AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಮಲಗುವ ಒಂದು ಲೋಟ ಕೊತ್ತಂಬರಿ ಬೀಜದ ನೀರನ್ನು ಕುಡಿಯುವುದರಿಂದ ಏನಾಗುತ್ತೆ ಗೊತ್ತಾ?

ಅಡುಗೆಯ ರುಚಿಯನ್ನು ಹೆಚ್ಚಿಸುವಲ್ಲಿ ಮುಖ್ಯ ಪಾತ್ರ ವಹಿಸುವ ಕೊತ್ತಂಬರಿ ಬೀಜ ಆರೋಗ್ಯಕ್ಕೂ ಸಖತ್ ಪ್ರಯೋಜನಕಾರಿ. ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತ ನಿವಾರಕ ಗುಣಗಳಲ್ಲಿ ಸಮೃದ್ಧವಾಗಿರುವ ಕೊತ್ತಂಬರಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹೀಗಿರುವಾಗ ಪ್ರತಿ ರಾತ್ರಿ ಮಲಗುವ ಒಂದು ಗಂಟೆಗೆ ಮುನ್ನ ಒಂದು ಗ್ಲಾಸ್‌ ನೆನೆಸಿಟ್ಟ ಕೊತ್ತಂಬರಿ ಬೀಜದ ನೀರನ್ನು ಕುಡಿಯುವ ಮೂಲಕ ಜೀರ್ಣಕ್ರಿಯೆಯಿಂದ ಹಿಡಿದು ಸಕ್ಕರೆ ಮಟ್ಟ ನಿಯಂತ್ರಣದವರೆಗೆ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ರಾತ್ರಿ ಮಲಗುವ ಒಂದು ಲೋಟ ಕೊತ್ತಂಬರಿ ಬೀಜದ ನೀರನ್ನು ಕುಡಿಯುವುದರಿಂದ ಏನಾಗುತ್ತೆ ಗೊತ್ತಾ?
ಕೊತ್ತಂಬರಿ ಬೀಜದ ನೀರು Image Credit source: Getty Images
ಮಾಲಾಶ್ರೀ ಅಂಚನ್​
|

Updated on: Aug 16, 2026 | 7:42 PM

Share

ಪ್ರತಿಯೊಂದು ಭಾರತೀಯ ಅಡುಗೆಯಲ್ಲೂ ಕೊತ್ತಂಬರಿ ಬೀಜವನ್ನು (coriander seed) ಬಳಕೆ ಮಾಡೇ ಮಾಡುತ್ತೇವೆ. ಅಡುಗೆಯ ರುಚಿಯನ್ನು ಹೆಚ್ಚಿಸುವ ಈ ಪುಟ್ಟ ಬೀಜ ಆರೋಗ್ಯ ವೃದ್ಧಿಗೂ ಸಖತ್ ಪ್ರಯೋಜನಕಾರಿ. ಕೊತ್ತಂಬರಿ ಬೀಜ ಟೆರ್ಪೀನ್‌ಗಳು, ಕ್ವೆರ್ಸೆಟಿನ್ ಮತ್ತು ಟೋಕೋಫೆರಾಲ್‌ಗಳಂತಹ ಸಂಯುಕ್ತಗಳನ್ನು ಹೊಂದಿರುತ್ತವೆ. ಈ ಸಂಯುಕ್ತಗಳು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಕಾರಿ ಅಲ್ಲದೆ ಇವುಗಳಲ್ಲಿ  ಪೊಟ್ಯಾಸಿಯಮ್, ಆಂಟಿಆಕ್ಸಿಡೆಂಟ್‌ಗಳು, ನಾರು, ಫ್ಲೇವನಾಯ್ಡ್‌ಗಳು, ವಿಟಮಿನ್‌ಗಳು ಸಿ ಮತ್ತು ಕೆ, ಕಬ್ಬಿಣ, ಉತ್ಕರ್ಷಣ ನಿರೋಧಕ ಅಂಶಗಳಿದ್ದು, ಇವೆಲ್ಲವೂ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇಷ್ಟೆಲ್ಲಾ ಪೋಷಕಾಂಶಗಳನ್ನು ಹೊಂದಿರುವ ಕೊತ್ತಂಬರಿ ಬೀಜವನ್ನು ನೀರಿನಲ್ಲಿ ನೆನೆಸಿ ರಾತ್ರಿ ಮಲಗುವ ಒಂದು ಗಂಟೆಗೆ ಮುನ್ನ ಆ ನೀರನ್ನು ಕುಡಿಯುವುದರಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.

ಮಲಗುವ ಮುನ್ನ ಕೊತ್ತಂಬರಿ ನೀರು ಕುಡಿಯುವುದರಿಂದ ಲಭಿಸುವ ಪ್ರಯೋಜನಗಳೇನು?

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ:

ರಾತ್ರಿ ಮಲಗುವ ಮುನ್ನ ಕೊತ್ತಂಬರಿ ಬೀಜದ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದು ಹೊಟ್ಟೆಯುಬ್ಬರ, ಮಲಬದ್ಧತೆ ಮತ್ತು ಆಮ್ಲೀಯತೆಯ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಕೊತ್ತಂಬರಿ ಬೀಜದಲ್ಲಿರುವ ಜೀರ್ಣಕಾರಿ ಗುಣಗಳು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತವೆ ಮತ್ತು ಕ್ಯಾಲೊರಿಗಳನ್ನು ಸುಡಲು ಸಹಾಯ ಮಾಡುತ್ತವೆ.

ದೇಹಕ್ಕೆ ಜಲಸಂಚಯನವನ್ನು ಒದಗಿಸುತ್ತದೆ:

ನಿಮ್ಮ ದೇಹವನ್ನು ಹೈಡ್ರೇಟ್ ಆಗಿಡಲು ಬಯಸಿದರೆ, ನೀವು ಪ್ರತಿದಿನ ಕೊತ್ತಂಬರಿ ಬೀಜದ ನೀರನ್ನು ಕುಡಿಯಬಹುದು. ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಮಲಗುವ ಸಮಯಕ್ಕೆ ಸುಮಾರು ಒಂದು ಗಂಟೆ ಮೊದಲು ನೀವು ಸ್ವಲ್ಪ ಪ್ರಮಾಣದ ಕೊತ್ತಂಬರಿ ನೀರನ್ನು ಸೇವಿಸಬಹುದು. ಇದು ದೇಹಕ್ಕೆ ಜಲಸಂಚಯನವನ್ನು ಒದಗಿಸಲು ಸಹಕಾರಿ.

ರಕ್ತದಲ್ಲಿನ ಸಕ್ಕರೆ ನಿಯಂತ್ರಣದಲ್ಲಿಡುತ್ತದೆ:

ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು, ನೀವು ಪ್ರತಿ ರಾತ್ರಿ ಮಲಗುವ ಒಂದು ಗಂಟೆಗೆ ಮುನ್ನ ಕೊತ್ತಂಬರಿ ನೀರನ್ನು ಸೇವಿಸಬೇಕು. ನಿಮಗೆ ಮಧುಮೇಹವಿದ್ದರೆ ಮತ್ತು  ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ನಿಮ್ಮ ವೈದ್ಯರನ್ನು ಸಂಪರ್ಕಿಸಿದ ನಂತರವೇ ನೀವು ಕೊತ್ತಂಬರಿ ಬೀಜದ ನೀರನ್ನು ಸೇವನೆ ಮಾಡುವುದು ಉತ್ತಮ.

ದೇಹವನ್ನು ನಿರ್ವಿಷಗೊಳಿಸುತ್ತದೆ:

ಕೊತ್ತಂಬರಿ ನೀರು ದೇಹದಿಂದ ವಿಷವನ್ನು ಹೊರ ಹಾಕಿ ದೇಹವನ್ನು ಸಕ್ರಿಯ ಮತ್ತು ಆರೋಗ್ಯಕರವಾಗಿಡುತ್ತದೆ. ಪ್ರತಿದಿನ ಕೊತ್ತಂಬರಿ ನೀರು ಕುಡಿಯುವುದರಿಂದ ದೇಹವು ನಿರ್ವಿಷಗೊಳ್ಳುತ್ತದೆ. ಇದಲ್ಲದೆ, ಇದು  ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಪ್ರತಿದಿನ ಬೆಳಗ್ಗೆ 15 ನಿಮಿಷಗಳ ಬಾಲಾಸನ ಮಾಡಿ, ಎಲ್ಲಾ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿ

ತೂಕ ಇಳಿಸಿಕೊಳ್ಳಲು ಸಹಕಾರಿ:

ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ನೀವು ಖಂಡಿತವಾಗಿಯೂ ಕೊತ್ತಂಬರಿ ಬೀಜದ ನೀರನ್ನು ಕುಡಿಯಬಹುದು. ಈ ನೀರು ದೇಹದ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುತ್ತದೆ. ಇದು ಕೊಬ್ಬನ್ನು ಸುಡಲು ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆಇದು ಅತ್ಯುತ್ತಮ ಆಯ್ಕೆಯಾಗಿದೆ.

ಉತ್ತಮ ನಿದ್ರೆ ಪಡೆಯಲು ಸಹಕಾರಿ:

ಕೊತ್ತಂಬರಿ ಬೀಜಗಳು ಒತ್ತಡವನ್ನು ಕಡಿಮೆ ಮಾಡಲು ಮತ್ತು ನಿದ್ರೆಯನ್ನು ಉತ್ತೇಜಿಸಲು ಸಹಾಯ ಮಾಡುವ ಸಂಯುಕ್ತಗಳನ್ನು ಹೊಂದಿರುತ್ತವೆ. ಆದ್ದರಿಂದ ಪ್ರತಿರಾತ್ರಿ ಕೊತ್ತಂಬರಿ ಬೀಜದ ನೀರನ್ನು ಕುಡಿಯುವುದರಿಂದ ನಿದ್ರೆಯ ಗುಣಮಟ್ಟವನ್ನು ಸುಧಾರಿಸಬಹುದು.

ಬೆಳಿಗ್ಗೆ ಹಗುರವಾದ ಅನುಭವ:

ಕೊತ್ತಂಬರಿ ಬೀಜಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಮಲಗುವ ಮುನ್ನ ಕೊತ್ತಂಬರಿ ಬೀಜದ ನೀರನ್ನು ಕುಡಿದರೆ, ಬೆಳಿಗ್ಗೆ ಹೊತ್ತಿಗೆ ನಿಮ್ಮ ಹೊಟ್ಟೆ ತುಂಬಾ ಹಗುರವಾಗಿರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!