AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beetroot wine: ಆರೋಗ್ಯಕರ ಬೀಟ್ರೂಟ್​​ ವೈನ್​ ತಯಾರಿಸಿ, ರೆಸಿಪಿ ಇಲ್ಲಿದೆ

ಬೀಟ್ರೂಟ್​ನಲ್ಲಿ ಪೌಷ್ಟಿಕಾಂಶಗಳು ಸಮೃದ್ಧವಾಗಿದ್ದು, ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಆದ್ದರಿಂದ ನೀವು ಮನೆಯಲ್ಲಿಯೇ ಬೀಟ್ರೂಟ್​​ನ ವೈನ್​​ ತಯಾರಿಸಿ ಸವಿಯಿರಿ.

Beetroot wine: ಆರೋಗ್ಯಕರ ಬೀಟ್ರೂಟ್​​ ವೈನ್​ ತಯಾರಿಸಿ, ರೆಸಿಪಿ ಇಲ್ಲಿದೆ
ಬೀಟ್ರೂಟ್​​ ವೈನ್Image Credit source: Onmanorama
ಅಕ್ಷತಾ ವರ್ಕಾಡಿ
|

Updated on:Feb 21, 2023 | 4:30 PM

Share

ಬೀಟ್ರೂಟ್​ನಲ್ಲಿ ಪೌಷ್ಟಿಕಾಂಶಗಳು ಸಮೃದ್ಧವಾಗಿದ್ದು, ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಸೋಡಿಯಂ, ಕಬ್ಬಿಣ, ಪೊಟ್ಯಾಷಿಯಂ, ವಿಟಮಿನ್ ಬಿ-6, ರಂಜಕ, ಮೆಗ್ನೀಷಿಯಂ ಮುಂತಾದ ಪೋಷಕಾಂಶಗಳು ಬೀಟ್ರೂಟ್​ನಲ್ಲಿ ಕಂಡುಬರುತ್ತವೆ. ಈ ತರಕಾರಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಮಲಬದ್ಧತೆಯ ಸಮಸ್ಯೆಯಿಂದ ಪರಿಹಾರವನ್ನು ನೀಡುತ್ತದೆ. ಜೊತೆಗೆ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ನೀವು ಮನೆಯಲ್ಲಿಯೇ ಬೀಟ್ರೂಟ್​​ನ ವೈನ್​​ ತಯಾರಿಸಿ ಸವಿಯಿರಿ. ಬೀಟ್ರೂಟ್​​ ವೈನ್​ ಮಾಡುವ ಸುಲಭ ವಿಧಾನ ಇಲ್ಲಿದೆ.

ಬೀಟ್ರೂಟ್​​ ವೈನ್​ ಮಾಡುವ ವಿಧಾನ:

ಹಂತ 1: 

ಮೊದಲು 4 ಬೀಟ್ರೂಟ್​​ ತೆಗೆದುಕೊಂಡು ಅದನ್ನು ಚೆನ್ನಾಗಿ ತೊಳೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕದಾಗಿ ಕತ್ತರಿಸಿ ಕುಕ್ಕರ್​ನಲ್ಲಿ ಹಾಕಿ. ಜೊತೆಗೆ ಚಕ್ಕೆ, ಲವಂಗ, ಏಲಕ್ಕಿ, ಶುಂಠಿ ಮತ್ತು ಬೇಯಲು ಬೇಕಾದಷ್ಟು ನೀರು ಹಾಕಿ ಬೇಯಿಸಿ. ಸುಮಾರು 2ಲೀಟರ್​​ನಷ್ಟು ನೀರು ಸೇರಿಸಿ. ಒಂದು​ ವಿಸಿಲ್​​ ಬರುವ ವರೆಗೆ ಬೇಯಿಸಿ, ನಂತರ ತಣ್ಣಗಾಗಲು ಬಿಡಿ.

ಇದನ್ನೂ ಓದಿ: ಮನೆಯಲ್ಲಿ ಸುಲಭವಾಗಿ ಮಾಡುಬಹುದು ವೈನ್, ಇಲ್ಲಿದೆ ರೆಸಿಪಿ ಟಿಪ್ಸ್

ಹಂತ 2:

ನಂತರ ಒಂದು ಮಧ್ಯಮ ಗಾತ್ರದ ಗ್ಲಾಸ್​​ ಜಾರ್​​ ತೆಗೆದುಕೊಳ್ಳಿ. ನಂತರ ಇದಕ್ಕೆ ಈಗಾಗಲೇ ಬೇಯಿಸಿಟ್ಟ ಬೀಟ್ರೂಟ್​​ನ್ನು ನೀರು ಸಮೇತ ಹಾಕಿ. ನಂತರ ಇದಕ್ಕೆ 1/4 ಕಪ್​​​ ಗೋಧಿಯನ್ನು ಹಾಕಿ. ಜೊತೆಗೆ 1/2 ಟೀ ಸ್ಪೂನ್​​​ ಹೀಸ್ಟ್​​​ ಪೌಡರ್​ ಹಾಕಿ. ಇದನ್ನು ಯಾವುದೇ ನೀರಿನ ಅಂಶವಿಲ್ಲದಿರುವ ಸೌಟು ಬಳಸಿ ಮಿಕ್ಸ್​​​ ಮಾಡಿ. ಇದಕ್ಕೆ ಈಗ ಅರ್ಧ ಕಿಲೋ ಸಕ್ಕರೆ ಹಾಕಿ. ಸಕ್ಕರೆ ಕರಗುವ ವರೆಗೆ ಚೆನ್ನಾಗಿ ಮಿಶ್ರಣ ಮಾಡಿ. ಈಗ ಈ ಗ್ಲಾಸ್​​ ಜಾರ್​​ನ್ನು ಕಾಟನ್​​ ಬಟ್ಟೆಯನ್ನು ಬಳಸಿ ಗಟ್ಟಿಯಾಗಿ ಕಟ್ಟಿ 7 ದಿನಗಳ ವರೆಗೆ ಇಡಿ. 7 ದಿನದ ನಂತರ ಇದನ್ನು ಚೆನ್ನಾಗಿ ಸೋಸಿ ಒಂದು ಜಾರ್​​ನಿಂದ ಇನ್ನೊಂದು ಜಾರ್​​ಗೆ ವರ್ಗಾಯಿಸಿ. ಈಗ ಬೀಟ್ರೂಟ್​​ ವೈನ್ ಸಿದ್ಧವಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:30 pm, Tue, 21 February 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ