AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beetroot wine: ಆರೋಗ್ಯಕರ ಬೀಟ್ರೂಟ್​​ ವೈನ್​ ತಯಾರಿಸಿ, ರೆಸಿಪಿ ಇಲ್ಲಿದೆ

ಬೀಟ್ರೂಟ್​ನಲ್ಲಿ ಪೌಷ್ಟಿಕಾಂಶಗಳು ಸಮೃದ್ಧವಾಗಿದ್ದು, ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಆದ್ದರಿಂದ ನೀವು ಮನೆಯಲ್ಲಿಯೇ ಬೀಟ್ರೂಟ್​​ನ ವೈನ್​​ ತಯಾರಿಸಿ ಸವಿಯಿರಿ.

Beetroot wine: ಆರೋಗ್ಯಕರ ಬೀಟ್ರೂಟ್​​ ವೈನ್​ ತಯಾರಿಸಿ, ರೆಸಿಪಿ ಇಲ್ಲಿದೆ
ಬೀಟ್ರೂಟ್​​ ವೈನ್Image Credit source: Onmanorama
Follow us
ಅಕ್ಷತಾ ವರ್ಕಾಡಿ
|

Updated on:Feb 21, 2023 | 4:30 PM

ಬೀಟ್ರೂಟ್​ನಲ್ಲಿ ಪೌಷ್ಟಿಕಾಂಶಗಳು ಸಮೃದ್ಧವಾಗಿದ್ದು, ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಸೋಡಿಯಂ, ಕಬ್ಬಿಣ, ಪೊಟ್ಯಾಷಿಯಂ, ವಿಟಮಿನ್ ಬಿ-6, ರಂಜಕ, ಮೆಗ್ನೀಷಿಯಂ ಮುಂತಾದ ಪೋಷಕಾಂಶಗಳು ಬೀಟ್ರೂಟ್​ನಲ್ಲಿ ಕಂಡುಬರುತ್ತವೆ. ಈ ತರಕಾರಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಮಲಬದ್ಧತೆಯ ಸಮಸ್ಯೆಯಿಂದ ಪರಿಹಾರವನ್ನು ನೀಡುತ್ತದೆ. ಜೊತೆಗೆ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ನೀವು ಮನೆಯಲ್ಲಿಯೇ ಬೀಟ್ರೂಟ್​​ನ ವೈನ್​​ ತಯಾರಿಸಿ ಸವಿಯಿರಿ. ಬೀಟ್ರೂಟ್​​ ವೈನ್​ ಮಾಡುವ ಸುಲಭ ವಿಧಾನ ಇಲ್ಲಿದೆ.

ಬೀಟ್ರೂಟ್​​ ವೈನ್​ ಮಾಡುವ ವಿಧಾನ:

ಹಂತ 1: 

ಮೊದಲು 4 ಬೀಟ್ರೂಟ್​​ ತೆಗೆದುಕೊಂಡು ಅದನ್ನು ಚೆನ್ನಾಗಿ ತೊಳೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕದಾಗಿ ಕತ್ತರಿಸಿ ಕುಕ್ಕರ್​ನಲ್ಲಿ ಹಾಕಿ. ಜೊತೆಗೆ ಚಕ್ಕೆ, ಲವಂಗ, ಏಲಕ್ಕಿ, ಶುಂಠಿ ಮತ್ತು ಬೇಯಲು ಬೇಕಾದಷ್ಟು ನೀರು ಹಾಕಿ ಬೇಯಿಸಿ. ಸುಮಾರು 2ಲೀಟರ್​​ನಷ್ಟು ನೀರು ಸೇರಿಸಿ. ಒಂದು​ ವಿಸಿಲ್​​ ಬರುವ ವರೆಗೆ ಬೇಯಿಸಿ, ನಂತರ ತಣ್ಣಗಾಗಲು ಬಿಡಿ.

ಇದನ್ನೂ ಓದಿ: ಮನೆಯಲ್ಲಿ ಸುಲಭವಾಗಿ ಮಾಡುಬಹುದು ವೈನ್, ಇಲ್ಲಿದೆ ರೆಸಿಪಿ ಟಿಪ್ಸ್

ಹಂತ 2:

ನಂತರ ಒಂದು ಮಧ್ಯಮ ಗಾತ್ರದ ಗ್ಲಾಸ್​​ ಜಾರ್​​ ತೆಗೆದುಕೊಳ್ಳಿ. ನಂತರ ಇದಕ್ಕೆ ಈಗಾಗಲೇ ಬೇಯಿಸಿಟ್ಟ ಬೀಟ್ರೂಟ್​​ನ್ನು ನೀರು ಸಮೇತ ಹಾಕಿ. ನಂತರ ಇದಕ್ಕೆ 1/4 ಕಪ್​​​ ಗೋಧಿಯನ್ನು ಹಾಕಿ. ಜೊತೆಗೆ 1/2 ಟೀ ಸ್ಪೂನ್​​​ ಹೀಸ್ಟ್​​​ ಪೌಡರ್​ ಹಾಕಿ. ಇದನ್ನು ಯಾವುದೇ ನೀರಿನ ಅಂಶವಿಲ್ಲದಿರುವ ಸೌಟು ಬಳಸಿ ಮಿಕ್ಸ್​​​ ಮಾಡಿ. ಇದಕ್ಕೆ ಈಗ ಅರ್ಧ ಕಿಲೋ ಸಕ್ಕರೆ ಹಾಕಿ. ಸಕ್ಕರೆ ಕರಗುವ ವರೆಗೆ ಚೆನ್ನಾಗಿ ಮಿಶ್ರಣ ಮಾಡಿ. ಈಗ ಈ ಗ್ಲಾಸ್​​ ಜಾರ್​​ನ್ನು ಕಾಟನ್​​ ಬಟ್ಟೆಯನ್ನು ಬಳಸಿ ಗಟ್ಟಿಯಾಗಿ ಕಟ್ಟಿ 7 ದಿನಗಳ ವರೆಗೆ ಇಡಿ. 7 ದಿನದ ನಂತರ ಇದನ್ನು ಚೆನ್ನಾಗಿ ಸೋಸಿ ಒಂದು ಜಾರ್​​ನಿಂದ ಇನ್ನೊಂದು ಜಾರ್​​ಗೆ ವರ್ಗಾಯಿಸಿ. ಈಗ ಬೀಟ್ರೂಟ್​​ ವೈನ್ ಸಿದ್ಧವಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:30 pm, Tue, 21 February 23

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ