ನಗಳಲ್ಲಿ ಯಾವುದೇ ರೀತಿಯ ಕೆಮಿಕಲ್‌ಗಳ ಇಲ್ಲದ ಕಾರಣ, ತ್ವಚೆಯ ಹಾಗೂ ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಾಗಿ ಜನರು ಆಯುರ್ವೇದ ಉತ್ಪನ್ನಗಳನ್ನು ಬಳಸುತ್ತಾರೆ. ವಿವಿಧ ರೀತಿಯ ಫೇಸ್ ಕ್ರೀಮ್‌ಗಳಿಂದ ಹಿಡಿದು ಕೂದಲ ಆರೈಕೆಯ ಶಾಂಪೂ, ಎಣ್ಣೆಯವರೆಗೆ ಅನೇಕ ವಿಧದ ಆಯುರ್ವೇದ ಸೌಂದರ್ಯವರ್ಧಕ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಕೆಲವೊಂದನ್ನು ಸುಲಭವಾಗಿ ನಾವು ಮನೆಯಲ್ಲಿಯೇ ತಯಾರಿಸಿಕೊಳ್ಳಬಹುದು. ಕಪಿವಾ ಆಯುರ್ವೇದದ ರೀಸರ್ಚ್ ಮತ್ತು ಡೆವೆಲಪ್‌ಮೆಂಟ್‌ನ ಮುಖ್ಯಸ್ಥರಾದ ಡಾ. ಕೃತಿ ಸೋನಿ ಅವರು 5 ಆಯುರ್ವೇದ ಸೌಂದರ್ಯ ಉತ್ಪನ್ನಗಳ ಕುರಿತು ಸಲಹೆ ನೀಡಿದರು. ಇದರ ನಿಯಮಿತ ಬಳಕೆಯಿಂದ ನಿಮ್ಮ ತ್ವಚೆಯ ಸೌಂದರ್ಯವನ್ನು ಆರೋಗ್ಯಕರವಾಗಿ ವರ್ಧಿಸಬಹುದು.

ಭೃಂಗರಾಜ: ಗರುಗ, ಗರುಗದ ಸೊಪ್ಪು ಅಂತಲೂ ಕರೆಯಲ್ಪಡುವ ಭೃಂಗರಾಜ ಸಸಿಯು ಕೂದಲ ಆರೈಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಯಾವುದೇ ಆಯುರ್ವೇದ ಕೂದಲ ಉತ್ಪನ್ನಗಳಲ್ಲಿ ಈ ಭೃಂಗರಾಜ ಇದ್ದೇ ಇರುತ್ತದೆ. ಭೃಂಗರಾಜದ ಎಣ್ಣೆಯನ್ನು ತಲೆಗೆ ಹಚ್ಚಿಕೊಳ್ಳುವ ಮೂಲಕ ಕೂದಲ ಆರೋಗ್ಯವನ್ನು ಕಾಪಡಿಕೊಳ್ಳಬಹುದು.

ಉಬ್ಟಾನ್: ಉಬ್ಟಾನ್ ಎಂದರೆ ಗಿಡಮೂಲಿಕೆಗಳು, ಧಾನ್ಯಗಳು, ಅರಶಿನದ ಮಿಶ್ರಣದ ಪುಡಿಯಾಗಿದೆ. ಇದನ್ನು ಭಾರತದಲ್ಲಿ ನೈಸರ್ಗಿಕ ಸೌಂದರ್ಯವರ್ಧಕವಾಗಿ ಬಳಸಲಾಗುತ್ತದೆ. ಈ ಉಬ್ಟಾನ್ ಪುಡಿಯನ್ನು ಹಾಲು, ಜೇನುತುಪ್ಪ ಅಥವಾ ರೋಸ್‌ವಾಟರ್ ಸೇರಿಸಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಬೇಕು. ತ್ವಚೆಯ ಸೌಂದರ್ಯವನ್ನು ನೈಸರ್ಗಿಕ ವಿಧಾನದಲ್ಲಿ ಕಾಪಾಡಿಕೊಳ್ಳಲು ಉಬ್ಟಾನ್ ಪುಡಿಯನ್ನು ನಿಯಮಿತವಾಗಿ ಬಳಸಬೇಕು.

ಕುಂಕುಮಾದಿ ತುಪ್ಪದ ಬಾಡಿಲೋಷನ್: ಕುಂಕುಮಾದಿ ಬಾಡಿಲೋಷನ್ ನೈಸರ್ಗಿಕ ಪದಾರ್ಥಗಳಾದ ಕುಂಕುಮಾದಿ, ರಕ್ತಚಂದನ, ಬಾದಮಿ ಎಣ್ಣೆ ಇತ್ಯಾದಿಗಳನ್ನು ಒಳಗೊಂಡಿರುತ್ತದೆ. ಇದು ನಿಮ್ಮ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಯಾವುದೇ ಜಿಡ್ಡಿನಾಂಶ ಇಲ್ಲದಿರುವ ಕಾರಣ ದೈನದಿಂನ ಬಳಕೆಗೆ ಯೋಗ್ಯವಾಗಿದೆ. ಕಾಂತಿಯುತ ಚರ್ಮವನ್ನು ಕಾಪಾಡಿಕೊಳ್ಳಲು ಈ ಬಾಡಿಲೋಷನ್ ನಿಮಗೆ ಸಹಾಯ ಮಾಡುತ್ತದೆ.

ಇದನ್ನೂ ಓದಿ: Ayurveda Tips: ಚಳಿಗಾಲದಲ್ಲಿ ಕಿರಿಕಿರಿ ನೀಡುವ ಗಂಟಲು ನೋವಿಗೆ ಆಯುರ್ವೇದದಲ್ಲಿದೆ ಪರಿಹಾರ

ಕೂದಲು ಉದುರುವಿಕೆ ವಿರೋಧಿ ತುಳಸಿ ಎಣ್ಣೆ: ಇದು ಸಾಂಪ್ರದಾಯಿಯ ಆಯುರ್ವೇದ ಕೂದಲಿನ ಎಣ್ಣೆಯಾಗಿದ್ದು, ಇದು ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಬಲವಾದ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಇದರ ನಿಯಮಿತ ಬಳಕೆಯಿಂದ ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇದು ಕೂದಲ ಬೆಳವಣಿಗೆಯನ್ನು ಉತ್ತೇಜಿಸುವುದು ಮಾತ್ರವಲ್ಲದೆ ಕೂದಲಿಗೆ ಹೊಳಪನ್ನು ನೀಡುತ್ತದೆ.

ತುಳಸಿಯ ಮೊಡವೆ ವಿರೋಧಿ ಸೀರಮ್: ತುಳಸಿ ಮೊಡವೆ ವಿರೋಧಿ ಒಂದು ಆಯುರ್ವೇದ ಚರ್ಮದ ರಕ್ಷಣೆಯ ಉತ್ಪನ್ನವಾಗಿದ್ದು, ಮೊಡವೆಗಳ ಉಲ್ಬಣವನ್ನು ಕಡಿಮೆ ಮಾಡಲು ಮತ್ತು ಹೊಸ ಮೊಡವೆಗಳ ಬೆಳವಣಿಗೆಯನ್ನು ನಿಲ್ಲಿಸಲು ಸಹಾಯ ಮಾಡುತ್ತದೆ. ಈ ಸೀರಮ್‌ನಲ್ಲಿ ತುಳಸಿ, ಬೇವು, ಟೀ ಟ್ರೀ ಎಣ್ಣೆ ಮತ್ತು ಅಲೋವೆರಾದಂತಹ ನೈಸರ್ಗಿಕ ಪದಾರ್ಥಗಳಿವೆ. ತ್ವಚೆಯನ್ನು ಮೊಡವೆಗಳಿಂದ ರಕ್ಷಿಸಲು ಇದು ಉತ್ತಮ ಆಯುರ್ವೇದ ಉತ್ಪನ್ನವಾಗಿದೆ.

Published On - 4:06 pm, Wed, 26 March 25

IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?