AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beetroot Idli: ಆರೋಗ್ಯಕರ ಬೀಟ್ರೂಟ್ ಇಡ್ಲಿ ತಯಾರಿಸಿ ಸವಿಯಿರಿ

ಬೀಟ್ರೂಟ್ ಬಳಸಿ ಇಡ್ಲಿ ತಯಾರಿಸಬಹುದು ಎಂದು ನಿಮಗೆ ತಿಳಿದಿದೆಯೇ? ಬೀಟ್ರೂಟ್​ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯಕವಾಗಿದೆ.

Beetroot Idli: ಆರೋಗ್ಯಕರ ಬೀಟ್ರೂಟ್ ಇಡ್ಲಿ ತಯಾರಿಸಿ ಸವಿಯಿರಿ
ಬೀಟ್ರೂಟ್ ಇಡ್ಲಿ Image Credit source: Youtube
TV9 Web
| Edited By: |

Updated on: Dec 29, 2022 | 5:29 PM

Share

ದಕ್ಷಿಣ ಭಾರತ(South India)ದ ಬೆಳಗಿನ ಉಪಹಾರ(Breakfast)ದಲ್ಲಿ ಇಡ್ಲಿ ಸಾಂಬಾರ್ ಅತ್ಯಂತ ಜನಪ್ರಿಯ. ಸಾಮಾನ್ಯವಾಗಿ ಅಕ್ಕಿ, ಉದ್ದಿನಬೇಳೆ, ರಾಗಿ ಹಿಟ್ಟು ಮುಂತಾದವುಗಳಿಂದ ಮಾಡುವುದು, ಈಗಾಗಲೇ ತಿಳಿದಿರುವ ವಿಷಯ. ಆದರೆ ಬೀಟ್ರೂಟ್ ಬಳಸಿ ಇಡ್ಲಿ ತಯಾರಿಸಬಹುದು ಎಂದು ನಿಮಗೆ ತಿಳಿದಿದೆಯೇ? ಬೀಟ್ರೂಟ್​ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯಕವಾಗಿದೆ. ಆದ್ದರಿಂದ ನೀವೂ ಕೂಡ ಒಮ್ಮೆ ಮನೆಯಲ್ಲಿ ಆರೋಗ್ಯಕರವಾದ ಈ ಬೀಟ್ರೂಟ್ ಇಡ್ಲಿ ತಯಾರಿಸಿ.

ಬೀಟ್ರೂಟ್ ಇಡ್ಲಿಗೆ ಬೇಕಾಗುವ ಸಾಮಾಗ್ರಿಗಳು:

1 ಕಪ್ ಹುರಿದ ರವೆ 1 ಕಪ್ ಮೊಸರು ರುಚಿಗೆ ತಕ್ಕಷ್ಟು ಉಪ್ಪು 1/2 ಕಪ್ ಬೀಟ್ರೂಟ್ ಪ್ಯೂರೀ( ಮಾಡುವ ವಿಧಾನ ಕೆಳಗೆ ನೀಡಲಾಗಿದೆ) 1/2 ಇಂಚು ಶುಂಠಿ 3 ಹಸಿರು ಮೆಣಸಿನಕಾಯಿ 1 ಟೀಸ್ಪೂನ್ ಗೋಡಂಬಿ 1 ಟೀಸ್ಪೂನ್ ಉದ್ದಿನ ಬೇಳೆ 5-6 ಕರಿಬೇವಿನ ಎಲೆಗಳು

ಇದನ್ನೂ ಓದಿ: ಚಮಚ ಬಿಡಿ, ಕೈಯಿಂದ ತಿನ್ನಿ ಅದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳ ತಿಳಿಯಿರಿ

ಬೀಟ್ರೂಟ್ ಇಡ್ಲಿ ಮಾಡುವ ವಿಧಾನ :

  • ಮೊದಲು ಬೀಟ್ರೂಟ್ ಕತ್ತರಿಸಿ ಮಿಕ್ಸಿ ಜಾರ್‌ಗೆ ತೆಗೆದುಕೊಂಡು ಅದಕ್ಕೆ ಹಸಿಮೆಣಸಿನಕಾಯಿ ಮತ್ತು ಶುಂಠಿ ಸೇರಿಸಿ ಸ್ವಲ್ಪ ನೀರು ಬೆರೆಸಿ ನಯವಾಗಿ ರುಬ್ಬಿ ಕೊಳ್ಳಿ. ಈಗ ಬೀಟ್ರೂಟ್ ಪ್ಯೂರೀ ಸಿದ್ದವಾಗಿದೆ.
  • ನಂತರ ಒಂದು ಬೌಲ್ ತೆಗೆದುಕೊಂಡು ಅದಕ್ಕೆ 1 ಕಪ್ ಹುರಿದ ರವೆ, 1 ಕಪ್ ಮೊಸರು, ರುಚಿಗೆ ತಕ್ಕಷ್ಟು ಉಪ್ಪು ಮತ್ತು ಬೀಟ್ರೂಟ್ ಪ್ಯೂರೀ ಸೇರಿಸಿ ಮಿಶ್ರಣ ಮಾಡಿ. ಸ್ವಲ್ಪ ನೀರು ಕೂಡ ಹಾಕಿ. ಈಗ ಹಿಟ್ಟು ತಯಾರಾಗಿದೆ.
  • ನಂತರ ಒಂದು ಬಾಣಲೆಗೆ ಸ್ವಲ್ಪ ಎಣ್ಣೆ ಹಾಕಿ ಬಿಸಿಯಾಗಲು ಬಿಡಿ. ಬಿಸಿಯಾದ ಮೇಲೆ ಇದಕ್ಕೆ 1 ಟೀಸ್ಪೂನ್ ಉದ್ದಿನ ಬೇಳೆ, 5-6 ಕರಿಬೇವಿನ ಎಲೆಗಳು ಹಾಕಿ ಹುರಿಯಿರಿ. ಈಗ ಇದನ್ನು ಈಗಾಗಲೇ ಮಾಡಿಟ್ಟ ಹಿಟ್ಟಿನೊಂದಿಗೆ ಬೆರೆಸಿ.
  • ನಂತರ ಇದನ್ನು ಇಡ್ಲಿ ಪಾತ್ರೆಗೆ ಹಾಕಿ ಮತ್ತು 10 ನಿಮಿಷಗಳ ಕಾಲ ಸ್ಟೀಮ್​ನಲ್ಲಿ ಬೇಯಿಸಿ.
  • ಈಗ ಆರೋಗ್ಯಕರ ಬೀಟ್ರೂಟ್ ಇಡ್ಲಿ ಸಿದ್ದವಾಗಿದೆ. ಬಿಸಿ ಬಿಸಿಯಾಗಿ ತೆಂಗಿನಕಾಯಿಯ ಚಟ್ನಿಯೊಂದಿಗೆ ಸವಿಯಿರಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ