AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Benefits of Curry leaves: ಕರಿಬೇವಿನ ಎಲೆಗಳಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ತಿಳಿದಿದೆಯಾ? ಮಾಹಿತಿ ಇಲ್ಲಿದೆ

ಭಾರತದ ಪ್ರತಿಯೊಂದು ಕಿಚನ್ ಗಾರ್ಡನ್ ನಲ್ಲಿ ಕಂಡುಬರುವ ಕರಿಬೇವು ಅಥವಾ ಕಡಿ ಪಟ್ಟಾ ಅನೇಕ ಭಕ್ಷ್ಯಗಳಿಗೆ ಆರೋಗ್ಯಕರ ರುಚಿಯನ್ನು ನೀಡುತ್ತದೆ. ಆದರೆ ಅದರಲ್ಲಿ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ? ಹಾಗಾದರೆ ನಿಮ್ಮನ್ನು ಆಶ್ಚರ್ಯಚಕಿತಗೊಳಿಸುವ ಕೆಲವು ಸಂಗತಿಗಳು ಇಲ್ಲಿವೆ. ಒಂದು ಟನ್ ಆರೋಗ್ಯ ಪ್ರಯೋಜನಗಳಿಂದ ತುಂಬಿರುವ ಕರಿಬೇವಿನ ಎಲೆಗಳ ಬಗ್ಗೆ ಮತ್ತಷ್ಟು ತಿಳಿದುಕೊಳ್ಳಿ.

Benefits of Curry leaves: ಕರಿಬೇವಿನ ಎಲೆಗಳಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ತಿಳಿದಿದೆಯಾ? ಮಾಹಿತಿ ಇಲ್ಲಿದೆ
Curry leavesImage Credit source: Pinterest
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 20, 2023 | 6:39 PM

Share

ಕರಿಬೇವಿನ ಎಲೆ ಬಳಸದೆಯೇ ಅಡುಗೆ ಮಾಡಲು ಸಾಧ್ಯವಿಲ್ಲ. ಒಂದು  ಹತ್ತು ಮನೆಗಳಲ್ಲಿ, ಒಂಬತ್ತು ಮನೆಯಲ್ಲಿಯಾದರೂ ಈ ಗಿಡವನ್ನು ಬೆಳೆಸಿಕೊಂಡಿರುತ್ತಾರೆ. ಸಾಮಾನ್ಯವಾಗಿ ಸಾಂಬಾರು, ಪೋಹಾ, ಅಂತಹ ಅನೇಕ ಭಕ್ಷ್ಯಗಳನ್ನು ಸವಿಯಲು ಇದನ್ನು ಬಳಸಲಾಗುತ್ತದೆ .ಒಗ್ಗರಣೆ ಸೊಪ್ಪು ಅಥವಾ ಕರಿಬೇವಿನ ಎಲೆಗಳು ಸಹ ಒಂದು ಟನ್ ಆರೋಗ್ಯ ಪ್ರಯೋಜನಗಳಿಂದ ತುಂಬಿರುತ್ತವೆ ಎಂಬುದು ನಿಮಗೆ ತಿಳಿದಿದೆಯಾ? ನಿಮ್ಮನ್ನು ಆಶ್ಚರ್ಯಚಕಿತಗೊಳಿಸುವ ಕೆಲವು ಸಂಗತಿಗಳು ಇಲ್ಲಿವೆ.

1. ಕರಿಬೇವಿನ ಎಲೆಗಳು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ:

ಕರಿಬೇವಿನಲ್ಲಿ ಜೀರ್ಣಕ್ರಿಯೆಯನ್ನು ಉತ್ತೇಜಿಸುವ ವಿರೇಚಕ ಗುಣಲಕ್ಷಣಗಳಿವೆ. ಆಯುರ್ವೇದವು ಇದನ್ನು ಕರುಳಿನ ಸಮಸ್ಯೆಗಳಿಗೆ ಚಿಕಿತ್ಸೆ ನೀಡುವ ಪಾನೀಯವೆಂದು ಪರಿಗಣಿಸುತ್ತದೆ. ನೀವು ಕರಿಬೇವಿನ ಎಲೆಯ ಗೊಂಚಲನ್ನು ನಿಂಬೆ ರಸದೊಂದಿಗೆ ಅರೆದು ಖಾಲಿ ಹೊಟ್ಟೆಯಲ್ಲಿ ಕುಡಿಯಬಹುದು ಅಥವಾ ಒಂದು ಲೋಟ ಲಸ್ಸಿಗೆ ಈ ಎಲೆಗಳನ್ನು ಸೇರಿಸಬಹುದು.

2. ಇದು ಸೋಂಕುಗಳನ್ನು ದೂರವಿಡುತ್ತದೆ:

ಕರಿಬೇವಿನ ಎಲೆಗಳು ಕಾರ್ಬಜೋಲ್ ಆಲ್ಕಲಾಯ್ಡ್ಗಳು ಎಂಬ ಸಂಯುಕ್ತವನ್ನು ಹೊಂದಿರುತ್ತವೆ, ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ.

3. ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ:

ಪ್ಲಾಂಟ್ ಫುಡ್ಸ್ ಫಾರ್ ಹ್ಯೂಮನ್ ನ್ಯೂಟ್ರಿಷನ್ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನವು ಕರಿಬೇವಿನ ಎಲೆಗಳು ಎಲ್ಡಿಎಲ್ ಅಥವಾ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿವೆ ಎಂದು ತೀರ್ಮಾನಿಸಿದೆ, ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡುವುದರ ಜೊತೆಗೆ ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

4. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಣದಲ್ಲಿಡುತ್ತದೆ:

ಪ್ಲಾಂಟ್ ಫುಡ್ಸ್ ಫಾರ್ ಹ್ಯೂಮನ್ ನ್ಯೂಟ್ರಿಷನ್ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನವು ಕರಿಬೇವಿನ ಎಲೆಗಳು ದೇಹದಲ್ಲಿ ಇನ್ಸುಲಿನ್ ಚಟುವಟಿಕೆಯ ಮೇಲೆ ಧನಾತ್ಮಕ ಪರಿಣಾಮ ಬೀರುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಕಂಡು ಹಿಡಿದಿದೆ. ಆದ್ದರಿಂದ, ನಿಮ್ಮ ಎಲ್ಲಾ ಊಟ, ತಿಂಡಿಗಳಲ್ಲಿ ಕರಿಬೇವಿನ ಎಲೆಯನ್ನು ಸೇರಿಸಿಕೊಳ್ಳಿ.

ಇದನ್ನೂ ಓದಿ: ಹೀರೆಕಾಯಿಯಲ್ಲಿ ಅಡಗಿದೆ ಆರೋಗ್ಯ ಪ್ರಯೋಜನ

5.  ಪಿತ್ತಜನಕಾಂಗವನ್ನು ಸಹ ರಕ್ಷಿಸಲಾಗುತ್ತದೆ:

ಸೋಂಕುಗಳನ್ನು ದೂರವಿಡುವ ಅದೇ ಕಾರ್ಬಜೋಲ್ ಆಲ್ಕಲಾಯ್ಡ್ಗಳು ಯಾವುದೇ ಬ್ಯಾಕ್ಟೀರಿಯಾದ ದಾಳಿಯಿಂದಲೂ ಯಕೃತ್ತನ್ನು ರಕ್ಷಿಸುತ್ತವೆ.

6.  ಕಣ್ಣಿನ ಆರೋಗ್ಯ:

ಕರಿಬೇವಿನ ಎಲೆಗಳು ವಿಟಮಿನ್ ಎ ಯಿಂದ ತುಂಬಿರುತ್ತವೆ, ಇದು ಕ್ಯಾರೊಟಿನಾಯ್ಡ್ಗಳನ್ನು ಹೊಂದಿರುತ್ತದೆ. ಈ ರಾಸಾಯನಿಕಗಳು ಕಾರ್ನಿಯಾ ಮತ್ತು ಕಣ್ಣಿನ ಮೇಲ್ಮೈಯನ್ನು ರಕ್ಷಿಸುತ್ತವೆ ಮತ್ತು ದೌರ್ಬಲ್ಯ ಅಥವಾ ದೃಷ್ಟಿ ನಷ್ಟವನ್ನು ತಡೆಯುತ್ತವೆ.

7. ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತವೆ:

ಕರಿಬೇವಿನ ಎಲೆಗಳು ಉತ್ಕರ್ಷಣ ನಿರೋಧಕಗಳ ಶಕ್ತಿ ಕೇಂದ್ರವಾಗಿದೆ. ಇದು ದೇಹವನ್ನು ವಿಷಕಾರಿ ವಸ್ತುಗಳು ಮತ್ತು ಸಂಗ್ರಹವಾದ ಕೊಬ್ಬನ್ನು ತೊಡೆದು ಹಾಕುತ್ತದೆ. ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ನಿಮ್ಮ ಒಟ್ಟಾರೆ ಆರೋಗ್ಯವನ್ನು ಹೆಚ್ಚಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್