AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ, ಅದರಲ್ಲಿದೆ ಈ ಆರೋಗ್ಯ ಪ್ರಯೋಜನಗಳು

ನಮ್ಮ ಹಿರಿಯರು ತಮ್ಮ ದಿನ ನಿತ್ಯ ಬಳಸುವ ಪ್ರತಿಯೊಂದು ವಸ್ತುವಿನ ಉಪಯೋಗವನ್ನು ಬಲ್ಲವರಾಗಿದ್ದರು. ಹೀಗಾಗಿ ಅಕ್ಕಿ ತೊಳೆದ ನೀರನ್ನು ಚೆಲ್ಲುತ್ತಿರಲಿಲ್ಲ. ಈ ನೀರನ್ನು ಬಳಸುವ ಮೂಲಕ ಹಲವಾರು ಆರೋಗ್ಯ ವ್ಯಾಧಿಗಳನ್ನು ದೂರ ಮಾಡಿಕೊಳ್ಳುತ್ತಿದ್ದರು. ಆದರೆ ಎಷ್ಟೋ ಜನರಿಗೆ ಅಕ್ಕಿ ತೊಳೆದ ನೀರಿನ ಮಹತ್ವವೇ ತಿಳಿದಿಲ್ಲ.

ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ, ಅದರಲ್ಲಿದೆ ಈ ಆರೋಗ್ಯ ಪ್ರಯೋಜನಗಳು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Feb 19, 2024 | 2:59 PM

Share

ದಕ್ಷಿಣ ಭಾರತದಲ್ಲಿ ಬಹುತೇಕರ ದಿನ ನಿತ್ಯದ ಆಹಾರವೇ ಅನ್ನ. ದಿನದ ಮುರೊತ್ತು ಅಕ್ಕಿಯಿಂದ ಮಾಡಿದ ಅನ್ನವನ್ನು ಆಹಾರವಾಗಿ ಸೇವಿಸುತ್ತಾರೆ. ಹೀಗಾಗಿ ಅನ್ನ ಮಾಡುವಾಗ ಅಕ್ಕಿಯನ್ನು ಮೂರರಿಂದ ನಾಲ್ಕು ಬಾರಿ ತೊಳೆಯುವುದಿದೆ. ಆ ಬಳಿಕ ಅಕ್ಕಿ ನೀರನ್ನು ಚೆಲ್ಲುತ್ತಾರೆ. ಆದರೆ ಇದರಲ್ಲಿ ಪ್ರೋಟೀನ್, ವಿಟಮಿನ್, ಕ್ಯಾಲ್ಸಿಯಂ, ಆಂಟಿ ಆಕ್ಸಿಡೆಂಟ್ ಗಳು ಹೇರಳವಾಗಿದ್ದು , ಇದರಿಂದ ಆರೋಗ್ಯ ಲಾಭಗಳೇ ಅಧಿಕ. ಇದರ ಆರೋಗ್ಯ ಪ್ರಯೋಜನಗಳನ್ನು ಬಲ್ಲವರು ಈ ಅಕ್ಕಿ ನೀರನ್ನು ಖಂಡಿತವಾಗಿ ಚೆಲ್ಲುವುದೇ ಇಲ್ಲ.

* ಅಕ್ಕಿ ತೊಳೆದ ನೀರನ್ನು ಹತ್ತಿ ಅಥವಾ ಶುದ್ಧವಾದ ಬಟ್ಟೆ ಉಪಯೋಗಿಸಿಕೊಂಡು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖದ ಕಾಂತಿಯು ಹೆಚ್ಚಾಗುತ್ತದೆ.

* ಅಕ್ಕಿ ತೊಳೆದ ನೀರನ್ನು ಚರ್ಮದ ಫೇಶಿಯಲ್ ಆಗಿ ಬಳಸಬಹುದು.

* ಮುಖವು ಕೆಂಪಾಗುವುದು, ಚರ್ಮದ ಅಲರ್ಜಿ ಸೇರಿದಂತೆ ಇನ್ನಿತ್ತರ ಸಮಸ್ಯೆಯಿದ್ದರೆ ಅಕ್ಕಿ ನೀರಿನಿಂದ ಮುಖ ತೊಳೆಯುವುದು ಪರಿಣಾಮಕಾರಿ.

* ಕೂದಲಿನ ಆರೈಕೆಗೆ ಅಕ್ಕಿ ತೊಳೆದ ನೀರನ್ನು ನಿಮ್ಮ ಕೂದಲಿಗೆ ಹಚ್ಚಿದರೆ ಕೂದಲ ಹೊಳಪು ಹೆಚ್ಚುತ್ತದೆ.

* ಅಕ್ಕಿ ನೀರಿಗೆ ಲ್ಯಾವೆಂಡರ್ ಎಣ್ಣೆ ಮತ್ತು ಆಲಿವ್ ಎಣ್ಣೆಯನ್ನು ಮಿಶ್ರಣ ಮಾಡಿ, ಕೂದಲಿಗೆ ಅಕ್ಕಿ ನೀರಿನಿಂದ ತೊಳೆದರೆ ಕೂದಲ ಆರೋಗ್ಯವನ್ನು ಕಾಪಾಡಬಹುದು.

* ಮಹಿಳೆಯರಿಗೆ ಬಿಳಿ ಮುಟ್ಟಿನ ಸಮಸ್ಯೆಯಿದ್ದರೆ ಈ ಅಕ್ಕಿ ತೊಳೆದ ನೀರನ್ನು ನಿಯಮಿತವಾಗಿ ಸೇವಿಸಿದರೆ ಈ ತೊಂದರೆಯು ನಿವಾರಣೆಯಾಗುತ್ತದೆ.

* ಅಕ್ಕಿ ತೊಳೆದ ನೀರು ಕುಡಿಯುವುದರಿಂದ ಉರಿಯೂತ, ಅತಿಸಾರ ಸಮಸ್ಯೆಗಳು ಕಡಿಮೆಯಾಗುತ್ತದೆ.

* ಬೇಸಿಗೆಗಾಲದಲ್ಲಿ ಕಾಡುವ ಬೆವರು ಗುಳ್ಳೆಯ ಸಮಸ್ಯೆಗೆ ಅಕ್ಕಿ ತೊಳೆದ ನೀರಿನಿಂದ ಸ್ನಾನ ಮಾಡುವುದು ಪರಿಣಾಮಕಾರಿಯಾಗಿದೆ.

* ಅಕ್ಕಿ ನೀರಿನಲ್ಲಿ ಉಪ್ಪು, ತುಪ್ಪ, ಕರಿಮೆಣಸು ಬೆರೆಸಿ ಸೇವಿಸದರೆ ಜೀರ್ಣಕ್ರಿಯೆ ಸುಧಾರಿಸುತ್ತದೆ.

ಇದನ್ನೂ ಓದಿ: ಚರ್ಮದ ಸಮಸ್ಯೆಗೆ ಮನೆಯಲ್ಲಿ ಪರಿಹಾರ, ಈ ಮನೆ ಮದ್ದು ಟ್ರೈ ಮಾಡಿ

* ಬೇಸಿಗೆಗಾಲದಲ್ಲಿ ಅಕ್ಕಿ ನೀರನ್ನು ಕುಡಿದರೆ ದೇಹ ಹೈಡ್ರೇಟೆಡ್ ಆಗಿರುವುದಲ್ಲದೆ ಉತ್ತಮ ಮನೆ ಮದ್ದು.

* ಅಕ್ಕಿ ತೊಳೆದ ನೀರನ್ನು ಸೇವಿಸುವುದರಿಂದ ವಾಂತಿ ಅಥವಾ ಜ್ವರ ಹೀಗೆ ಯಾವುದೇ ಆರೋಗ್ಯ ಸಮಸ್ಯೆಯು ದೂರವಾಗುತ್ತದೆ.

* ಅಕ್ಕಿ ತೊಳೆದ ನೀರಿಗೆ ಕಿತ್ತಳೆ ಹಣ್ಣಿನ ಸಿಪ್ಪೆ, ನಿಂಬೆ ಹಣ್ಣಿನ ಸಿಪ್ಪೆಯನ್ನು ಮಿಶ್ರಣ ಮಾಡಿದರೆ ಹಚ್ಚಿಕೊಂಡರೆ ಚರ್ಮದ ಆರೋಗ್ಯವು ಸುಧಾರಿಸುತ್ತದೆ.

* ಬೇಸಿಗೆಗಾಲದಲ್ಲಿ ಬಿಸಿಲಿಗೆ ಮುಖವು ಕಪ್ಪಗಾಗಿದ್ದರೆ ಅಕ್ಕಿ ತೊಳೆದ ನೀರಿಗೆ ಅಲೋವೆರಾ ಜೆಲ್ ಹಾಗೂ ರೋಸ್ ವಾಟರ್ ಬೆರಸಿ ಚೆನ್ನಾಗಿ ಬೆರೆಸಿ ಮುಖಕ್ಕೆ ಹಚ್ಚಿಕೊಂಡರೆ ಮುಖದ ಹೊಳಪು ಹೆಚ್ಚಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ