AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beauty Tips: ಮುಖಕ್ಕೆ ಟೊಮ್ಯಾಟೋ ಹಣ್ಣು ಹಚ್ಚಿಕೊಂಡರೆ ಏನಾಗುತ್ತದೆ?

ಟೊಮ್ಯಾಟೋ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳಿಂದ ತುಂಬಿರುತ್ತದೆ. ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ ಮತ್ತು ನಿಮ್ಮ ಚರ್ಮದ ಆರೋಗ್ಯಕ್ಕೂ ಒಳ್ಳೆಯದು. ಟೊಮ್ಯಾಟೋ ಹಣ್ಣನ್ನು ಮುಖಕ್ಕೆ ಹಚ್ಚುವುದರಿಂದ ಆಗುವ ಪ್ರಯೋಜನಗಳು ಹೀಗಿವೆ.

Beauty Tips: ಮುಖಕ್ಕೆ ಟೊಮ್ಯಾಟೋ ಹಣ್ಣು ಹಚ್ಚಿಕೊಂಡರೆ ಏನಾಗುತ್ತದೆ?
ಟೊಮ್ಯಾಟೋImage Credit source: iStock
ಸುಷ್ಮಾ ಚಕ್ರೆ
|

Updated on: Nov 10, 2023 | 7:07 PM

Share

ಟೊಮ್ಯಾಟೋ ಹಣ್ಣು ಅಡುಗೆಗೆ ಮಾತ್ರವಲ್ಲ; ಸೌಂದರ್ಯ ಚಿಕಿತ್ಸೆಗೂ ಬಹಳ ಉಪಯುಕ್ತವಾಗಿದೆ. ಟೊಮ್ಯಾಟೋವನ್ನು ಸರಿಯಾಗಿ ಬಳಸುವುದು ಹೇಗೆ ಎಂದು ನೀವು ಅರ್ಥಮಾಡಿಕೊಂಡರೆ ನಿಮ್ಮ ಚರ್ಮದ ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು. ಈ ರಸಭರಿತವಾದ ಕೆಂಪು ಹಣ್ಣು ಟೊಮ್ಯಾಟೋ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳಿಂದ ತುಂಬಿರುತ್ತದೆ. ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ ಮತ್ತು ನಿಮ್ಮ ಚರ್ಮದ ಆರೋಗ್ಯಕ್ಕೂ ಒಳ್ಳೆಯದು.

ಟೊಮ್ಯಾಟೋ ಹಣ್ಣನ್ನು ಚರ್ಮಕ್ಕೆ ಹಚ್ಚಿಕೊಳ್ಳುವುದರಿಂದ ಹಲವಾರು ಪ್ರಯೋಜನಗಳಿವೆ. ನೀವು ಟೊಮ್ಯಾಟೋ ರಸ, ಹಿಸುಕಿದ ಟೊಮ್ಯಾಟೊ, ಟೊಮ್ಯಾಟೊ ತಿರುಳನ್ನು ಬಳಸಿ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಟೊಮ್ಯಾಟೋ ಹಣ್ಣಿನ ಜೊತೆ ಜೇನುತುಪ್ಪ, ಮೊಸರು, ಪಪ್ಪಾಯ ಹಣ್ಣನ್ನು ಸೇರಿಸಿಕೊಂಡು ಫೇಸ್​ಪ್ಯಾಕ್ ಕೂಡ ಮಾಡಿಕೊಳ್ಳಬಹುದು.

ಟೊಮ್ಯಾಟೋ ಹಣ್ಣನ್ನು ಮುಖಕ್ಕೆ ಹಚ್ಚುವುದರಿಂದ ಆಗುವ ಪ್ರಯೋಜನಗಳು ಹೀಗಿವೆ:

1. ಚರ್ಮದ ಎಣ್ಣೆಯನ್ನು ಕಡಿಮೆ ಮಾಡುತ್ತದೆ:

ನೀವು ಎಣ್ಣೆಯುಕ್ತ ಚರ್ಮವನ್ನು ಹೊಂದಿದ್ದರೆ, ಹಸಿ ಟೊಮ್ಯಾಟೊವನ್ನು ವಾರಕ್ಕೆ 3 ಬಾರಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ. ಬಳಿಕ 5ರಿಂದ 10 ನಿಮಿಷ ಬಿಟ್ಟು ತೊಳೆಯಿರಿ. ಆಗ ನಯವಾದ, ಹೊಳೆಯುವ ಎಣ್ಣೆ ಮುಕ್ತ ಚರ್ಮದಾಗುತ್ತದೆ.

ಇದನ್ನೂ ಓದಿ: Skin Care Tips: ಸೆನ್ಸಿಟಿವ್ ಚರ್ಮವನ್ನು ಗುರುತಿಸುವುದು ಹೇಗೆ?

2. ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ:

ಟೊಮ್ಯಾಟೋ ಚರ್ಮವನ್ನು ಹಗುರಗೊಳಿಸುವ ಅತ್ಯುತ್ತಮ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ. ಉತ್ತಮ ಫಲಿತಾಂಶಗಳಿಗಾಗಿ ಒಂದು ಟೊಮ್ಯಾಟೊ ಹಣ್ಣಿನ ತಿರುಳು, ಎರಡು ಸ್ಪೂನ್ ಮುಲ್ತಾನಿಮಿಟ್ಟಿ ಮತ್ತು ಒಂದು ಟೀಚಮಚ ತಾಜಾ ಪುದೀನಾ ಪೇಸ್ಟ್ ಅನ್ನು ಮಿಶ್ರಣ ಮಾಡಿ. ಮಿಶ್ರಣವನ್ನು ನಿಮ್ಮ ಮುಖದ ಮೇಲೆ ಹಚ್ಚಿಕೊಂಡು ಅದು ಒಣಗುವವರೆಗೆ ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ.

3. ವಯಸ್ಸಾದ ಚಿಹ್ನೆಗಳನ್ನು ಕಡಿಮೆ ಮಾಡುತ್ತದೆ:

ತುಂಬಾ ಮಾಲಿನ್ಯದಿಂದ ಅಕಾಲಿಕವಾಗಿ ವಯಸ್ಸಾಗುವುದು ಸಾಮಾನ್ಯವಾಗಿದೆ. ಅಕಾಲಿಕ ವಯಸ್ಸಾದ ಮುಖ್ಯ ಚಿಹ್ನೆಗಳೆಂದರೆ ಮುಖದಲ್ಲಿ ಕಲೆಗಳು, ಕಪ್ಪು ವರ್ತುಲಗಳು, ಸುಕ್ಕುಗಳು ಇತ್ಯಾದಿ. ಟೊಮ್ಯಾಟೊಗಳಲ್ಲಿರುವ ವಿಟಮಿನ್ ಡಿ ಅಂಶವು ವಯಸ್ಸಾಗುವ ಚರ್ಮದ ಆರಂಭಿಕ ಚಿಹ್ನೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Skin Care: ತ್ವಚೆಯನ್ನು ಸ್ವಚ್ಛಗೊಳಿಸುವುದು ಹೇಗೆ?; ಈ 7 ತಪ್ಪುಗಳನ್ನೆಂದೂ ಮಾಡಬೇಡಿ

4. ಬಿಸಿಲಿನ ಬೇಗೆಗೆ ಚಿಕಿತ್ಸೆ ನೀಡುತ್ತದೆ:

ಟೊಮ್ಯಾಟೋ ಬಿಸಿಲಿಗೆ ಚಿಕಿತ್ಸೆ ನೀಡಲು ಮತ್ತು ಕಂದುಬಣ್ಣದ ಗುರುತುಗಳನ್ನು ತೆಗೆದುಹಾಕುವಲ್ಲಿ ಅತ್ಯುತ್ತಮವಾಗಿದೆ. ಇದರಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಎ ಹೇರಳವಾಗಿದ್ದು ಚರ್ಮದ ಕಲೆಗಳನ್ನು ನಿವಾರಿಸಲು ಮತ್ತು ಟ್ಯಾನ್ ಅನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?