AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಹಲ್ಲುಜ್ಜುವ ಮೊದಲು ನೀರು ಕುಡಿಯಿರಿ, ಇದರಿಂದ ಹಲವು ಪ್ರಯೋಜನ 

Drinking Water Before Brushing: ಅನೇಕ ಜನರು ಬೆಳಗ್ಗೆ ಹಲ್ಲುಜ್ಜಿದ್ದ ನಂತರ ನೀರನ್ನು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಇನ್ನೂ ಕೆಲವರು ಎದ್ದ ತಕ್ಷಣ ನೀರು ಕುಡಿಯುತ್ತಾರೆ. ಹೀಗೆ ಹಲ್ಲುಜ್ಜದೆ ನೀರು ಕುಡಿಯುವುದರಿಂದ ಅನೇಕ ಆರೋಗ್ಯ ಲಾಭಗಳು ಲಭಿಸುತ್ತವೆ ಎನ್ನುತ್ತಾರೆ ವೈದ್ಯಕೀಯ ತಜ್ಞರು. 

ಬೆಳಗ್ಗೆ ಹಲ್ಲುಜ್ಜುವ ಮೊದಲು ನೀರು ಕುಡಿಯಿರಿ, ಇದರಿಂದ ಹಲವು ಪ್ರಯೋಜನ 
ಮಾಲಾಶ್ರೀ ಅಂಚನ್​
| Edited By: |

Updated on: May 20, 2024 | 5:50 PM

Share

ಬಹುತೇಕ ಹೆಚ್ಚಿನವರು ಬೆಳಗ್ಗೆ ಖಾಲಿ ಹೊಟ್ಟೆಗೆ ಒಂದು ಲೋಟ ನೀರನ್ನು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಅದರಲ್ಲಿ ಕೆಲವರು ಹಲ್ಲುಜ್ಜಿದ ಬಳಿಕ ನೀರನ್ನು ಕುಡಿದರೆ, ಇನ್ನೂ ಕೆಲವರು ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜದೆಯೇ ನೀರನ್ನು ಸೇವನೆ ಮಾಡುತ್ತಾರೆ. ಆದರೆ ಈ ಎರಡರಲ್ಲಿ ಯಾವುದು ಉತ್ತಮ ಎಂಬುದು ಅನೇಕ ಜನರಿಗೆ ಗೊತ್ತಿಲ್ಲ. ಹಾಗಾದರೆ ಈ ಎರಡರಲ್ಲಿ  ಯಾವುದು ಉತ್ತಮ ಎಂಬುದನ್ನು ತಿಳಿಯೋಣ.

ಬೆಳಗ್ಗೆ ಹಲ್ಲುಜ್ಜುವ ಮೊದಲು ನೀರು ಸೇವನೆ ಮಾಡುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳು:

ಬೆಳಗ್ಗೆ ಹಲ್ಲುಜ್ಜಿದ ಬಳಿಕ ನೀರು ಕುಡಿಯುವುದಕ್ಕಿಂತ ಹಲ್ಲುಜ್ಜುವ ಮುನ್ನ ಬಾಯಿ ಮುಕ್ಕಳಿಸಿ ಒಂದು ಲೋಟ ನೀರು ಕುಡಿದರೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಎನ್ನುತ್ತಾರೆ ತಜ್ಞರು. ಹೌದು ಪ್ರತಿದಿನ ಬೆಳಗ್ಗೆ ಹಲ್ಲುಜ್ಜುವ ಮೊದಲು ನೀರು ಸೇವಿಸಿದರೆ ಗ್ಯಾಸ್, ಅಸಿಡಿಟಿ, ಮಲಬದ್ಧತೆ, ಆಲಸ್ಯ, ಬಿಪಿ, ಮಧುಮೇಹ, ಚರ್ಮರೋಗದಂತಹ ಅನೇಕ ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂದು ಹೇಳಲಾಗುತ್ತದೆ.

  • ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆರೋಗ್ಯವು ಉತ್ತಮವಾಗಿರುವುದರ ಜೊತೆಗೆ ಇದು ದೇಹದ ನಿರ್ಜಲೀಕರಣವನ್ನು ತಡೆಯುತ್ತದೆ. ಜೊತೆಗೆ ಹೊಟ್ಟೆ ಸಂಬಂಧಿ ಕಾಯಿಲೆಗಳು ಬಾರದಂತೆ ತಡೆಯುತ್ತದೆ.
  • ಬೆಳಗ್ಗೆ ಹಲ್ಲುಜ್ಜುವ ಮೊದಲು ಒಂದು ಲೋಟ ನೀರು ಕುಡಿದರೆ ಅದು ನಿಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಜೊತೆಗೆ ಇದು ಚರ್ಮ ಮತ್ತು ಕೂದಲಿಗೂ ತುಂಬಾನೇ ಪ್ರಯೋಜನಕಾರಿ.
  • ಬೆಳಗ್ಗೆ ಹಲ್ಲುಜ್ಜದೆ ನೀರು ಕುಡಿಯುದರಿಂದ ಕ್ರಮೇಣ ದೇಹದ ಬೊಜ್ಜು ಕಡಿಮೆಯಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.  ಅಷ್ಟೇ ಅಲ್ಲದೆ ಬೆಳಗ್ಗೆ ಎದ್ದ ತಕ್ಣ ಒಂದು ಲೋಟ ನೀರನ್ನು ಕುಡಿಯುವುದರಿಂದ ಬಾಯಿಯ ದುರ್ವಾಸನೆ ಸಮಸ್ಯೆಯೂ ಕಡಿಮೆಯಾಗುತ್ತದೆ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!