AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಬೇಗ ಏಳುವುದರಿಂದ ನೀವು ಈ ಎಲ್ಲಾ ಪ್ರಯೋಜನಗಳನ್ನು ಪಡೆಯಬಹುದು

ರಾತ್ರಿ ಬೇಗನೇ ಮಲಗಿ ಮುಂಜಾನೆ ಬೇಗ ಏಳುವುದು ಒಳ್ಳೆಯ ಅಭ್ಯಾಸ ಎಂದು ಹೇಳುತ್ತಾರೆ. ಬೆಳಗ್ಗೆ ಬೇಗ ಏಳುವುದರಿಂದ ಬೆಳಗಿನ ಕೆಲಸಗಳೆಲ್ಲಾ ಬೇಗ ಬೇಗ ಮುಗಿದು ಹೋಗುತ್ತದೆ. ಅಷ್ಟೇ ಅಲ್ಲದೇ ಇದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳು ಸಹ ಲಭಿಸುತ್ತವೆಯಂತೆ. ಸೋಮಾರಿತನದ ನಿವಾರಣೆಯಿಂದ ಒತ್ತಡ ನಿವಾರಣೆವರೆಗೆ ಬೆಳಗ್ಗೆ ಬೇಗ ಏಳುವ ಅಭ್ಯಾಸದಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ತಿಳಿಯೋಣ ಬನ್ನಿ.

ಬೆಳಗ್ಗೆ ಬೇಗ ಏಳುವುದರಿಂದ ನೀವು ಈ ಎಲ್ಲಾ ಪ್ರಯೋಜನಗಳನ್ನು ಪಡೆಯಬಹುದು
ಸಾಂದರ್ಭಿಕ ಚಿತ್ರImage Credit source: Pinterest
ಮಾಲಾಶ್ರೀ ಅಂಚನ್​
|

Updated on: Jun 18, 2026 | 9:02 PM

Share

ಸೂರ್ಯ ನೆತ್ತಿಗೆ ಬರುವವರೆಗೂ ಮಲಗಿರಬಾರದು, ಬೆಳಗ್ಗೆ ಬೇಗನೆ (early morning) ಎದ್ದು ನಿತ್ಯ ಕರ್ಮಗಳನ್ನೆಲ್ಲಾ ಮುಗಿಸಬೇಕು ಎಂದು ಹಿರಿಯರು ಹೇಳುವ ಮಾತನ್ನು ನೀವು ಸಹ ಕೇಳಿರಬಹುದಲ್ವಾ. ಆದರೆ ಇಂದಿನ ದಿನಗಳಲ್ಲಿ ಅನೇಕರು ತಡವಾಗಿ ಮಲಗಿ ಬೆಳಗ್ಗೆ ತಡವಾಗಿ ಏಳುತ್ತಾರೆ. ಈ ಅಭ್ಯಾಸವು ಜಡತ್ವ ಮಾತ್ರವಲ್ಲದೆ ಅನೇಕ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಹೀಗಿರುವಾಗ ಜೀವನಶೈಲಿಯಲ್ಲಿ ಕೊಂಚ ಬದಲಾವಣೆಯನ್ನು ಮಾಡಿ, ರಾತ್ರಿ ಬೇಗನೇ ಮಲಗಿ ಮುಂಜಾನೇ ಬೇಗನೆ ಏಳುವ ಮೂಲಕ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಈ ಅಭ್ಯಾಸ ನಿಮ್ಮ ನಿತ್ಯ ಕೆಲಸಗಳನ್ನು ಬೇಗ ಮಾಡಿ ಮುಗಿಸಲು ಸಹಾಯ ಮಾಡುವುದಲ್ಲದೆ ನಿಮ್ಮ ದೇಹ ಮತ್ತು ಮನಸ್ಸಿಗೂ ಸಾಕಷ್ಟು ಪ್ರಯೋಜನಗಳನ್ನು ಒದಗಿಸುತ್ತವೆ. ಈ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಬೆಳಗ್ಗೆ ಬೇಗ ಏಳುವುದರಿಂದ ಲಭಿಸುವ ಪ್ರಯೋಜನಗಳೇನು?

 ಒತ್ತಡ ದೂರವಾಗುತ್ತದೆ: ಬೆಳಿಗ್ಗೆ ತಡವಾಗಿ ಏಳುವುದರಿಂದ ಪ್ರತಿಯೊಂದು ಕೆಲಸವೂ ವಿಳಂಬವಾಗುತ್ತದೆ. ಬೆಳಿಗ್ಗೆಯಿಂದಲೇ ಆತುರ ಪ್ರಾರಂಭವಾಗುತ್ತದೆ. ಇದು ಮನಸ್ಸಿನ ಮೇಲೆ ಒತ್ತಡವನ್ನುಂಟುಮಾಡುತ್ತವೆ, ಇದು ಒತ್ತಡವನ್ನು ಹೆಚ್ಚಿಸುತ್ತದೆ. ನೀವು ಬೇಗನೆ ಎದ್ದರೆ, ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಮತ್ತು ಆರಾಮವಾಗಿ ಪೂರ್ಣಗೊಳಿಸಬಹುದು. ಬೇಗನೆ ಏಳುವುದು ನಿಮ್ಮ ಮನಸ್ಸು ತಾಜಾವಾಗಿರುತ್ತದೆ ಮತ್ತು ಹಾರ್ಮೋನುಗಳು ನಿಯಂತ್ರಣದಲ್ಲಿರುತ್ತವೆ.

ಬೊಜ್ಜಿನ ಸಮಸ್ಯೆಯನ್ನು ದೂರ ಮಾಡಬಹುದು: ಬೆಳಿಗ್ಗೆ ಬೇಗನೆ ಏಳುವುದರ ಒಂದು ಪ್ರಯೋಜನವೆಂದರೆ ನಿಮಗೆ ವ್ಯಾಯಾಮಕ್ಕೆ ಸಾಕಷ್ಟು ಸಮಯ ಸಿಗುತ್ತದೆ. ಬೆಳಿಗ್ಗೆ ವ್ಯಾಯಾಮ ಮಾಡುವುದರಿಂದ ದಿನವಿಡೀ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಬೆಳಗಿನ ವ್ಯಾಯಾಮವು ತ್ವರಿತ ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. ಅಲ್ಲದೆ ವ್ಯಾಯಾಮದ ಮೂಲಕ ಹೃದಯದ ಆರೋಗ್ಯವನ್ನೂ ಸುಧಾರಿಸಬಹುದು.

ಶ್ವಾಸಕೋಶವನ್ನು ಬಲಪಡಿಸುತ್ತದೆ: ಬೆಳಗಿನ ತಾಜಾ ಗಾಳಿಯನ್ನು ಉಸಿರಾಡುವುದರಿಂದ ಶ್ವಾಸಕೋಶಗಳು ಆರೋಗ್ಯವಾಗಿರುತ್ತವೆ. ನಿಮ್ಮ ಶ್ವಾಸಕೋಶವನ್ನು ಸದೃಢವಾಗಿಡಲು, ಬೆಳಿಗ್ಗಿನ ಹೊತ್ತು ಸ್ವಚ್ಛ ಪರಿಸರದಲ್ಲಿ ವ್ಯಾಯಾಮ ಮಾಡಿ. ಬೆಳಗ್ಗೆ ಬೇಗ ಎದ್ದು ನಂತರ, ಉದ್ಯಾನವನ ಅಥವಾ ಶಾಂತಿಯುತ ಸ್ಥಳಕ್ಕೆ ಹೋಗಿ ಆಳವಾದ, ದೀರ್ಘ ಉಸಿರನ್ನು ತೆಗೆದುಕೊಳ್ಳಿ. ಇದು ನಿಮ್ಮ ಶ್ವಾಸಕೋಶಕ್ಕೆ ತಾಜಾ ಗಾಳಿಯನ್ನು ಒದಗಿಸುತ್ತವೆ.

ಇದನ್ನೂ ಓದಿ: ಸಂತೋಷದಿಂದ ಜೀವನ ನಡೆಸಲು ನೀವು ಮಾಡಬೇಕಾದದ್ದು ಇಷ್ಟೆ

ನಿದ್ರೆಯನ್ನು ಸುಧಾರಿಸುತ್ತದೆ: ಬೆಳಿಗ್ಗೆ ಬೇಗನೆ ಎದ್ದೇಳುವ ಜನರು ಇತರರಿಗಿಂತ ಚೆನ್ನಾಗಿ ನಿದ್ರಿಸುತ್ತಾರೆ. ಅವರು ರಾತ್ರಿ ಬೇಗನೆ ನಿದ್ರಿಸುತ್ತಾರೆ. ಇದರಿಂದ ಅವರ ನಿದ್ರೆಯೂ ಉತ್ತಮವಾಗಿರುತ್ತದೆ ಮತ್ತು ಒಟ್ಟಾರೆ ಆರೋಗ್ಯವೂ ತುಂಬಾನೇ ಚೆನ್ನಾಗಿರುತ್ತದೆ.

ಸಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ: ಜೀವನದ ಗಡಿಬಿಡಿ ಆರಂಭವಾಗುವ ಮೊದಲೇ ನೀವು ಬೆಳಿಗ್ಗೆ ಬೇಗನೆ ಎದ್ದರೆ, ಶಾಂತಿಯುತವಾಗಿ ಸಮಯ ಕಳೆಯಲು ಸ್ವಲ್ಪ ಸಮಯ ಸಿಗುತ್ತದೆ. ಶಾಂತಿಯುತವಾಗಿ ಸಮಯ ಕಳೆಯುವುದರಿಂದ ಮೆದುಳಿನಲ್ಲಿ ಆಮ್ಲಜನಕದ ಮಟ್ಟ ಹೆಚ್ಚಾಗುತ್ತದೆ, ರಕ್ತದೊತ್ತಡ ಕಡಿಮೆಯಾಗುತ್ತದೆ ಮತ್ತು ಇದು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!