AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?

ವ್ಯಾಯಾಮವು ಆರೋಗ್ಯಕರ ಜೀವನಶೈಲಿಯ ಭಾಗವಾಗಿದ್ದು, ಇದು ಅಪಾರ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಪ್ರತಿನಿತ್ಯ ಬಿಡದೇ ವ್ಯಾಯಾಮ ಮಾಡುವುದರಿಂದ ನೀವು ಆಶ್ಚರ್ಯಕರ ಪ್ರಯೋಜನಗಳನ್ನು ಪಡೆಯಬಹುದು. ತೂಕ ಇಳಿಕೆಯಿಂದ ಹಿಡಿದು ಮನಸ್ಥಿತಿ ಸುಧಾರಣೆವರೆಗೆ ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.

ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?
ಸಾಂದರ್ಭಿಕ ಚಿತ್ರ Image Credit source: Pinterest
ಮಾಲಾಶ್ರೀ ಅಂಚನ್​
|

Updated on: Jun 08, 2026 | 8:40 PM

Share

ಇಂದಿನ ಈ ಬ್ಯುಸಿ, ಒತ್ತಡದ ಜೀವನದಲ್ಲಿ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳುವುದು ಅತ್ಯಗತ್ಯ.  ಅಲ್ಲದೆ ವ್ಯಾಯಾಮ (exercise) ಫಿಟ್‌ ಆಗಿರಲು, ದೇಹವನ್ನು ಸದೃಢವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ಪ್ರತಿನಿತ್ಯ ವ್ಯಾಯಾಮ ಮಾಡಬೇಕು ಎಂದು ಸಲಹೆ ನೀಡುವುದು. ಇಂದಿನ ಯುವ ಪೀಳಿಗೆ ಫಿಟ್‌ ಆಗಿರುವ ಸಲುವಾಗಿ ಜಿಮ್‌ಗೆ ಹೋಗಿ ವರ್ಕೌಟ್‌ ಮಾಡ್ತಾರೆ. ವ್ಯಾಯಾಮ ಫಿಟ್‌ ಆಗಿರಲು ಸಹಾಯ ಮಾಡುವುದಲ್ಲದೆ ಸಾಕಷ್ಟು ಪ್ರಯೋಜನಗಳನ್ನು ಸಹ ಹೊಂದಿವೆ. ಮನಸ್ಥಿತಿಯನ್ನು ಸುಧಾರಿಸುವುದರಿಂದ ಹಿಡಿದು ಅನೇಕ ಗಂಭೀರ ಕಾಯಿಲೆಗಳನ್ನು ತಡೆಗಟ್ಟುವರೆಗೆ ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ಲಭಿಸುವ ಪ್ರಯೋಜನಗಳೇನು ಎಂಬುದನ್ನು ನೋಡೋಣ ಬನ್ನಿ.

ದೈನಂದಿನ ವ್ಯಾಯಾಮದ ಪ್ರಯೋಜನಗಳೇನು?

ಸಂತೋಷವಾಗಿರಲು ಸಹಕಾರಿ: ದೈನಂದಿನ ವ್ಯಾಯಾಮವು ನಿಮಗೆ ಸಂತೋಷವನ್ನು ಅನುಭವಿಸಲು ಸಹಾಯ ಮಾಡುತ್ತದೆ. ವ್ಯಾಯಾಮವು ದೇಹವನ್ನು ಸದೃಢವಾಗಿಡಲು ಸಹಾಯ ಮಾಡುವುದಲ್ಲದೆ, ಸಂತೋಷದ ಮನಸ್ಥಿತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ತೂಕವನ್ನು ನಿಯಂತ್ರಣದಲ್ಲಿಡುತ್ತದೆ: ನೀವು ಪ್ರತಿದಿನ ವ್ಯಾಯಾಮ ಮಾಡಿದರೆ, ನಿಮ್ಮ ತೂಕ ನಿಯಂತ್ರಣದಲ್ಲಿರುತ್ತದೆ. ನೀವು ದೈಹಿಕ ಚಟುವಟಿಕೆಯಲ್ಲಿ ತೊಡಗಿದಾಗ, ನಿಮ್ಮ ದೇಹವು ಕ್ಯಾಲೊರಿಗಳನ್ನು ಸುಡುತ್ತದೆ. ನೀವು ಫಿಟ್‌ ಆಗಿರಬಹುದು.

ಅನೇಕ ಗಂಭೀರ ಕಾಯಿಲೆಗಳನ್ನು ತಡೆಯುತ್ತದೆ: ನಿಯಮಿತ ವ್ಯಾಯಾಮವು ಇದು ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ, ತೂಕ ಹೆಚ್ಚಾಗುವುದನ್ನು ತಡೆಯುತ್ತದೆ ಮತ್ತು ಹೃದಯ ಕಾಯಿಲೆ, ಕೊಲೆಸ್ಟ್ರಾಲ್, ಮಧುಮೇಹ, ರಕ್ತದೊತ್ತಡ, ಒತ್ತಡ, ಖಿನ್ನತೆ, ಸಂಧಿವಾತ ಮತ್ತು ವಿವಿಧ ರೀತಿಯ ಕ್ಯಾನ್ಸರ್‌ಗಳಂತಹ ಮಾರಕ ಕಾಯಿಲೆಗಳಿಂದ ದೂರವಿರಲು ಸಹಾಯ ಮಾಡುತ್ತದೆ.

ಮನಸ್ಥಿತಿ ಸುಧಾರಣೆ: ವ್ಯಾಯಾಮವು ಒತ್ತಡವನ್ನು ಕಡಿಮೆ ಮಾಡಿ ಮನಸ್ಥಿತಿಯನ್ನು ಸುಧಾರಿಸುತ್ತದೆ. ನೀವು ಒತ್ತಡದಿಂದ ಬಳಲುತ್ತಿದ್ದರೆ, ಅರ್ಧ ಗಂಟೆ ನಡೆಯಿರಿ. ಇದು ತಕ್ಷಣವೇ ನಿಮಗೆ ಉತ್ತಮ ಭಾವನೆಯನ್ನು ನೀಡುತ್ತದೆ. ದೈಹಿಕ ಚಟುವಟಿಕೆಯು ತಕ್ಷಣವೇ ನಿಮ್ಮನ್ನು ಸಂತೋಷ, ಹೆಚ್ಚು ವಿಶ್ರಾಂತಿ ಪಡೆಯಲು ಮತ್ತು  ಆತಂಕದ ಭಾವನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಶಕ್ತಿಯನ್ನು ಹೆಚ್ಚಿಸುತ್ತದೆ: ನಿಮ್ಮ ದಿನಚರಿಯಿಂದ ನೀವು ದಣಿದಿದ್ದರೆ, ಪ್ರತಿದಿನ ವ್ಯಾಯಾಮ ಮಾಡುವುದನ್ನು ಪರಿಗಣಿಸಿ. ಇದು ನಿಮ್ಮ ಸ್ನಾಯುಗಳನ್ನು ಬಲಪಡಿಸುತ್ತದೆ ಮತ್ತು ನಿಮ್ಮ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ನಿದ್ರೆಗೆ ಭಂಗ ಉಂಟಾಗಲು ನಿಮ್ಮ ಅಭ್ಯಾಸಗಳೇ ಕಾರಣ

ನಿದ್ರೆಯನ್ನು ಸುಧಾರಿಸುತ್ತದೆ: ಇಂದಿನ ದಿನಗಳಲ್ಲಿ ಒತ್ತಡದ ಕಾರಣದಿಂದ ಅನೇಕರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಿಮಗೂ ಸಹ ನಿದ್ರೆ ಮಾಡಲು ಕಷ್ಟಸಾಧ್ಯವಾದರೆ ನಿತ್ಯ ವ್ಯಾಯಾಮ ಮಾಡುವ ಅಭ್ಯಾಸವನ್ನು ಬೆಳೆಸಿಕೊಳ್ಳಿ.ಇದು ನಿಮಗೆ ವೇಗವಾಗಿ ನಿದ್ರಿಸಲು ಮತ್ತು ಹೆಚ್ಚು ಆಳವಾಗಿ ನಿದ್ರೆ ಮಾಡಲು ಸಹಾಯ ಮಾಡುತ್ತದೆ. ವ್ಯಾಯಾಮವು ಮನಸ್ಸನ್ನು ಶಾಂತಗೊಳಿಸುತ್ತದೆ.

ಬೊಜ್ಜು ನಿವಾರಣೆ: ನೀವು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದರೆ ನಿತ್ಯ ವ್ಯಾಯಾಮ ಮಾಡಿ. ದೈನಂದಿನ ವ್ಯಾಯಾಮವು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ಕ್ಯಾಲೊರಿಗಳನ್ನು ಸುಡುತ್ತದೆ, ಇದು ಹೆಚ್ಚುವರಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಸಕಾರಾತ್ಮಕ ಚಿಂತನೆಯನ್ನು ಹೆಚ್ಚಿಸುತ್ತದೆ: ಸಕಾರಾತ್ಮಕ ಚಿಂತನೆಯು ನಿಮ್ಮ ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲದೆ ನಿಮ್ಮ ಮಾನಸಿಕ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ವ್ಯಾಯಾಮವು ನಿಮ್ಮ ಮನಸ್ಸನ್ನು ನಿರ್ವಿಷಗೊಳಿಸುತ್ತದೆ ಮತ್ತು ಸಕಾರಾತ್ಮಕ ಚಿಂತನೆಯನ್ನು ಉತ್ತೇಜಿಸುತ್ತದೆ. ಇದು ನಿಮ್ಮ ಆಲೋಚನೆ ಮತ್ತು ಸ್ಮರಣಶಕ್ತಿಯನ್ನು ಸುಧಾರಿಸುತ್ತದೆ, ನಿಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿರಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​