Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಪ್ರತಿದಿನ ಒಂದು ಚಮಚ ಜೇನುತುಪ್ಪ ಸೇವಿಸಿ; ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಜೇನುತುಪ್ಪದಲ್ಲಿ ದೇಹದಲ್ಲಿನ ರೋಗಗಳನ್ನು ಗುಣಪಡಿಸುವ ಹಲವಾರು ಔಷಧಿಗಳಿವೆ. ಆದ್ದರಿಂದ ಪ್ರತಿದಿನ ಜೇನುತುಪ್ಪ ಸೇವಿಸುವುರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ಇಲ್ಲಿ ವಿವರವಾಗಿ ತಿಳಿದುಕೊಳ್ಳಿ.

ಚಳಿಗಾಲದಲ್ಲಿ ಪ್ರತಿದಿನ ಒಂದು ಚಮಚ ಜೇನುತುಪ್ಪ ಸೇವಿಸಿ; ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
HoneyImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Dec 09, 2023 | 5:36 PM

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯವಾಗಿರುತ್ತದೆ. ಈ ಶೀತ ವಾತಾವರಣದಲ್ಲಿ ರೋಗಗಳು ವೇಗವಾಗಿ ಹರಡುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದು ಅಗತ್ಯ. ಆದ್ದರಿಂದ ಈ ಚಳಿಗಾಲದಲ್ಲಿ ಪ್ರತೀ ದಿನ ಒಂದು ಚಮಚ ಜೇನುತುಪ್ಪದ ಸೇವಿಸಿ ಎಂದು ತಜ್ಞರು ಸಲಹೆ ನೀಡುತ್ತಾರೆ. ಜೇನುತುಪ್ಪದಲ್ಲಿ ದೇಹದಲ್ಲಿನ ರೋಗಗಳನ್ನು ಗುಣಪಡಿಸುವ ಹಲವಾರು ಔಷಧಿಗಳಿವೆ. ಆದ್ದರಿಂದ ಪ್ರತಿದಿನ ಜೇನುತುಪ್ಪ ಸೇವಿಸುವುರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ಇಲ್ಲಿ ವಿವರವಾಗಿ ತಿಳಿದುಕೊಳ್ಳಿ.

ಜೇನುತುಪ್ಪದ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳು:

ತೂಕ ಇಳಿಕೆ:

ತೂಕ ಇಳಿಸಿಕೊಳ್ಳಲು ಬಯಸುವವರು ಪ್ರತಿದಿನ ಜೇನುತುಪ್ಪವನ್ನು ಸೇವಿಸುವುದರಿಂದ ತಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ಬೊಜ್ಜು ಕಡಿಮೆ ಮಾಡಲು ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರು ತಮ್ಮ ಆಹಾರದಲ್ಲಿ ಜೇನುತುಪ್ಪವನ್ನು ಸೇರಿಸುವ ಮೂಲಕ ಉತ್ತಮ ಫಲಿತಾಂಶವನ್ನು ಪಡೆಯಬಹುದು.

ಹೊಟ್ಟೆಯ ಸಮಸ್ಯೆಯ ನಿವಾರಣೆ:

ಹೊಟ್ಟೆಯ ಸಮಸ್ಯೆಗಳನ್ನು ಗುಣಪಡಿಸುವಲ್ಲಿ ಜೇನುತುಪ್ಪವು ಅದ್ಭುತ ಔಷಧಿಯಾಗಿದೆ. ಹೊಟ್ಟೆಯ ಸಮಸ್ಯೆಯಿಂದ ಬಳಲುತ್ತಿರುವವರು ಒಂದು ಲೋಟ ನೀರಿಗೆ ಒಂದು ಚಮಚ ಜೇನುತುಪ್ಪವನ್ನು ಬೆರೆಸಿ ರಾತ್ರಿ ಕುಡಿಯಬೇಕು. ಇದು ಗ್ಯಾಸ್, ಮಲಬದ್ಧತೆ, ಅಜೀರ್ಣ ಮತ್ತು ಹೊಟ್ಟೆಯಲ್ಲಿನ ಊತದಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ.

ಒತ್ತಡ ನಿವಾರಣೆ:

ಚಳಿಗಾಲದಲ್ಲಿ ಪ್ರತಿದಿನ ಒಂದು ಚಮಚ ಜೇನುತುಪ್ಪವನ್ನು ಸೇವಿಸುವುದರಿಂದ ಒತ್ತಡ ಮತ್ತು ಆತಂಕವನ್ನು ನಿವಾರಣೆಯಾಗುತ್ತದೆ. ಬಿಡುವಿಲ್ಲದ ಜೀವನಶೈಲಿಯಿಂದಾಗಿ ಒತ್ತಡ ಮತ್ತು ಆತಂಕವನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ನಿಮ್ಮ ಮಾನಸಿಕ ಆರೋಗ್ಯವನ್ನು ಸುಧಾರಿಸಲು ಪ್ರತಿದಿನ ಒಂದು ಚಮಚ ಜೇನುತುಪ್ಪದ ಸೇವಿಸಿ. ಕೆಲವೇ ದಿನಗಳಲ್ಲಿ ಅಧ್ಬುತ ಫಲಿತಾಂಶವನ್ನು ಪಡೆಯುವಿರಿ.

ಇದನ್ನೂ ಓದಿ: ಕಂಪ್ಯೂಟರ್​, ಮೊಬೈಲ್​ ಒತ್ತಡದಿಂದ ನಮ್ಮ ಕಣ್ಣನ್ನು ಕಾಪಾಡುವುದು ಹೇಗೆ?

ರಕ್ತಹೀನತೆ ಸಮಸ್ಯೆ ನಿವಾರಣೆ:

ರಕ್ತಹೀನತೆಯಿಂದ ಬಳಲುತ್ತಿರುವವರು ಪ್ರತಿದಿನ ಒಂದು ಚಮಚ ಜೇನುತುಪ್ಪವನ್ನು ತಿನ್ನುವುದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಹೆಚ್ಚಾಗುತ್ತದೆ. ಚಿಕ್ಕ ಮಕ್ಕಳಿಗೆ ಪ್ರತಿದಿನ ಜೇನು ತುಪ್ಪ ನೀಡುವುದರಿಂದ ರಕ್ತ ಹೆಚ್ಚಾಗುವುದಲ್ಲದೇ ಶುಚಿಯಾಗುತ್ತದೆ. ಜೇನುತುಪ್ಪದಲ್ಲಿ ಆಂಟಿಆಕ್ಸಿಡೆಂಟ್‌ಗಳು ಹೆಚ್ಚಾಗಿದ್ದು, ಹೃದಯ ಸಂಬಂಧಿ ಕಾಯಿಲೆಯಿಂದ ನಿಮ್ಮನ್ನು ರಕ್ಷಿಸುತ್ತದೆ.

ಕಲೆಮುಕ್ತ ಕಾಂತಿಯುತ ತ್ವಚೆ:

ಸಾಕಷ್ಟು ಜನರು ಕಲೆಯುಕ್ತ ತ್ವಚೆಯನ್ನು ಹೊಂದಿರುತ್ತಾರೆ. ಆದ್ದರಿಂದ ಈ ಸಮಸ್ಯೆಯನ್ನು ನಿವಾರಿಸಲು ಪ್ರತಿದಿನ ಜೇನುತುಪ್ಪವನ್ನು ಸೇವಿಸಿ. ಜೇನುತುಪ್ಪದ ಸೇವನೆಯು ತ್ವಚೆಯನ್ನು ಕಾಂತಿಯುತವಾಗಿ ಮತ್ತು ಯಾವುದೇ ಕಲೆಗಳಿಂದ ಮುಕ್ತಗೊಳಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್