AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಸರ್ಗಿಕವಾಗಿ ತೂಕ ಇಳಿಸಿಕೊಳ್ಳಲು ಇಲ್ಲಿವೆ ಆಯುರ್ವೇದ ಸಲಹೆಗಳು

ತೂಕ ಇಳಿಸಿಕೊಳ್ಳಲು ಕೆಲವು ಮಂದಿ ಜಿಮ್, ವರ್ಕೌಟ್ ಎಂದು ಹೋದರೆ, ಹಲವರು ಡಯಟ್ ಮಾಡುತ್ತಾರೆ, ಇನ್ನೂ ಕೆಲವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆಯನ್ನು ಪಡೆದುಕೊಂಡು ತೂಕ ಇಳಿಸಿಕೊಳ್ಳುತ್ತಿದ್ದಾರೆ. ಹಾಗಾದರೆ ನೈಸರ್ಗಿಕವಾಗಿ ತೂಕ ಇಳಿಕೆ ಮಾಡುವುದು ಹೇಗೆ, ಆಯುರ್ವೇದದ ಕೆಲವು ಸಲಹೆಗಳು ಇಲ್ಲಿವೆ.

ನೈಸರ್ಗಿಕವಾಗಿ ತೂಕ ಇಳಿಸಿಕೊಳ್ಳಲು ಇಲ್ಲಿವೆ ಆಯುರ್ವೇದ ಸಲಹೆಗಳು
ತೂಕ ಇಳಿಸಿಕೊಳ್ಳಲು ಸಲಹೆ
TV9 Web
| Updated By: ನಯನಾ ರಾಜೀವ್|

Updated on: May 06, 2022 | 11:33 AM

Share

ವೇಗವಾಗಿ ಓಡುತ್ತಿರುವ ಜಗತ್ತಿನಲ್ಲಿ ಫಾಸ್ಟ್​ಫುಡ್ ಕಲ್ಚರ್​ ಅಳವಡಿಕೆಯಿಂದಾಗಿ ಜನರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೇಣಿಸುತ್ತಿದೆ, ಉಬ್ಬಸ, ತೂಕ ಹೆಚ್ಚಳಹೃದಯ ಸಂಬಂಧಿ ಕಾಯಿಲೆಗಳು, ಮಧುಮೇಹದಂತಹ ತೊಂದರೆಗಳು ಜನರನ್ನು ಕಾಡುತ್ತಿದೆ. ಹಾಗೆಯೇ ತೂಕ ಇಳಿಸಿಕೊಳ್ಳಲು ಕೆಲವು ಮಂದಿ ಜಿಮ್, ವರ್ಕೌಟ್ ಎಂದು ಹೋದರೆ, ಹಲವರು ಡಯಟ್ ಮಾಡುತ್ತಾರೆ, ಇನ್ನೂ ಕೆಲವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆಯನ್ನು ಪಡೆದುಕೊಂಡು ತೂಕ ಇಳಿಸಿಕೊಳ್ಳುತ್ತಿದ್ದಾರೆ. ಹಾಗಾದರೆ ನೈಸರ್ಗಿಕವಾಗಿ ತೂಕ ಇಳಿಕೆ ಮಾಡುವುದು ಹೇಗೆ, ಆಯುರ್ವೇದದ ಕೆಲವು ಸಲಹೆಗಳು ಇಲ್ಲಿವೆ.

ಉಗುರು ಬೆಚ್ಚಗಿನ ನೀರು ಕುಡಿಯಿರಿ: ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಉತ್ತಮವಾಗುತ್ತದೆ. ಇದು ಕೊಬ್ಬನ್ನು ತ್ವರಿತವಾಗಿ ಕರಗಿಸಲು ಸಹಾಯ ಮಾಡುತ್ತದೆ. ಮತ್ತು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಅದರಲ್ಲೂ ವಿಶೇಷವಾಗಿ ಖಾಲಿ ಹೊಟ್ಟೆಯಲ್ಲಿ ಎದ್ದ ತಕ್ಷಣ ಬಿಸಿ ನೀರು ಕುಡಿಯುವುದು ದೇಹಕ್ಕೆ ಹಲವು ಆರೋಗ್ಯ ಲಾಭಗಳನ್ನು ನೀಡುತ್ತದೆ.

ದಾಲ್ಚಿನ್ನಿ : ಖಾಲಿ ಹೊಟ್ಟೆಯಲ್ಲಿ 1 ಚಮಚ ಜೇನುತುಪ್ಪದೊಂದಿಗೆ ಒಂದು ಚಿಟಿಕೆ ದಾಲ್ಚಿನ್ನಿ ಸೇವಿಸುವುದು ತೂಕ ಇಳಿಕೆಗೆ ಉತ್ತಮ. ನೈಸರ್ಗಿಕ ಮಸಾಲೆ ದಾಲ್ಚಿನ್ನಿ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ, ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ, ಕೊಲೆಸ್ಟ್ರಾಲ್ ಮತ್ತು ಕೊಬ್ಬನ್ನು ಕರಗಿಸುತ್ತದೆ.

ಗ್ರೀನ್ ಟೀ: 2010ರಲ್ಲಿ ಪ್ರಕಟವಾದ ಅಧ್ಯಯನವು ಕೆಫೀನ್ ಅಥವಾ ಕ್ಯಾಟೆಚಿನ್‌ಗಳನ್ನು ಒಳಗೊಂಡಿರುವ ಹಸಿರು ಚಹಾದ ಪೂರಕಗಳು ತೂಕ ನಷ್ಟದಲ್ಲಿ ಸಕಾರಾತ್ಮಕ ಪರಿಣಾಮವನ್ನು ಬೀರುತ್ತವೆ ಎಂದು ಹೇಳಿದೆ. ಇದು ದೇಹದ ಚಯಾಪಚಯವನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಸಹಾಯ ಮಾಡುತ್ತದೆ. ಇದು ಕ್ಯಾಟೆಚಿನ್ ಫ್ಲೇವನಾಯ್ಡ್ ಅನ್ನು ಹೊಂದಿದೆ, ಇದು ಉತ್ಕರ್ಷಣ ನಿರೋಧಕ ಮತ್ತು ಚಯಾಪಚಯವನ್ನು ಹೆಚ್ಚಿಸುತ್ತದೆ. ನಿಮ್ಮ ತೂಕ ಕಳೆದುಕೊಳ್ಳಲು ದಿನದಲ್ಲಿ ಒಂದು ಕಪ್ ಗ್ರೀನ್ ಟೀ ಸೇವನೆ ಸಾಕು.

ನಿಂಬೆ: ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರಿನಲ್ಲಿ ಒಂದು ಚಮಚ ನಿಂಬೆ ರಸ ಸೇವನೆ ತೂಕ ಇಳಿಕೆಗೆ ಸಹಕಾರಿಯಾಗಿದೆ. ನಿಂಬೆ ಅತ್ಯಂತ ಪ್ರಸಿದ್ಧವಾದ ನೈಸರ್ಗಿಕ ತೂಕ ನಷ್ಟದ ಮನೆ ಮದ್ದಾಗಿದೆ. ಆದರೆ ಕೀಲು ನೋವು ಮತ್ತು ಅಧಿಕ ಆಮ್ಲೀಯತೆಯಿರುವ ಜನರು ಇದರ ಸೇವನೆ ತಪ್ಪಿಸಬೇಕು.

ನೆಲ್ಲಿಕಾಯಿ: ಸ್ಥೂಲಕಾಯತೆ, ಥೈರಾಯ್ಡ್‌, ಮಧುಮೇಹ ಮತ್ತು ಮಲಬದ್ಧತೆಯ ಎಲ್ಲಾ ಅಸ್ವಸ್ಥತೆಗಳಿಗೆ ಸೂಕ್ತವಾದದ್ದು ನೆಲ್ಲಿಕಾಯಿ. ಇದರಲ್ಲಿರುವ ಹುಳಿ ಅಂಶ ನಿಮ್ಮ ಕೊಬ್ಬನ್ನು ತ್ವರಿತವಾಗಿ ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

ಕರಿಮೆಣಸು: ಬೆಳಗ್ಗೆ ನಿಂಬೆ ನೀರಿನೊಂದಿಗೆ ಒಂದು ಚಿಟಿಕೆ ಕರಿಮೆಣಸನ್ನು ಸಹ ಉಪಯೋಗಿಸಬಹುದು. ಇದು ನಿಮ್ಮ ತೂಕವನ್ನು ತ್ವರಿತವಾಗಿ ಕಳೆದುಕೊಳ್ಳಲು ಸಹಾಯ ಮಾಡುತ್ತದೆ

-ಜೇನು: ಜೇನು ತೂಕ ಇಳಿಕೆಯಲ್ಲಿ ಹೆಚ್ಚು ಜನಪ್ರಿಯ ಆಹಾರ ಪದಾರ್ಥ. ಇದು ಅನಗತ್ಯ ಕೊಬ್ಬನ್ನು ತೆಗೆದು ಹಾಕುತ್ತದೆ. ಆದರೆ ಇದನ್ನು ನೀವು ಎಂದಿಗೂ ಬಿಸಿ ನೀರಿನಲ್ಲಿ ಸೇವಿಸಬಾರದು. ಬದಲಿಗೆ ಉಗುರು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯಬೇಕು.

ತ್ರಿಫಲಾ: ಮಲಗುವ ವೇಳೆ ಬೆಚ್ಚಗಿನ ನೀರಿನ ಜೊತೆ ತ್ರಿಫಲಾ ಸೇವಿಸುವುದರಿಂದ ನಮ್ಮ ದೇಹದ ವಿಷವನ್ನು ಇದು ಹೊರಹಾಕುತ್ತದೆ. ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಶುದ್ಧಗೊಳಿಸುತ್ತದೆ, ಜೊತೆಗೆ ದೇಹವನ್ನು ಡಿಟಾಕ್ಸ್ ಮಾಡುತ್ತದೆ.

ಇವುಗಳ ಬಳಕೆ ಕಡಿಮೆ ಮಾಡಿ -ಸಕ್ಕರೆ -ಮೈದಾ -ಮದ್ಯಪಾನ -ಕಾಫಿ -ಕರಿದ ತಿಂಡಿಗಳು

ಜೀವನಶೈಲಿ, ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ