AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿ ತೊಳೆದ ನೀರಿನಿಂದ ನುಣುಪಾದ ಸದೃಢ ತಲೆಕೂದಲು; ಮನೆಮದ್ದಿನಲ್ಲೇ ಇದೆ ಸಮಸ್ಯೆಗೆ ಪರಿಹಾರ

ನೈಸರ್ಗಿಕವಾಗಿ ಸಿಗುವ ಅದೆಷ್ಟೋ ಪದಾರ್ಥಗಳಿಂದ ಕೂದಲು ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬಹುದು. ನುಣುಪಾದ ಸದೃಢ ತಲೆಕೂದಲನ್ನು ಪಡೆಯಬಹುದು.

ಅಕ್ಕಿ ತೊಳೆದ ನೀರಿನಿಂದ ನುಣುಪಾದ ಸದೃಢ ತಲೆಕೂದಲು; ಮನೆಮದ್ದಿನಲ್ಲೇ ಇದೆ ಸಮಸ್ಯೆಗೆ ಪರಿಹಾರ
ಸಂಗ್ರಹ ಚಿತ್ರ
shruti hegde
|

Updated on:May 10, 2021 | 5:18 PM

Share

ನೆನೆಸಿಟ್ಟ ಅಕ್ಕಿ ನೀರನ್ನು ನೈಸರ್ಗಿಕ ಔಷಧವಾಗಿ ಚರ್ಮದ ಸಮಸ್ಯೆಗೆ ಮತ್ತು ಕೂದಲು ಉದುರುವ ಸಮಸ್ಯೆಗೆ ಪರಿಹಾರವಾಗಿ ಬಳಸಲಾಗುತ್ತದೆ. ಇದಕ್ಕಾಗಿಯೇ ಅಕ್ಕಿ ತೊಳೆದ ನೀರು ದಶಕಗಳಿಂದ ಜನಪ್ರಿಯತೆಯನ್ನು ಪಡೆದುಕೊಂಡಿದೆ. ವಿಶೇಷವಾಗಿ ಜಪಾನ್​ ಮತ್ತು ದಕ್ಷಿಣ ಕೊರಿಯಾದಂತಹ ದೇಶಗಳಲ್ಲಿ ಚರ್ಮದ ರಕ್ಷಣೆ ಮತ್ತು ಕೂದಲು ರಕ್ಷಣೆ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಜನರು ಅಕ್ಕಿ ತೊಳೆದ ನೀರನ್ನು ಬಳಸುತ್ತಾರೆ.

ಸುಮಾರು 24 ಗಂಟೆಗಳ ಕಾಲ ಅಕ್ಕಿಯನ್ನು ನೀರಿನಲ್ಲಿ ನೆನೆಸಿಡಬೇಕು. ಅಕ್ಕಿ ನೀರು ಹುಳಿಬರಿಸುವುದು ಎಂದೂ ಇದನ್ನು ಕರೆಯಲಾಗುತ್ತದೆ. ಇದನ್ನು ತಲೆ ಕೂದಲಿಗೆ ಹಚ್ಚಿಕೊಳ್ಳುವ ಮೂಲಕ ಹಾನಿಗೊಳಗಾದ ಕೂದಲು ಸದೃಢವಾಗಲು ಸಹಾಯವಾಗುತ್ತದೆ. ಇದರಿಂದ ನುಣುಪಾದ, ಹೊಳೆಯುವ ಕೂದಲು ನಿಮ್ಮದಾಗುತ್ತದೆ. 24 ಗಂಟೆಗಳ ಕಾಲ ನೀರಿನಲ್ಲಿ ಅಕ್ಕಿಯನ್ನು ನೆನೆ ಹಾಕಿದಾಗ, ಅಕ್ಕಿಯಲ್ಲಿನ ಪೌಷ್ಠಿಕ ಗುಣಗಳು ನೀರಿನಲ್ಲಿ ಬಿಡುತ್ತವೆ. ನಂತರ ನಿಧಾನವಾಗಿ ಅಕ್ಕಿಯನ್ನು ನೀರಿನಿಂದ ಬೇರ್ಪಡಿಸಿ ನೀರನ್ನು ತಲೆಗೆ ಹಚ್ಚಿಕೊಳ್ಳಬೇಕು.

ನೆನೆಸಿಟ್ಟ ಅಕ್ಕಿಯ ನೀರಿನಲ್ಲಿ ಜೀವಸತ್ವಗಳಿರುತ್ತದೆ. ವಿಟಮಿನ್​ ಬಿ ಮತ್ತು ವಿಟಮಿನ್ ಇ ಕಂಡು ಬರುತ್ತದೆ. ಇದು ಚರ್ಮಕ್ಕೆ ಮತ್ತು ಹಾನಿಗೊಳಗಾದ ಕೂದಲನ್ನು ಸದೃಢಗೊಳಿಸಲು ನೆರವಾಗುತ್ತದೆ. ಬಲವಾದ ಮತ್ತು ದಟ್ಟವಾದ ಕೂದಲು ಪಡೆಯಲು ಇದನ್ನು ಚಿಕಿತ್ಸೆಯ ರೂಪದಲ್ಲಿಯೂ ಬಳಸಲಾಗುತ್ತದೆ. ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳನ್ನೂ ಕೂಡಾ ಅಕ್ಕಿ ತೊಳೆದ ನೀರಿನ ಮೂಲಕ ಹೋಗಲಾಡಿಸಬಹುದಾಗಿದೆ. ನೈಸರ್ಗಿಕವಾಗಿ ಸಿಗುವ ಅದೆಷ್ಟೋ ಪದಾರ್ಥಗಳಿಂದ ಕೂದಲು ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬಹುದು.

ಇದನ್ನೂ ಓದಿ: Viral Video: ಬ್ಯಾಗ್​​ನಲ್ಲಿದ್ದ ಮೊಬೈಲ್​​ನಲ್ಲಿ ಬೆಂಕಿ; ಕೈ, ತಲೆಕೂದಲು ಸುಟ್ಟುಕೊಂಡ ಯುವಕ

Published On - 5:17 pm, Mon, 10 May 21

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ