AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Potato Face Pack: ಕೋಮಲ ತ್ವಚೆಗೆ ಆಲೂಗಡ್ಡೆಯ ಫೇಸ್​ಪ್ಯಾಕ್ ಹಚ್ಚಿ ನೋಡಿ!

Skin Care Tips: ಸುಂದರವಾದ ತ್ವಚೆ ಬೇಕೆಂದು ಹಲವು ಜನ ಏನೇನೋ ಬ್ಯೂಟಿ ಉತ್ಪನ್ನಗಳನ್ನು ಬಳಸುತ್ತಾರೆ. ಅದಕ್ಕೆ ಸಾವಿರಾರು ರೂಪಾಯಿ ಕೊಡುವ ಬದಲು ನಿಮ್ಮ ಮನೆಯಲ್ಲೇ ಇರುವ ವಸ್ತುಗಳನ್ನು ಬಳಸಿ ಫೇಸ್​ಪ್ಯಾಕ್ ಮಾಡಿಕೊಳ್ಳಬಹುದು. ಅದರಲ್ಲಿ ಆಲೂಗಡ್ಡೆ ಕೂಡ ಒಂದು. ನೀವೆಂದಾದರೂ ಆಲೂಗಡ್ಡೆಯಿಂದ ಫೇಸ್​ಪ್ಯಾಕ್ ಮಾಡಿಕೊಳ್ಳಬಹುದು ಎಂದು ಯೋಚಿಸಿದ್ದೀರಾ?

Potato Face Pack: ಕೋಮಲ ತ್ವಚೆಗೆ ಆಲೂಗಡ್ಡೆಯ ಫೇಸ್​ಪ್ಯಾಕ್ ಹಚ್ಚಿ ನೋಡಿ!
ಆಲೂಗಡ್ಡೆಯ ಫೇಸ್​ಪ್ಯಾಕ್
Follow us
ಸುಷ್ಮಾ ಚಕ್ರೆ
|

Updated on: Feb 08, 2024 | 2:03 PM

ಆಲೂಗಡ್ಡೆ ಉತ್ತಮ ತರಕಾರಿ ಮಾತ್ರವಲ್ಲ ಇದು ನಿಮ್ಮ ಚರ್ಮದ ಕಲೆಗಳನ್ನು ತೆಗೆದುಹಾಕುವ ಸಾಮರ್ಥ್ಯ ಹೊಂದಿದೆ. ಆಲೂಗಡ್ಡೆ ಫೇಸ್ ಪ್ಯಾಕ್ (Potato Face Pack) ಮಾಡಿಕೊಳ್ಳುವುದರಿಂದ ಇದು ನಿಮ್ಮ ಮುಖದ ಹೊಳಪನ್ನು ಹೆಚ್ಚಿಸುತ್ತದೆ ಮತ್ತು ಮೊಡವೆ, ಕಪ್ಪು ಕಲೆಗಳನ್ನು ಕಡಿಮೆ ಮಾಡುತ್ತದೆ. ಆಲೂಗೆಡ್ಡೆ ಫೇಸ್ ಪ್ಯಾಕ್‌ ತ್ವಚೆಯ ಆರೈಕೆಯಲ್ಲಿ (Skin Care) ಜನಪ್ರಿಯವಾಗಿದ್ದರೂ, ಕಪ್ಪು ಕಲೆಗಳು (Black Spots)  ಮತ್ತು ಮೊಡವೆಗಳನ್ನು ಪರಿಹರಿಸುವಲ್ಲಿ ಅವುಗಳ ಪರಿಣಾಮಕಾರಿತ್ವವು ಒಬ್ಬರು ವ್ಯಕ್ತಿಯಿಂದ ಮತ್ತೊಬ್ಬ ವ್ಯಕ್ತಿಗೆ ಬದಲಾಗಬಹುದು. ಅದು ಅವರ ಚರ್ಮದ ವಿಧದ ಮೇಲೆ ಅವಲಂಬಿತವಾಗಿರುತ್ತದೆ.

ಆಲೂಗಡ್ಡೆಯು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಇದು ಚರ್ಮದ ಹೊಳಪನ್ನು ನೀಡುತ್ತದೆ. ಇದು ಕಾಲಾನಂತರದಲ್ಲಿ ಕಪ್ಪು ಕಲೆಗಳನ್ನು ಮಸುಕಾಗಿಸಲು ಸಹಾಯ ಮಾಡುತ್ತದೆ. ಆಲೂಗಡ್ಡೆಯಲ್ಲಿರುವ ನೈಸರ್ಗಿಕ ಕಿಣ್ವಗಳು ಸೌಮ್ಯವಾದ ಎಕ್ಸ್‌ಫೋಲಿಯೇಟಿಂಗ್ ಗುಣಲಕ್ಷಣಗಳನ್ನು ಹೊಂದಿದೆ. ಇದು ಮೊಡವೆ ತಡೆಗಟ್ಟುವಲ್ಲಿ ಸಮರ್ಥವಾಗಿ ಸಹಾಯ ಮಾಡುತ್ತದೆ. ಆಲೂಗಡ್ಡೆಯಲ್ಲಿ ಕಾರ್ಬೋಹೈಡ್ರೇಟ್‌, ಫೈಬರ್, ಜೀವಸತ್ವಗಳು, ಖನಿಜಗಳು, ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ.

ಇದನ್ನೂ ಓದಿ: ತ್ವಚೆಯ ಸೌಂದರ್ಯಕ್ಕೆ ಪಪ್ಪಾಯ ಹಣ್ಣು ಬಳಸಿ; ನಿಮ್ಮ ಚರ್ಮಕ್ಕೆ ಯಾವ ಫೇಸ್​ಪ್ಯಾಕ್ ಬೆಸ್ಟ್?

ಆಲೂಗಡ್ಡೆ ಫೇಸ್​ಪ್ಯಾಕ್ ಮಾಡಿಕೊಳ್ಳುವುದು ಹೇಗೆ?:

ಆಲೂಗಡ್ಡೆಯ ಪೇಸ್ಟ್, ಮುಲ್ತಾನಿ ಮಿಟ್ಟಿ, ಕೆಲವು ಹನಿ ನಿಂಬೆ ರಸ ಮತ್ತು ಅಲೋವೆರಾ ಜೆಲ್ ಸೇರಿಸಿಕೊಂಡು ಫೇಸ್​ಪ್ಯಾಕ್ ಮಾಡಿಕೊಳ್ಳುವುದರಿಂದ ನಿಮ್ಮ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಆಲೂಗಡ್ಡೆಯ ಪೇಸ್ಟ್, ಮುಲ್ತಾನಿ ಮಿಟ್ಟಿ, ಕೆಲವು ಹನಿ ನಿಂಬೆ ರಸ ಮತ್ತು ಅಲೋವೆರಾ ಜೆಲ್ ಸೇರಿಸಿ ಪೇಸ್ಟ್ ಮಾಡಿಕೊಂಡು, ಅದನ್ನು ಬ್ರಷ್ ಅಥವಾ ಹತ್ತಿಯಿಂದ ಮುಖಕ್ಕೆ ಹಚ್ಚಿಕೊಳ್ಳಿ. 15 ನಿಮಿಷಗಳ ಕಾಲ ಅದನ್ನು ಬಿಟ್ಟು, ನಂತರ ಮುಖವನ್ನು ತೊಳೆಯಿರಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್