AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Banana Leaf: ಬಾಳೆ ಎಲೆಯ ಕಷಾಯದಿಂದ ಈ ರೋಗ ಮಾಯಾ

ಭಾರತದಲ್ಲಿ ಧಾರ್ಮಿಕವಾಗಿ ಬಾಳೆಎಲೆಗೆ ವಿಶೇಷವಾದ ಮಹತ್ವ ನೀಡಲಾಗಿದೆ. ಶುಭ ಸಮಾರಂಭ, ಹಬ್ಬ ಹರಿದಿನಗಳಲ್ಲಿ ಬಾಳೆ ಎಲೆಯು ಅವಶ್ಯಕವಾಗಿರಲೇ ಬೇಕು. ಇಂದಿಗೂ ಹಲವೆಡೆಯಲ್ಲಿ ಪ್ರತಿದಿನ ಬಾಳೆ ಎಲೆಯಲ್ಲಿ ಊಟ ಮಾಡುವ ಪದ್ಧತಿಯಿದೆ. ಕೆಲವೆಡೆಗಳಲ್ಲಿ ಈ ಪದ್ಧತಿಯನ್ನು ಹಬ್ಬ ಹರಿದಿನಗಳಲ್ಲಿ ಮಾತ್ರ ಕಾಣಬಹುದಾಗಿದೆ. ಆದರೆ ಈ ಎಲೆಗೆ ರೋಗಗಳನ್ನು ಗುಣಪಡಿಸುವ ಶಕ್ತಿಯಿದ್ದು, ಔಷಧಿ ಗುಣಗಳನ್ನು ಹೊಂದಿದೆ. ಹೀಗಾಗಿ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವ ಈ ಬಾಳೆಎಲೆಯು ತ್ವಚೆರಕ್ಷಣೆಯಲ್ಲಿ ಬಹುಮುಖ್ಯವಾಗಿದೆ.

Banana Leaf: ಬಾಳೆ ಎಲೆಯ ಕಷಾಯದಿಂದ ಈ ರೋಗ ಮಾಯಾ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Mar 05, 2024 | 10:09 AM

Share

ನಾವಿಂದು ಆಧುನಿಕ ಕಾಲಘಟ್ಟಕ್ಕೆ ತೆರೆದುಕೊಂಡಿದ್ದೇವೆ. ಹೀಗಾಗಿ ನಮ್ಮ ಹಿರಿಯರು ಮಾಡಿಕೊಂಡು ಬಂದಿರುವ ಆಚಾರ ವಿಚಾರಗಳನ್ನು ಪಾಲನೆ ಮಾಡುವುದನ್ನೇ ನಿಲ್ಲಿಸಿ ಬಿಟ್ಟಿದ್ದೇವೆ. ನಮ್ಮ ಅನುಕೂಲಕ್ಕೆ ತಕ್ಕಂತೆ ಆಚಾರ ವಿಚಾರಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದ್ದೇವೆ. ನಮ್ಮ ಹಿರಿಯರು ದಿನನಿತ್ಯ ಬಾಳೆ ಎಲೆಯಲ್ಲಿ ಊಟ ಮಾಡುವ ಅಭ್ಯಾಸವನ್ನು ಬೆಳೆಸಿಕೊಂಡಿದ್ದರು. ಆದರೆ ಪೂರ್ವಜರು ಜೀವನದಲ್ಲಿ ಅಳವಡಿಸಿಕೊಂಡ ಕೆಲವೊಂದು ಆಚರಣೆಗಳಿಂದ ಆರೋಗ್ಯಕ್ಕೆ ಪ್ರಯೋಜನಕಾರಿ ಅಂಶಗಳಿದ್ದವು ಎನ್ನುವುದನ್ನು ಮರೆಯುವಂತಿಲ್ಲ.

  • ಚಿಕ್ಕ ಗಾಯವಾಗಿದ್ದರೆ ಬಾಳೆ ಎಲೆಯ ರಸ ಹಚ್ಚುವುದರಿಂದ ಶೀಘ್ರವೇ ವಾಸಿಯಾಗುತ್ತದೆ.
  • ಒಂದು ಐಸ್ ತುಂಡನ್ನು ಬಾಳೆ ಎಲೆಯಲ್ಲಿ ಸುತ್ತಿ, ಮಸಾಜ್ ಮಾಡುವುದರಿಂದ ಒತ್ತಡ ಕಡಿಮೆಯಾಗಿ ಆರಾಮದಾಯಕ ಅನುಭವವಾಗುತ್ತದೆ.
  • ಚರ್ಮದ ಅಲರ್ಜಿಯಿರುವವರು ಬಾಳೆ ಎಲೆ ರಸ ಹಾಕುವುದರಿಂದ ಗುಣ ಮುಖವಾಗುತ್ತದೆ.
  • ಬಾಳೆ ಎಲೆಯ ಕಷಾಯವನ್ನು ದಿನಕ್ಕೆ ಒಂದು ಬಾರಿ ಕುಡಿಯುವುದರಿಂದ ಜ್ವರವೂ ಕಡಿಮೆಯಾಗುತ್ತದೆ.
  • ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ಜೀರ್ಣಕ್ರಿಯೆಯು ಸುಧಾರಿಸುತ್ತದೆ.
  • ಒಣಗಿದ ಬಾಳೆ ಎಲೆಯ ಸೇವನೆಯಿಂದ ರಕ್ತಸ್ರಾವದಿಂದ ಕೂಡಿದ ಭೇದಿಯು ನಿವಾರಣೆಯಾಗುತ್ತದೆ
  • ಬಾಳೆ ಎಲೆಯ ರಸವನ್ನು ತೆಗೆದು ಕೂದಲ ಬುಡಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯದ ಬಳಿಕ ಸ್ನಾನ ಮಾಡುವುದರಿಂದ ತಲೆ ಹೊಟ್ಟಿನ ಸಮಸ್ಯೆ ನಿವಾರಣೆಯಾಗಿ ಕೂದಲು ಸೊಂಪಾಗಿ ಬೆಳೆಯುತ್ತದೆ.
  • ಸುಟ್ಟ ಗಾಯಗಳಿದ್ದರೆ ಬಾಳೆ ಎಲೆಯನ್ನು ಶುಂಠಿ ಎಣ್ಣೆಯಲ್ಲಿ ಅದ್ದಿಕೊಂಡು ಗಾಯದ ಮೇಲೆ ಕಟ್ಟಿಕೊಂಡರೆ ಗಾಯವು ಬೇಗನೇ ಗುಣಮುಖವಾಗುತ್ತದೆ.
  • ಗರ್ಭಿಣಿಯರು ಬಾಳೆ ಎಲೆಯಲ್ಲಿ ಊಟ ಮಾಡುವ ಅಭ್ಯಾಸವನ್ನು ಬೆಳೆಸಿಕೊಂಡರೆ ಹುಟ್ಟುವ ಮಗುವಿನ ಆರೋಗ್ಯವು ಉತ್ತಮವಾಗಿರುತ್ತದೆ.
  • ಹಸಿ ಮೆಣಸಿನಕಾಯಿ ಗಿಡದ ಚಿಗುರಿನ ಎಲೆ, ದೊಡ್ಡ ಪತ್ರೆ ಎಲೆ ಮತ್ತು ಬಾಳೆ ಎಲೆಯ ರಸವನ್ನು ಮುಖದಲ್ಲಿರುವ ಕಲೆ, ತುರಿಕೆಯಂತಹ ಸಮಸ್ಯೆಗಳಿಗೆ ಹಚ್ಚುವುದರಿಂದ ಗುಣಮುಖವಾಗುತ್ತದೆ.
  • ಸೊಳ್ಳೆ ಕಚ್ಚಿ ಗುಳ್ಳೆಗಳಾಗಿದ್ದರೆ ಬಾಳೆ ಎಲೆಯ ರಸ, ಆಲೀವ್ ಎಣ್ಣೆ, ಮೇಣವನ್ನು ಸೇರಿಸಿ ಹಚ್ಚುವುದರಿಂದ ಗುಳ್ಳೆಗಳು ನಿವಾರಣೆಯಾಗುತ್ತದೆ.
  • ಬಾಳೆಎಲೆಯ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖದ ಕಾಂತಿಯು ಹೆಚ್ಚಾಗುತ್ತದೆ.

ಈ ಮನೆಮದ್ದು ಉಪಯೋಗಿಸುವ ಮುನ್ನ ತಜ್ಞರ ಸಲಹೆಯನ್ನು ಪಡೆಯುವುದು ಉತ್ತಮ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ