AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lychee Peel Benefits: ಲಿಚಿ ಸಿಪ್ಪೆಯಿಂದಾಗುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯಿರಿ

ಬೇಸಿಗೆ ಕಳೆದು ಮಳೆಗಾಲ ಶುರುವಾಗುತ್ತಿದೆ, ಮಾರುಕಟ್ಟೆಗಳಲ್ಲಿ ಎಲ್ಲಿ ಕಣ್ಣು ಹಾಯಿಸಿದರೂ ಲಿಚಿ ಹಣ್ಣೇ ಕಾಣಿಸುತ್ತದೆ. ಲಿಚಿ(Lychee) ಹಣ್ಣು ತಿನ್ನುವುದರಿಂದ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಮುಕ್ತಿ ಪಡೆಯುತ್ತೀರಿ.

Lychee Peel Benefits: ಲಿಚಿ ಸಿಪ್ಪೆಯಿಂದಾಗುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯಿರಿ
ಲಿಚಿ
ನಯನಾ ರಾಜೀವ್
|

Updated on:Jun 02, 2023 | 11:39 AM

Share

ಬೇಸಿಗೆ ಕಳೆದು ಮಳೆಗಾಲ ಶುರುವಾಗುತ್ತಿದೆ, ಮಾರುಕಟ್ಟೆಗಳಲ್ಲಿ ಎಲ್ಲಿ ಕಣ್ಣು ಹಾಯಿಸಿದರೂ ಲಿಚಿ ಹಣ್ಣೇ ಕಾಣಿಸುತ್ತದೆ. ಲಿಚಿ(Lychee) ಹಣ್ಣು ತಿನ್ನುವುದರಿಂದ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಮುಕ್ತಿ ಪಡೆಯುತ್ತೀರಿ. ಇದು ನಿಮ್ಮ ದೇಹವನ್ನು ಹೈಡ್ರೇಟ್ ಆಗಿ ಇಡಲು ತುಂಬಾ ಸಹಾಯ ಮಾಡುತ್ತದೆ. ಆಹಾರದಲ್ಲಿನ ಹುಳಿ-ಸಿಹಿ ಮತ್ತು ರಸಭರಿತವಾದ ಲಿಚಿಯು ವಿಟಮಿನ್ ಸಿ, ಬೀಟಾ ಕ್ಯಾರೋಟಿನ್, ನಿಯಾಸಿನ್, ರೈಬೋಫ್ಲಾವಿನ್ ಮತ್ತು ಫೋಲೇಟ್‌ನಂತಹ ಅನೇಕ ಪೋಷಕಾಂಶಗಳನ್ನು ಹೊಂದಿರುತ್ತದೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

ಇವು ಲಿಚ್ಚಿಯ ಪ್ರಯೋಜನಗಳು, ಆದರೆ ಲಿಚಿ ಸಿಪ್ಪೆಯ ಪ್ರಯೋಜನಗಳ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಹೌದು, ಲಿಚಿ ಸಿಪ್ಪೆಯನ್ನು ಸೌಂದರ್ಯವನ್ನು ಹೆಚ್ಚಿಸಲು ಬಳಸಬಹುದು. ಲಿಚಿ ತಿಂದ ನಂತರ ನಾವು ಅದರ ಸಿಪ್ಪೆಗಳನ್ನು ಎಸೆಯುತ್ತೇವೆ. ಆದರೆ ಲಿಚಿ ಸಿಪ್ಪೆಗಳು ನಿಮ್ಮ ಚರ್ಮಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ.

ಮುಖದ ಚರ್ಮವನ್ನು ಹೊಳೆಯುವಂತೆ ಮಾಡಲು, ಕತ್ತಿನ ಟ್ಯಾನಿಂಗ್ ಅನ್ನು ಕಡಿಮೆ ಮಾಡಲು, ಸುಂದರವಾಗಿಸಲು ಲಿಚಿ ಸಿಪ್ಪೆಯನ್ನು ಹೇಗೆ ಬಳಸಬಹುದು ಎಂದು ತಿಳಿಯೋಣ.

ಮತ್ತಷ್ಟು ಓದಿ: Blood Clot: ರಕ್ತ ಹೆಪ್ಪುಗಟ್ಟುವಿಕೆಯಿಂದ ಪರಿಹಾರ ಪಡೆಯಲು ಈ 5 ಮನೆಮದ್ದುಗಳನ್ನು ಅನುಸರಿಸಿ

ಲಿಚಿ ಸಿಪ್ಪೆಯ ಕೆಲವು ಪ್ರಯೋಜನಗಳು ಈ ಕೆಳಗಿನಂತಿವೆ 1. ಲಿಚಿ ಸಿಪ್ಪೆಯಿಂದ ಫೇಸ್ ಸ್ಕ್ರಬ್ ತಯಾರಿಸಬಹುದು ಬೇಸಿಗೆಯಲ್ಲಿ, ನೀವು ಲಿಚಿ ಸಿಪ್ಪೆಯನ್ನು ದೇಹದ ಸ್ಕ್ರಬ್ ಆಗಿ ಬಳಸಬಹುದು. ಇದನ್ನು ಮಾಡಲು, ನೀವು ಮೊದಲು ಲಿಚಿ ಸಿಪ್ಪೆಯನ್ನು ತೊಳೆದು ಒಣಗಿಸಬೇಕು ಮತ್ತು ಅದನ್ನು ಮಿಕ್ಸಿಯಲ್ಲಿ ಒರಟಾಗಿ ರುಬ್ಬಿಕೊಳ್ಳಬೇಕು, ನಂತರ ಅದರಲ್ಲಿ ಅಕ್ಕಿ ಹಿಟ್ಟು, ಅಲೋವೆರಾ ಜೆಲ್ ಮತ್ತು ರೋಸ್ ವಾಟರ್ ಅನ್ನು ಬೆರೆಸಿ ಪೇಸ್ಟ್ ತಯಾರಿಸಬೇಕು. ನಂತರ ಈ ಪೇಸ್ಟ್ ಅನ್ನು ನಿಮ್ಮ ಮುಖಕ್ಕೆ ಹಚ್ಚಿ ಮತ್ತು ಲಘು ಕೈಗಳಿಂದ ಮಸಾಜ್ ಮಾಡಿ ಮತ್ತು ಮುಖವನ್ನು ಶುದ್ಧ ನೀರಿನಿಂದ ತೊಳೆಯಿರಿ. ಇದರಿಂದ ತ್ವಚೆಯ ಸತ್ತ ಜೀವಕೋಶಗಳು ಸುಲಭವಾಗಿ ನಿವಾರಣೆಯಾಗಿ ಮುಖವೂ ಹೊಳೆಯುತ್ತದೆ.

2. ಲಿಚಿ ಸಿಪ್ಪೆಯು ಟ್ಯಾನಿಂಗ್ ಅನ್ನು ತೆಗೆದುಹಾಕಬಹುದು ಲಿಚಿಯ ಸಿಪ್ಪೆಯೊಂದಿಗೆ ನೀವು ಕುತ್ತಿಗೆಯಲ್ಲಿ ಟ್ಯಾನಿಂಗ್ ಅನ್ನು ಕಡಿಮೆ ಮಾಡಬಹುದು. ಇದಕ್ಕಾಗಿ, ನೀವು ಲಿಚಿ ಸಿಪ್ಪೆಯನ್ನು ಪುಡಿಮಾಡಿ ಮತ್ತು ಬೇಕಿಂಗ್ ಪೌಡರ್, ನಿಂಬೆ ರಸ, ತೆಂಗಿನ ಎಣ್ಣೆ ಮತ್ತು ಅರಿಶಿನವನ್ನು ಬೆರೆಸಿ ಪೇಸ್ಟ್ ತಯಾರಿಸಬೇಕು. ನಂತರ ಈ ಪೇಸ್ಟ್ ಅನ್ನು ಕುತ್ತಿಗೆಯ ಟ್ಯಾನಿಂಗ್ ಮೇಲೆ ಹಚ್ಚಿ ಮತ್ತು ಲಘು ವಾಗಿ ಕೈಯಿಂದ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಗಂಟಲಿನ ಸತ್ತ ಜೀವಕೋಶಗಳು ಹೊರಬರುತ್ತವೆ ಮತ್ತು ಟ್ಯಾನಿಂಗ್ ಕೂಡ ಕಡಿಮೆಯಾಗುತ್ತದೆ.

3. ಒಡೆದ ಹಿಮ್ಮಡಿಯಿಂದ ಮುಕ್ತಿ ಲಿಚಿ ಸಿಪ್ಪೆಯು ಒಡೆದ ಹಿಮ್ಮಡಿಯನ್ನು ಸ್ವಚ್ಛಗೊಳಿಸಲು ಸಹ ಬಹಳ ಸಹಾಯಕವಾಗಿದೆ. ಇದಕ್ಕಾಗಿ, ಸಿಪ್ಪೆಯನ್ನು ಒರಟಾಗಿ ಪುಡಿಮಾಡಿ ಮತ್ತು ಮುಲ್ತಾನಿ ಮಿಟ್ಟಿ, ಅಡುಗೆ ಸೋಡಾ ಮತ್ತು ಆಪಲ್ ಸೈಡರ್ ವಿನೆಗರ್ ಅನ್ನು ಮಿಶ್ರಣ ಮಾಡಿ. ಈಗ ಈ ಪೇಸ್ಟ್ ಅನ್ನು ಹಿಮ್ಮಡಿಗೆ ಹಚ್ಚಿ 20 ನಿಮಿಷಗಳ ಕಾಲ ಬಿಡಿ, ನಂತರ ಪ್ಯೂಮಿಸ್ ಕಲ್ಲಿನಿಂದ ಸ್ವಚ್ಛಗೊಳಿಸಿ. ಇದರ ನಂತರ ನಿಮ್ಮ ಹಿಮ್ಮಡಿಗಳು ಸ್ವಚ್ಛ ಮತ್ತು ಮೃದುವಾಗುತ್ತವೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:00 am, Fri, 2 June 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ