AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ವಚೆಯ ಸೌಂದರ್ಯಕ್ಕೆ ಪಪ್ಪಾಯ ಹಣ್ಣು ಬಳಸಿ; ನಿಮ್ಮ ಚರ್ಮಕ್ಕೆ ಯಾವ ಫೇಸ್​ಪ್ಯಾಕ್ ಬೆಸ್ಟ್?

ಪಪ್ಪಾಯ ಹಣ್ಣಿನ ಫೇಸ್​ಪ್ಯಾಕ್ ಮಾಡಿಕೊಳ್ಳುವುದರಿಂದ ಮುಖದ ತ್ವಚೆ ಕಾಂತಿಯುಕ್ತವಾಗುತ್ತದೆ, ಇದು ಚರ್ಮವನ್ನು ಮೃದುಗೊಳಿಸುತ್ತದೆ, ತ್ವಚೆಯ ಸುಕ್ಕುಗಳನ್ನು ಕಡಿಮೆ ಮಾಡುತ್ತದೆ. ಯಾವ ರೀತಿಯ ಚರ್ಮದವರು ಯಾವ ರೀತಿ ಪಪ್ಪಾಯಿ ಫೇಸ್​ಪ್ಯಾಕ್ ಮಾಡಿಕೊಳ್ಳಬೇಕು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ತ್ವಚೆಯ ಸೌಂದರ್ಯಕ್ಕೆ ಪಪ್ಪಾಯ ಹಣ್ಣು ಬಳಸಿ; ನಿಮ್ಮ ಚರ್ಮಕ್ಕೆ ಯಾವ ಫೇಸ್​ಪ್ಯಾಕ್ ಬೆಸ್ಟ್?
ಪಪ್ಪಾಯಿಯ ಫೇಸ್ ಪ್ಯಾಕ್ Image Credit source: iStock
ಸುಷ್ಮಾ ಚಕ್ರೆ
|

Updated on: Nov 11, 2023 | 6:36 PM

Share

ಪಪ್ಪಾಯ ಹಣ್ಣನ್ನು ತಿನ್ನುವುದರಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ, ಪಪ್ಪಾಯ ಹಣ್ಣಿನಿಂದ ನಮ್ಮ ಸೌಂದರ್ಯಕ್ಕೆ ಮತ್ತು ಚರ್ಮಕ್ಕೆ ಏನೆಲ್ಲ ಪ್ರಯೋಜನಗಳಿವೆ ಎಂಬುದು ಗೊತ್ತಾ? ಪಪ್ಪಾಯ ಹಣ್ಣಿನ ಫೇಸ್​ಪ್ಯಾಕ್ ಮಾಡಿಕೊಳ್ಳುವುದರಿಂದ ಮುಖದ ತ್ವಚೆ ಕಾಂತಿಯುಕ್ತವಾಗುತ್ತದೆ, ಇದು ಚರ್ಮವನ್ನು ಮೃದುಗೊಳಿಸುತ್ತದೆ, ತ್ವಚೆಯ ಸುಕ್ಕುಗಳನ್ನು ಕಡಿಮೆ ಮಾಡುತ್ತದೆ, ಕಪ್ಪು ಕಲೆಗಳನ್ನು ಹೋಗಲಾಡಿಸುತ್ತದೆ, ಮೊಡವೆಗಳನ್ನು ಕಡಿಮೆ ಮಾಡುತ್ತದೆ. ಹಾಗಾದರೆ, ಯಾವ ರೀತಿಯ ಚರ್ಮದವರು ಯಾವ ರೀತಿ ಪಪ್ಪಾಯಿ ಫೇಸ್​ಪ್ಯಾಕ್ ಮಾಡಿಕೊಳ್ಳಬೇಕು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಪಪ್ಪಾಯಿಯು ವಿಶೇಷವಾಗಿ ತ್ವಚೆಯ ವಿಚಾರದಲ್ಲಿ ಹಲವಾರು ಪ್ರಯೋಜನಗಳನ್ನು ಹೊಂದಿದೆ. ಇದು ನೈಸರ್ಗಿಕ ಮಾಯಿಶ್ಚರೈಸರ್ ಆಗಿದ್ದು, ಪಿಗ್ಮೆಂಟೇಶನ್ ಮಸುಕಾಗಲು ಸಹಾಯ ಮಾಡುತ್ತದೆ.

ಒಣ ಚರ್ಮದವರು ಈ ರೀತಿ ಮಾಡಿ:

ಪಪ್ಪಾಯಿ ಹಣ್ಣು ಮತ್ತು ಜೇನುತುಪ್ಪವನ್ನು ಮಿಕ್ಸ್​ ಮಾಡಿ ಫೇಸ್​ಪ್ಯಾಕ್ ಮಾಡಿಕೊಳ್ಳುವುದರಿಂದ ಒಣ ತ್ವಚೆಗೆ ಉತ್ತಮವಾದ ಮಾಯಿಶ್ಚರೈಸರ್ ಸಿಗುತ್ತದೆ. ಇವೆರಡೂ ನಿಮ್ಮ ಮುಖದ ಚರ್ಮವನ್ನು ಎಫ್ಫೋಲಿಯೇಟ್ ಮಾಡಿ ಮತ್ತು ಹೈಡ್ರೇಟ್ ಮಾಡುತ್ತದೆ. ಇದು ಮೃದುವಾದ, ನಯವಾದ, ಕಾಂತಿಯುತವಾದ ಚರ್ಮವನ್ನು ನೀಡುತ್ತದೆ.

ಇದನ್ನೂ ಓದಿ: ಹೊಳೆಯುವ ಸುಂದರ ತ್ವಚೆಗಾಗಿ ಮನೆಯಲ್ಲೇ ಸುಲಭವಾಗಿ ಈ ಫೇಸ್​ಪ್ಯಾಕ್ ಮಾಡಿಕೊಳ್ಳಿ

ಈ ಫೇಸ್​ಪ್ಯಾಕ್ ತಯಾರಿಸುವುದು ಹೇಗೆ?:

ಮಾಗಿದ ಪಪ್ಪಾಯಿ ಹಣ್ಣನ್ನು 1 ಕಪ್ ಹಿಸುಕಿಟ್ಟುಕೊಳ್ಳಿ. ಅದನ್ನು 1 ಚಮಚ ಜೇನುತುಪ್ಪ ಮತ್ತು ಎರಡು ಟೇಬಲ್ ಸ್ಪೂನ್ ತಾಜಾ ಹಾಲಿನೊಂದಿಗೆ ಮಿಶ್ರಣ ಮಾಡಿ. ಈ ಪೇಸ್ಟ್ ಅನ್ನು ನಿಮ್ಮ ಮುಖ ಮತ್ತು ಕುತ್ತಿಗೆಗೆ ಹಚ್ಚಿಕೊಂಡು, 15ರಿಂದ 20 ನಿಮಿಷಗಳ ಕಾಲ ಒಣಗಲು ಬಿಡಿ. ಉಗುರುಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ.

ಎಣ್ಣೆಯುಕ್ತ ಚರ್ಮದವರು ಹೀಗೆ ಮಾಡಿ:

ಎಣ್ಣೆಯುಕ್ತ ಚರ್ಮಕ್ಕೆ ಪಪ್ಪಾಯಿಯ ಫೇಸ್ ಪ್ಯಾಕ್ ಅಗತ್ಯವಿರುತ್ತದೆ. ಅದು ಚರ್ಮಕ್ಕೆ ಸರಿಯಾದ ಪ್ರಮಾಣದ ತೇವಾಂಶವನ್ನು ನೀಡುತ್ತದೆ, ನಿಮ್ಮ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಈ ಫೇಸ್​ಪ್ಯಾಕ್​ನ ಸಂಪೂರ್ಣ ಅಂಶವು ಸಮತೋಲನವನ್ನು ಉಂಟುಮಾಡುತ್ತದೆ. ಎಣ್ಣೆಯುಕ್ತ ಚರ್ಮಕ್ಕಾಗಿ ಈ ಪಪ್ಪಾಯಿ ಫೇಸ್ ಪ್ಯಾಕ್ ಮಾಡಿಕೊಳ್ಳುವಾಗ ಪಪ್ಪಾಯಿಯೊಂದಿಗೆ ನಿಂಬೆ ರಸವನ್ನು ಸೇರಿಸಿಕೊಳ್ಳಿ.

ಇದನ್ನು ಹೇಗೆ ಮಾಡುವುದು?:

1 ಕಪ್ ಪಪ್ಪಾಯಿಯನ್ನು 2 ಚಮಚ ನಿಂಬೆ ರಸದೊಂದಿಗೆ ಮಿಶ್ರಣ ಮಾಡಿ. ಇದನ್ನು ನಿಮ್ಮ ಮುಖದ ಮೇಲೆ 15 ನಿಮಿಷಗಳ ಕಾಲ ಹಚ್ಚಿಕೊಂಡು, ತಂಪಾದ ನೀರಿನಿಂದ ತೊಳೆಯಿರಿ.

ಇದನ್ನೂ ಓದಿ: Beauty Tips: ಫೇಸ್​ಪ್ಯಾಕ್ ಮಾಡಿಕೊಳ್ಳುವಾಗ ಈ ವಿಷಯಗಳನ್ನೆಂದೂ ಮರೆಯಬೇಡಿ

ಚರ್ಮದ ಹೊಳಪು ಹೆಚ್ಚಾಗಿ, ಟ್ಯಾನ್​ ಕಡಿಮೆಯಾಗಲು ಹೀಗೆ ಮಾಡಿ:

ಪಪ್ಪಾಯಿ ನಿಮ್ಮ ತ್ವಚೆಯನ್ನು ಹೊಳಪುಗೊಳಿಸುವ ಗುಣಗಳನ್ನು ಹೊಂದಿದ್ದು, ಟ್ಯಾನ್ ಲೈನ್‌ ಅನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಪಿಗ್ಮೆಂಟೇಶನ್ ಮತ್ತು ಹೊಳಪಿಗಾಗಿ ಪಪ್ಪಾಯಿ ಫೇಸ್ ಪ್ಯಾಕ್ ಮಾಡಲು, ನೀವು ಅದನ್ನು ಸ್ವಲ್ಪ ಟೊಮೆಟೊ ರಸದೊಂದಿಗೆ ಬೆರೆಸಬೇಕು.

ಇದನ್ನು ಹೇಗೆ ಮಾಡುವುದು?:

1 ಕಪ್ ಮಾಗಿದ ಪಪ್ಪಾಯಿಯನ್ನು ಒಂದು ಟೊಮ್ಯಾಟೊದ ತಿರುಳಿನೊಂದಿಗೆ ಮಿಶ್ರಣ ಮಾಡಿ. ಅದನ್ನು ನಿಮ್ಮ ಮುಖ ಮತ್ತು ಕುತ್ತಿಗೆಗೆ ಹಚ್ಚಿಕೊಂಡು ಒಣಗುವವರೆಗೆ ಕಾಯಿರಿ. ನಂತರ ಮುಖ ತೊಳೆಯಿರಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು