AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಂಪನಿಗೆ ಸೇರಿದ್ರೆ ಮಧ್ಯಾಹ್ನ ಮಲಗುವುದಕ್ಕೂ ಟೈಂ ಕೊಡ್ತಾರೆ!

ಕೊರೊನಾ ಸಾಂಕ್ರಾಮಿಕ ಶುರುವಾದಾಗಿನಿಂದ ಪ್ರಪಂಚದಾದ್ಯಂತದ ಕಂಪನಿಗಳ ನಿರ್ವಹಣೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದೆ. ಇದೀಗ ಕೆಲವು ಕಂಪನಿಗಳು ತಮ್ಮ ಉದ್ಯೋಗಿಗಳ ಅನುಕೂಲ ಹಾಗೂ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತಿವೆ.

ಈ ಕಂಪನಿಗೆ ಸೇರಿದ್ರೆ ಮಧ್ಯಾಹ್ನ ಮಲಗುವುದಕ್ಕೂ ಟೈಂ ಕೊಡ್ತಾರೆ!
ಕಚೇರಿಯಲ್ಲಿ ಸಣ್ಣ ನಿದ್ರೆ
TV9 Web
| Edited By: |

Updated on: May 07, 2022 | 6:43 PM

Share

ಕೊರೊನಾ( Corona)ಸಾಂಕ್ರಾಮಿಕ ಶುರುವಾದಾಗಿನಿಂದ ಪ್ರಪಂಚದಾದ್ಯಂತದ ಕಂಪನಿಗಳ ನಿರ್ವಹಣೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದೆ. ಇದೀಗ ಕೆಲವು ಕಂಪನಿಗಳು ತಮ್ಮ ಉದ್ಯೋಗಿಗಳ ಅನುಕೂಲ ಹಾಗೂ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತಿವೆ. ವಿಶಿಷ್ಟ ಉಪಕ್ರಮವನ್ನು ಕೈಗೊಳ್ಳುವ ಮೂಲಕ, ಬೆಂಗಳೂರು ಮೂಲದ ಭಾರತೀಯ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ನಿತ್ಯ ಕೆಲಸದ ಸಮಯದಲ್ಲಿ ಸ್ವಲ್ಪ ನಿದ್ರೆ (Sleep)ಮಾಡಲು ಅವಕಾಶ ನೀಡುವುದಾಗಿ ತಿಳಿಸಿದೆ.

ಈ ಸಮಯದಲ್ಲಿ ಯಾವುದೇ ಉದ್ಯೋಗಿಯ ಸಂಬಳವನ್ನು ಕಡಿತಗೊಳಿಸಲಾಗುವುದಿಲ್ಲ ಎಂಬುದನ್ನೂ ಸ್ಪಷ್ಟವಾಗಿ ಹೇಳಿದ್ದಾರೆ. ನೌಕರರು ಕರ್ತವ್ಯದ ಸಮಯದಲ್ಲಿ ಅರ್ಧ ಗಂಟೆ ನಿದ್ರಿಸಲು ಅವಕಾಶ ಮಾಡಿಕೊಡುತ್ತಿದೆ. ಉದ್ಯೋಗಿಗಳ ಹಿತದೃಷ್ಟಿಯಿಂದ ಈ ಮಹತ್ತರವಾದ ಕ್ರಮವನ್ನು ಕೈಗೊಂಡ ಕಂಪನಿಯ ಹೆಸರು ವೇಕ್‌ಫಿಟ್ ಸಲ್ಯೂಶನ್ಸ್.

ಬೆಂಗಳೂರಿನಲ್ಲಿರುವ ಈ ಭಾರತೀಯ ಸ್ಟಾರ್ಟ್ ಅಪ್ ಕಂಪನಿಯು ತನ್ನ ಕಚೇರಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳು ನಿತ್ಯ ಕೆಲಸದ ಅವಧಿಯಲ್ಲಿ 30 ನಿಮಿಷಗಳ ಕಾಲ ಅಂದರೆ ದೈನಂದಿನ ಕರ್ತವ್ಯದ ಸಮಯದಲ್ಲಿ ಅರ್ಧ ಗಂಟೆ ಮಲಗಲು ಸಾಧ್ಯವಾಗುತ್ತದೆ ಎಂದು ಹೇಳಿದೆ. ಈಗ ಉದ್ಯೋಗಿಗಳು ಪ್ರತಿದಿನ ಮಧ್ಯಾಹ್ನ 2 ರಿಂದ 2.30 ರ ನಡುವೆ ಅರ್ಧ ಗಂಟೆ ನಿದ್ದೆ ಮಾಡಲು ಸಾಧ್ಯವಾಗುತ್ತದೆ ಎಂದು ಕಂಪನಿ ಹೇಳಿದೆ. ಕಚೇರಿಯಲ್ಲಿ ನೌಕರರು ತಾತ್ಕಾಲಿಕವಾಗಿ ಮಲಗಲು ವ್ಯವಸ್ಥೆ ಕೂಡ ಮಾಡಲಾಗಿದೆ.

ಈ ನಿರ್ಧಾರದಿಂದ ತನ್ನ ಉದ್ಯೋಗಿಗಳು ಫಿಟ್ ಆಗುತ್ತಾರೆ ಮತ್ತು ಹೆಚ್ಚು ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂಬುದು ಕಂಪನಿಯ ನಂಬಿಕೆಯಾಗಿದೆ. ಈ ಸಂಬಂಧ ಟೈಮ್ ಟೇಬಲ್ ಅನ್ನು ಸಹ ಬಿಡುಗಡೆ ಮಾಡಿರುವ ಕಂಪನಿ ಈ ಕಂಪನಿಯು ನಿದ್ರೆಯ ಪರಿಹಾರಗಳನ್ನು ಅಂದರೆ ಸ್ಲೀಪ್ ಸಲ್ಯೂಶನ್ ಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತದೆ ಎಂದು ತಿಳಿದುಬಂದಿದೆ.

ಕಂಪನಿಯ ನಿರ್ಧಾರಕ್ಕೆ ಉದ್ಯೋಗಿಗಳು ಖುಷ್ ಕಂಪನಿಯ ಸಹ ಸಂಸ್ಥಾಪಕ ಚೈತನ್ಯ ರಾಮಲಿಂಗೇಗೌಡ ಈ ಕುರಿತು ಎಲ್ಲಾ ಸಿಬ್ಬಂದಿಗೂ ಇ-ಮೇಲ್ ಮಾಡಿ ಮಾಹಿತಿ ನೀಡಿದ್ದಾರೆ. ನಾಸಾ ಹೊವರ್ಡ್ ವಿಶ್ವವಿದ್ಯಾನಿಲಯದ ಅಧ್ಯಯನವು ಮಧ್ಯಾಹ್ನ ಪ್ರತಿದಿನ ಅರ್ಧ ಗಂಟೆ ನಿದ್ದೆಮಾಡುವುದರಿಂದ ವ್ಯಕ್ತಿಯನ್ನು ಫ್ರೆಶ್ ಆಗಿರಿಸುತ್ತದೆ ಮತ್ತು ಅವರ ಕೆಲಸದ ಕಾರ್ಯಕ್ಷಮತೆಯು ಶೇ. 33 ರಷ್ಟು ಸುಧಾರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಜೀವನಶೈಲಿಗೆ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ