AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beetroot Idli: ಆರೋಗ್ಯಕರ ಬೀಟ್ರೂಟ್ ಇಡ್ಲಿ ತಯಾರಿಸಿ ಸವಿಯಿರಿ

ಬೀಟ್ರೂಟ್ ಬಳಸಿ ಇಡ್ಲಿ ತಯಾರಿಸಬಹುದು ಎಂದು ನಿಮಗೆ ತಿಳಿದಿದೆಯೇ? ಬೀಟ್ರೂಟ್​ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯಕವಾಗಿದೆ.

Beetroot Idli: ಆರೋಗ್ಯಕರ ಬೀಟ್ರೂಟ್ ಇಡ್ಲಿ ತಯಾರಿಸಿ ಸವಿಯಿರಿ
ಬೀಟ್ರೂಟ್ ಇಡ್ಲಿ Image Credit source: Youtube
TV9 Web
| Edited By: |

Updated on: Dec 29, 2022 | 5:29 PM

Share

ದಕ್ಷಿಣ ಭಾರತ(South India)ದ ಬೆಳಗಿನ ಉಪಹಾರ(Breakfast)ದಲ್ಲಿ ಇಡ್ಲಿ ಸಾಂಬಾರ್ ಅತ್ಯಂತ ಜನಪ್ರಿಯ. ಸಾಮಾನ್ಯವಾಗಿ ಅಕ್ಕಿ, ಉದ್ದಿನಬೇಳೆ, ರಾಗಿ ಹಿಟ್ಟು ಮುಂತಾದವುಗಳಿಂದ ಮಾಡುವುದು, ಈಗಾಗಲೇ ತಿಳಿದಿರುವ ವಿಷಯ. ಆದರೆ ಬೀಟ್ರೂಟ್ ಬಳಸಿ ಇಡ್ಲಿ ತಯಾರಿಸಬಹುದು ಎಂದು ನಿಮಗೆ ತಿಳಿದಿದೆಯೇ? ಬೀಟ್ರೂಟ್​ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯಕವಾಗಿದೆ. ಆದ್ದರಿಂದ ನೀವೂ ಕೂಡ ಒಮ್ಮೆ ಮನೆಯಲ್ಲಿ ಆರೋಗ್ಯಕರವಾದ ಈ ಬೀಟ್ರೂಟ್ ಇಡ್ಲಿ ತಯಾರಿಸಿ.

ಬೀಟ್ರೂಟ್ ಇಡ್ಲಿಗೆ ಬೇಕಾಗುವ ಸಾಮಾಗ್ರಿಗಳು:

1 ಕಪ್ ಹುರಿದ ರವೆ 1 ಕಪ್ ಮೊಸರು ರುಚಿಗೆ ತಕ್ಕಷ್ಟು ಉಪ್ಪು 1/2 ಕಪ್ ಬೀಟ್ರೂಟ್ ಪ್ಯೂರೀ( ಮಾಡುವ ವಿಧಾನ ಕೆಳಗೆ ನೀಡಲಾಗಿದೆ) 1/2 ಇಂಚು ಶುಂಠಿ 3 ಹಸಿರು ಮೆಣಸಿನಕಾಯಿ 1 ಟೀಸ್ಪೂನ್ ಗೋಡಂಬಿ 1 ಟೀಸ್ಪೂನ್ ಉದ್ದಿನ ಬೇಳೆ 5-6 ಕರಿಬೇವಿನ ಎಲೆಗಳು

ಇದನ್ನೂ ಓದಿ: ಚಮಚ ಬಿಡಿ, ಕೈಯಿಂದ ತಿನ್ನಿ ಅದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳ ತಿಳಿಯಿರಿ

ಬೀಟ್ರೂಟ್ ಇಡ್ಲಿ ಮಾಡುವ ವಿಧಾನ :

  • ಮೊದಲು ಬೀಟ್ರೂಟ್ ಕತ್ತರಿಸಿ ಮಿಕ್ಸಿ ಜಾರ್‌ಗೆ ತೆಗೆದುಕೊಂಡು ಅದಕ್ಕೆ ಹಸಿಮೆಣಸಿನಕಾಯಿ ಮತ್ತು ಶುಂಠಿ ಸೇರಿಸಿ ಸ್ವಲ್ಪ ನೀರು ಬೆರೆಸಿ ನಯವಾಗಿ ರುಬ್ಬಿ ಕೊಳ್ಳಿ. ಈಗ ಬೀಟ್ರೂಟ್ ಪ್ಯೂರೀ ಸಿದ್ದವಾಗಿದೆ.
  • ನಂತರ ಒಂದು ಬೌಲ್ ತೆಗೆದುಕೊಂಡು ಅದಕ್ಕೆ 1 ಕಪ್ ಹುರಿದ ರವೆ, 1 ಕಪ್ ಮೊಸರು, ರುಚಿಗೆ ತಕ್ಕಷ್ಟು ಉಪ್ಪು ಮತ್ತು ಬೀಟ್ರೂಟ್ ಪ್ಯೂರೀ ಸೇರಿಸಿ ಮಿಶ್ರಣ ಮಾಡಿ. ಸ್ವಲ್ಪ ನೀರು ಕೂಡ ಹಾಕಿ. ಈಗ ಹಿಟ್ಟು ತಯಾರಾಗಿದೆ.
  • ನಂತರ ಒಂದು ಬಾಣಲೆಗೆ ಸ್ವಲ್ಪ ಎಣ್ಣೆ ಹಾಕಿ ಬಿಸಿಯಾಗಲು ಬಿಡಿ. ಬಿಸಿಯಾದ ಮೇಲೆ ಇದಕ್ಕೆ 1 ಟೀಸ್ಪೂನ್ ಉದ್ದಿನ ಬೇಳೆ, 5-6 ಕರಿಬೇವಿನ ಎಲೆಗಳು ಹಾಕಿ ಹುರಿಯಿರಿ. ಈಗ ಇದನ್ನು ಈಗಾಗಲೇ ಮಾಡಿಟ್ಟ ಹಿಟ್ಟಿನೊಂದಿಗೆ ಬೆರೆಸಿ.
  • ನಂತರ ಇದನ್ನು ಇಡ್ಲಿ ಪಾತ್ರೆಗೆ ಹಾಕಿ ಮತ್ತು 10 ನಿಮಿಷಗಳ ಕಾಲ ಸ್ಟೀಮ್​ನಲ್ಲಿ ಬೇಯಿಸಿ.
  • ಈಗ ಆರೋಗ್ಯಕರ ಬೀಟ್ರೂಟ್ ಇಡ್ಲಿ ಸಿದ್ದವಾಗಿದೆ. ಬಿಸಿ ಬಿಸಿಯಾಗಿ ತೆಂಗಿನಕಾಯಿಯ ಚಟ್ನಿಯೊಂದಿಗೆ ಸವಿಯಿರಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?