AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ದಿನ ವಧುವಿನ ಅಂದವನ್ನು ಹೆಚ್ಚಿಸಲು, ತಿಂಗಳುಗಳ ಮುನ್ನವೇ ಈ ಜೀವನಶೈಲಿ ರೂಢಿಸಿ

ಮದುವೆಯಂದು ಸುಂದರವಾಗಿ ಕಾಣಲು  ಮಾಡುವ ಮೇಕ್​ಅಪ್​​ ಮಾತ್ರ ಮುಖ್ಯ  ಅಲ್ಲ, ಬದಲಾಗಿ ತಿಂಗಳುಗಳ ಮುಂಚೆಯಿಂದಲೇ ನೀವು ಜೀವನಶೈಲಿಯಲ್ಲಿ  ಕೆಲವೊಂದಿಷ್ಟು ಬದಲಾವಣೆಯನ್ನು ಮಾಡಿಕೊಂಡರೆ ನೈಸರ್ಗಿಕವಾಗಿ ಸೌಂದರ್ಯವನ್ನು ಪಡೆಯಬಹುದು.

ಮದುವೆಯ ದಿನ ವಧುವಿನ ಅಂದವನ್ನು ಹೆಚ್ಚಿಸಲು, ತಿಂಗಳುಗಳ ಮುನ್ನವೇ ಈ ಜೀವನಶೈಲಿ ರೂಢಿಸಿ
Bride Beauty TipsImage Credit source: Professional Makeup Classes in Gurgaon
Follow us
ಅಕ್ಷತಾ ವರ್ಕಾಡಿ
|

Updated on: May 19, 2023 | 7:00 AM

ಪ್ರತೀ ವಧುವಿಗೆ ತಾನು ಮದುವೆಯ ದಿನ ಅತ್ಯಂತ ಸುಂದರವಾಗಿ ಕಾಣಬೇಕು ಎಂಬ ಕನಸಿರುತ್ತದೆ. ಆದರೆ ಮದುವೆಯಂದು ಸುಂದರವಾಗಿ ಕಾಣಲು  ಮಾಡುವ ಮೇಕ್​ಅಪ್​​ ಮಾತ್ರ ಮುಖ್ಯ  ಅಲ್ಲ, ಬದಲಾಗಿ ತಿಂಗಳುಗಳ ಮುಂಚೆಯಿಂದಲೇ ನೀವು ಜೀವನಶೈಲಿಯಲ್ಲಿ  ಕೆಲವೊಂದಿಷ್ಟು ಬದಲಾವಣೆಯನ್ನು ಮಾಡಿಕೊಂಡರೆ ನೈಸರ್ಗಿಕವಾಗಿ ಸೌಂದರ್ಯವನ್ನು ಪಡೆಯಬಹುದು. ನೀವು ನೈಸರ್ಗಿಕ ಹೊಳಪನ್ನು ಪಡೆಯಲು , ನೀವು ಆರೋಗ್ಯಕರವಾದ ಆಹಾರವನ್ನು ಆಯ್ಕೆ ಮಾಡಿಕೊಳ್ಳುವುದು ಅಗತ್ಯ. ಮದುವೆ ಕನಿಷ್ಟ ಆರು ವಾರಗಳ ಮೊದಲು ನಿಮ್ಮ ಚರ್ಮವನ್ನು ಆರೋಗ್ಯವಾಗಿಟ್ಟುಕೊಳ್ಳಲು ಈ ಸಲಹೆಗಳನ್ನು ಪಾಲಿಸಿ.

ವಧುವಿನ ಆಹಾರಕ್ರಮ:

  • ಆಲ್ಕೋಹಾಲ್ ತಪ್ಪಿಸಿ
  • ನೀರು,ತಾಜಾ ಹಣ್ಣಿನ ರಸಗಳನ್ನು ಹೆಚ್ಚು ಕುಡಿಯಿರಿ
  • ನಿಮ್ಮ ಆಹಾರದಲ್ಲಿ ಪ್ರತಿದಿನ ಕನಿಷ್ಠ ಐದು ಹಣ್ಣುಗಳನ್ನು ಸೇರಿಸಿ.

ವಧುವಿನ ಡಾರ್ಕ್ ಸರ್ಕಲ್‌ ನಿವಾರಣೆಗಾಗಿ:

ಮದುವೆಯ ಸಂಭ್ರಮದ ಸಮಯದಲ್ಲಿ ಸಾಕಷ್ಟು ಒತ್ತಡದ ಜೀವನಶೈಲಿ ಇರುವುದರಿಂದ ನಿದ್ದೆಯು ಕಡಿಮೆಯಾಗಬಹುದು. ಆದರೆ ನಿಮ್ಮ ಆರೋಗ್ಯ ಹಾಗೂ ಸೌಂದರ್ಯದ ದೃಷ್ಟಿಯಿಂದ ಸರಿಯಾಗಿ ನಿದ್ದೆ ಮತ್ತು ವಿಶ್ರಾಂತಿ ಅಗತ್ಯವಾಗಿರುತ್ತದೆ. ನಿದ್ದೆಗೆ ಸರಿಯಾದ ಸಮಯ ಮೀಸಲಿಡುವುದರಿಂದ ನೈಸರ್ಗಿಕವಾಗಿ ಡಾರ್ಕ್ ಸರ್ಕಲ್‌ ಸಮಸ್ಯೆಯನ್ನು ನಿವಾರಿಸಬಹುದು.

ಇದನ್ನೂ ಓದಿ: ನಿಮ್ಮ ಸಂಗಾತಿಯ ಸುರಕ್ಷಿತ ಭಾವನೆಗಳಿಗೆ ನೀವು ಹೇಗೆ ಸಹಾಯ ಮಾಡಬಹುದು? ಇಲ್ಲಿದೆ ತಜ್ಞರ ಸಲಹೆ

ವಧುವಿನ ಚರ್ಮದ ಕಾಂತಿಗಾಗಿ:

1 ಟೀಸ್ಪೂನ್ ಹಾಲು,1 ಟೀಸ್ಪೂನ್ ಜೇನುತುಪ್ಪ ಮತ್ತ ಬಾದಾಮಿಯನ್ನು ಸೇರಿಸಿ ಚೆನ್ನಾಗಿ ಪೇಸ್ಟ್​​ ಮಾಡಿ ಮುಖ, ಬೆನ್ನು ಹಾಗೂ ಕೈ ಕಾಲುಗಳಿಗೆ ಹಚ್ಚಿ. 10 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ತಣ್ಣೀರಿನಿಂದ ಮುಖ ತೊಳೆಯಿರಿ.

ವಧುವಿನ ಕೂದಲಿನ ಆರೈಕೆಗಾಗಿ:

ಭೃಂಗರಾಜ್ ಎಣ್ಣೆ ಕೂದಲಿಗೆ ಮಸಾಜ್​​ ಮಾಡಿ. ಇದು ನಿಮ್ಮ ಕೂದಲಿನ ಎಲ್ಲಾ ಸಮಸ್ಯೆಗಳಿಗೂ ರಾಮಬಾಣವಾಗಿದೆ. ಇದಲ್ಲದೇ ಹೇರ್​​ ಪೇಸ್ಟ್​​​ ಕೂಡ ತಯಾರಿಸಬಹುದು. ಅದಕ್ಕಾಗಿ ನೀವು ಮಾಡಬೇಕಾಗಿರುವುದು ಇಷ್ಟೇ 1 ಹಿಸುಕಿದ ಆವಕಾಡೊವನ್ನು ಸ್ವಲ್ಪ ಹಾಲು ಮತ್ತು 1 ಟೀಸ್ಪೂನ್ ಶುದ್ಧ ದೇಸಿ ತುಪ್ಪ ಎಲ್ಲವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. 30 ನಿಮಿಷಗಳ ವರೆಗೆ ಹಾಗೆಯೇ ಬಿಡಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್