AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beauty Tips: ಕುತ್ತಿಗೆ, ಮೊಣಕೈ ಮತ್ತು ಕಾಲುಗಳಲ್ಲಿ ಕಪ್ಪಾದ ಕಲೆಗಳಿವೆಯೇ? ಹೋಗಲಾಡಿಸಲು ಇಲ್ಲಿದೆ ಸರಳ ಸಲಹೆಗಳು

ನಿಮ್ಮ ಕುತ್ತಿಗೆ ಭಾಗದಲ್ಲಿ, ಮೊಣಕೈ ಮತ್ತು ಮೊಣಕಾಲುಗಳಲ್ಲಿ ಕಪ್ಪು ಕಲೆಗಳು ಕಂಡು ಬರುತ್ತಿದ್ದರೆ ಅದನ್ನು ಹೋಗಲಾಡಿಸಲು ಇಲ್ಲಿವೆ ಕೆಲವು ಮನೆಮದ್ದುಗಳು.

Beauty Tips: ಕುತ್ತಿಗೆ, ಮೊಣಕೈ ಮತ್ತು ಕಾಲುಗಳಲ್ಲಿ ಕಪ್ಪಾದ ಕಲೆಗಳಿವೆಯೇ? ಹೋಗಲಾಡಿಸಲು ಇಲ್ಲಿದೆ ಸರಳ ಸಲಹೆಗಳು
ಸಂಗ್ರಹ ಚಿತ್ರ
TV9 Web
| Updated By: shruti hegde|

Updated on: Oct 31, 2021 | 10:08 AM

Share

ಸಾಮಾನ್ಯವಾಗಿ ಸೌಂದರ್ಯದ ಬಗ್ಗೆ ಎಲ್ಲರಿಗೂ ಹೆಚ್ಚಿನ ಕಾಳಜಿ ಇರುತ್ತದೆ. ನೋಡಲು ಸುಂದರವಾಗಿ ಕಾಣಿಸಬೇಕು ಎಂಬ ಆಸೆ ಇರುವುದು ಸಹಜ. ಹಾಗಿರುವಾಗ ಒಳ್ಳೆಯ ಡ್ರೆಸ್ ತೊಟ್ಟು ನೋಡಲು ಸುಂದರವಾಗಿ ಕಂಡರೆ ಸಾಲದು. ನಿಮ್ಮ ಚರ್ಮದ ಆರೈಕೆಯೂ ಹೆಚ್ಚು ಮುಖ್ಯ. ನಿಮ್ಮ ಕುತ್ತಿಗೆ ಭಾಗದಲ್ಲಿ, ಮೊಣಕೈ ಮತ್ತು ಮೊಣಕಾಲುಗಳಲ್ಲಿ ಕಪ್ಪು ಕಲೆಗಳು ಕಂಡು ಬರುತ್ತಿದ್ದರೆ ಅದನ್ನು ಹೋಗಲಾಡಿಸಲು ಕೆಲವು ಸರಳ ವಿಧಾನಗಳು ಈ ಕೆಳಗಿನಂತಿದೆ. ಸುಲಭದಲ್ಲಿ ಈ ಸಮಸ್ಯೆಗೆ ನೀವು ಪರಿಹಾರ ಕಂಡುಕೊಳ್ಳಬಹುದಾಗಿದೆ.

ಮನೆಯಲ್ಲಿಯೇ ಸುಲಭದಲ್ಲಿ ತಯಾರಿಸುವ ಕೆಲವು ಮದ್ದುಗಳ ಮೂಲಕ ನಿಮ್ಮ ಆರೋಗ್ಯ ಸುಧಾರಿಸಿಕೊಳ್ಳಬಹುದಾಗಿದೆ. ಹಾಗಿರುವಾಗ ಬಳಸುವ ಪದಾರ್ಥಗಳಲ್ಲಿ ತಯಾರಾಗುವ ಔಷಧಗಳು ಯಾವುವು ಎಂಬುದನ್ನು ತಿಳಿದುಕೊಳ್ಳಿ. ಇವುಗಳನ್ನು ಅನುಸರಿಸುವ ಮೂಲಕ ಚರ್ಮದ ಆರೈಕೆ ಮಾಡಿಕೊಳ್ಳಿ.

ಈ ಕೆಲವು ಮನೆಮದ್ದುಗಳು ಕಪ್ಪು ಕಲೆಯನ್ನು ನಿವಾರಿಸಲು ಸಹಾಯ ಮಾಡುತ್ತವೆ ಅರ್ಧ ಚಮಚ ನಿಂಬೆ ರಸದಲ್ಲಿ ಒಂದು ಚಮಚ ರೋಸ್ ವಾಟರ್ ಮಿಶ್ರಣ ಮಾಡಿ. ಈ ಮಿಶ್ರಣವನ್ನು ನಿಮ್ಮ ಕುತ್ತಿಗೆ, ಮೊಣಕೈ ಮತ್ತು ಮೊಣಕಾಲುಗಳಿಗೆ ಅನ್ವಯಿಸಿ ಮತ್ತು ರಾತ್ರಿಯಿಡೀ ಹಾಗೆಯೇ ಬಿಡಿ. ಕೆಲವು ದಿನಗಳ ಕಾಲ ಇದನ್ನು ನಿರಂತರವಾಗಿ ಉಪಯೋಗಿಸಿ. ಇದರಿಂದ ನಿಮ್ಮ ಚರ್ಮಕ್ಕೆ ಅಂಟಿಕೊಂಡಿರುವ ಕಪ್ಪು, ಕೆಸರು ಅಥವಾ ಕಪ್ಪು ಕಲೆಗಳು ನಿವಾರಣೆಯಾಗುತ್ತವೆ.

ಎರಡು ಚಮಚ ಜೇನುತುಪ್ಪದಲ್ಲಿ ಒಂದು ಚಮಚ ನಿಂಬೆ ರಸವನ್ನು ಮಿಶ್ರಣ ಮಾಡಿ. ಸ್ನಾನ ಮಾಡುವ ಮೊದಲು ಕಪ್ಪಾದ ಜಾಗಕ್ಕೆ ಇದನ್ನು ಅನ್ವಯಿಸಿ. ಸುಮಾರು ಅರ್ಧ ಗಂಟೆಯವರೆಗೆ ಹಾಗೆಯೇ ಬಿಡಿ. ಈ ನಂತರ ಸ್ನಾನ ಮಾಡಿ. ಚರ್ಮವು ಹೆಚ್ಚು ಮೃದುವಾಗುತ್ತದೆ ಮತ್ತು ಕಪ್ಪು ಕಲೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ಒಂದು ಬಟ್ಟಲಿನಲ್ಲಿ ಹಸಿ ಆಲೂಗಡ್ಡೆಯನ್ನು ತುರಿದು ಅದಕ್ಕೆ ಮೊಸರು ಸೇರಿಸಿ ಕುತ್ತಿಗೆ, ಮೊಣಕೈ ಮತ್ತು ಮೊಣಕಾಲುಗಳಿಗೆ ಕಚ್ಚಿ 10 ರಿಂದ 15 ನಿಮಿಷಗಳವರೆಗೆ ಹಾಗೆಯೇ ಒಣಗಲು ಬಿಡಿ. ಆ ಬಳಿಕ ಶುದ್ಧ ನೀರಿನಿಂದ ತೊಳೆಯಿರಿ. ಇದು ನಿಮ್ಮ ಕುತ್ತಿಗೆಗೆ ಅಂಟಿಕೊಂಡಿರುವ ಕೆಸರನ್ನು ಮತ್ತು ಕಪ್ಪು ಕಲೆಯನ್ನು ಹೋಗಲಾಡಿಸಲು ಸಹಾಯಕವಾಗಿದೆ.

ಸೌತೆಕಾಯಿ ರಸವನ್ನು ಕಪ್ಪಾದ ಚರ್ಮಕ್ಕೆ ಹಚ್ಚಿ. ಜೊತೆಗೆ ಅಲೋವೆರಾ ಜೆಲ್ ಕೂಡ ಬಳಸಬಹುದು. ಇದರಿಂದ ನಿಮ್ಮ ಚರ್ಮಕ್ಕೆ ಅಂಟಿರುವ ಕಪ್ಪು ಕಲೆಗೆ ಪರಿಹಾರ ಪಡೆದುಕೊಳ್ಳಬಹುದಾಗಿದೆ.

ಮೊಸರು ಕಪ್ಪು ಕಲೆಗಳನ್ನು ಹೋಗಲಾಡಿಸುತ್ತದೆ. ಚರ್ಮದಲ್ಲಿ ತೇವಾಂಶವನ್ನು ಕಾಪಾಡುತ್ತದೆ. ಮೊಸರಿನಲ್ಲಿ ಹನಿ ಬಿಳಿ ವಿನೇಗರ್ ಅನ್ನು ಮಿಶ್ರಣ ಮಾಡಿ ನಂತರ ಚರ್ಮಕ್ಕೆ ಅನ್ವಯಿಸಿ. ಇದು ನಿಮ್ಮ ಚರ್ಮಕ್ಕೆ ಅಂಟಿರುವ ಕಲೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ:

Health Tips: ಕಹಿಯಾಗಿದ್ದರೂ ಆರೋಗ್ಯಕರ ಗುಣಗಳನ್ನು ಹೊಂದಿರುವ ಈ 5 ಪದಾರ್ಥಗಳ ಬಗ್ಗೆ ತಿಳಿಯಿರಿ

Brown Rice: ಕುಚ್ಚಲಕ್ಕಿಯಲ್ಲಿ ಅಡಗಿದೆ ಸೌಂದರ್ಯ ಹೆಚ್ಚಿಸುವ ಗುಣಗಳು

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ