AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ವರ್ಷ ದಾಟಿದ ಬಳಿಕ ನಿಮ್ಮ ಆರೋಗ್ಯದ ಕಾಳಜಿ ಹೇಗಿರಬೇಕು?

ವಯಸ್ಸಾಗುತ್ತಿದ್ದಂತೆ ನಮ್ಮ ದೇಹವು ದುರ್ಬಲಗೊಳ್ಳುತ್ತದೆ, ಜತೆಗೆ ಮನಸ್ಸೂ ಕೂಡ ನೀವು ಹೇಳಿದಂತೆ ಕೇಳುವುದಿಲ್ಲ. ಯಾವುದೇ ರೀತಿಯ ರೋಗ ಅಥವಾ ನೋವನ್ನು ತಡೆದುಕೊಳ್ಳುವ ಶಕ್ತಿ ಮನಸ್ಸು ಹಾಗೂ ದೇಹಕ್ಕೆ ಇರುವುದಿಲ್ಲ.

50 ವರ್ಷ ದಾಟಿದ ಬಳಿಕ ನಿಮ್ಮ ಆರೋಗ್ಯದ ಕಾಳಜಿ ಹೇಗಿರಬೇಕು?
Hindustan TimesImage Credit source: Hindustan Times
TV9 Web
| Updated By: ನಯನಾ ರಾಜೀವ್|

Updated on: Aug 02, 2022 | 12:32 PM

Share

ವಯಸ್ಸಾಗುತ್ತಿದ್ದಂತೆ ನಮ್ಮ ದೇಹವು ದುರ್ಬಲಗೊಳ್ಳುತ್ತದೆ, ಜತೆಗೆ ಮನಸ್ಸೂ ಕೂಡ ನೀವು ಹೇಳಿದಂತೆ ಕೇಳುವುದಿಲ್ಲ. ಯಾವುದೇ ರೀತಿಯ ರೋಗ ಅಥವಾ ನೋವನ್ನು ತಡೆದುಕೊಳ್ಳುವ ಶಕ್ತಿ ಮನಸ್ಸು ಹಾಗೂ ದೇಹಕ್ಕೆ ಇರುವುದಿಲ್ಲ. ನಿಮ್ಮ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಲು ಉತ್ತಮ ಆಹಾರವನ್ನು ಸೇವನೆ ಮಾಡುವುದು ಕೂಡ ಮುಖ್ಯವಾಗುತ್ತದೆ.

ನೀವು ಎಷ್ಟೇ ವ್ಯಾಯಾಮ, ವಾಕಿಂಗ್ ಮಾಡಿದರೂ ಕೂಡ ನಿಮ್ಮ ಆಹಾರ ಕ್ರಮ ಸರಿ ಇಲ್ಲದಿದ್ದರೆ ಅನೇಕ ಕಾಯಿಲೆಗಳು ನಿಮ್ಮನ್ನು ಕಾಡಬಹುದು. ನಿಮ್ಮ ಆಹಾರದಲ್ಲಿ ಕ್ಯಾಲ್ಶಿಯಂ, ಆಂಟಿಆಕ್ಸಿಡೆಂಟ್ಸ್, ಫೈಟೊ ನ್ಯೂಟ್ರಿಯಂಟ್ಸ್​, ಫ್ರೂಟ್ಸ್​, ಸಲಾಡ್​ಗಳನ್ನು ಸೇರಿಸಬೇಕು.

ನಾವು 50 ವರ್ಷ ತಲುಪಿದ ನಂತರ ನಮ್ಮ ಆರೋಗ್ಯ, ದೇಹ ಮತ್ತು ಯೋಗಕ್ಷೇಮಕ್ಕೆ ಮೊದಲ ಆದ್ಯತೆ ನೀಡಬೇಕು. ಎಲ್ಲಾ ಕಾಯಿಲೆಗಳು ಮತ್ತು ರೋಗಗಳು ನಾವು ತಿನ್ನುವ ಆಹಾರದ ಮೇಲೆ 80%, ವ್ಯಾಯಾಮದ ಮೇಲೆ 20% ಮತ್ತು 5% ಅವಲಂಬಿಸಿರುತ್ತದೆ ಎಂಬುದನ್ನು ಅರಿಯಬೇಕು.

ಉತ್ತಮ ಆಹಾರ ಸೇವನೆ ಮಾಡಿ ನೀವು ಎಂಥಾ ಆಹಾರವನ್ನು ಸೇವನೆ ಮಾಡುತ್ತಿದ್ದೀರಿ ಎಂಬುದರ ಮೇಲೆ ನಿಮ್ಮ ಆರೋಗ್ಯ ಅವಲಂಬಿತವಾಗಿರುತ್ತದೆ. ನಿಮ್ಮ ಆಹಾರದಲ್ಲಿ ಧಾನ್ಯಗಳನ್ನು ಹೆಚ್ಚು ಸೇರಿಸಿ  ⁃ ಬೀನ್ಸ್, ಇದು ನಿಮ್ಮ ವಿವಿಧ ಅಂಗಗಳ ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ⁃ ಅಂಟುರಹಿತ ಧಾನ್ಯಗಳಾದ ಅಮರಂಥ್, ಓಟ್ಸ್, ರಾಗಿ ಇತ್ಯಾದಿ, ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, -ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಮತ್ತು ನಮ್ಮ ದೇಹಕ್ಕೆ ಸಾಕಷ್ಟು ಫೈಬರ್ ಯುಕ್ತ ಆಹಾರಗಳ ಸೇವನೆ ಇರಲಿ. -ನಾರಿನಂಶವಿರುವ ಆಹಾರವಾಗಿರುವ ಸಲಾಡ್‌ಗಳು ಮಲಬದ್ಧತೆಯನ್ನು ಪರಿಹರಿಸಲು ಸಹಾಯ ಮಾಡುತ್ತದೆ. -ಮಾಂಸವು ಕ್ಯಾನ್ಸರ್ ಕೋಶಗಳನ್ನು (ಕಾರ್ಸಿನೋಜೆನ್ಸ್) ಸಕ್ರಿಯಗೊಳಿಸುತ್ತದೆ ಮತ್ತು ಮೈದಾ, ಎಣ್ಣೆ ಮತ್ತು ಸಕ್ಕರೆಯಂತಹ ಸಂಸ್ಕರಿಸಿದ ಉತ್ಪನ್ನಗಳನ್ನು ನಿಮ್ಮ ಆಹಾರದಿಂದ ದೂರವಿಡಬೇಕು. – ಸೂರ್ಯನು ನಮ್ಮ ಆಹಾರದ ಅವಿಭಾಜ್ಯ ಅಂಗವಾಗಿದೆ. ಇದು ವಿಟಮಿನ್ ಡಿ 3 ಅನ್ನು ದೇಹದಲ್ಲಿ ಉತ್ಪತ್ತಿಯಾಗಲು ಸಹಾಯ ಮಾಡುತ್ತದೆ.- ನೀರು: ಸಾಕಷ್ಟು ಪಾನೀಯಗಳು ಮತ್ತು ಕಲ್ಲಂಗಡಿ ಹಣ್ಣು, ಕಿತ್ತಳೆ ಮುಂತಾದ ನೀರು ಭರಿತ ಆಹಾರಗಳು ನಮ್ಮನ್ನು ಹೈಡ್ರೀಕರಿಸುತ್ತದೆ.- ನಡಿಗೆ: ನಡೆಯುವುದರಿಂದ ಪಾದಗಳಿಗೆ ಉತ್ತಮ ವ್ಯಾಯಾಮವಾಗುತ್ತದೆ, ರಕ್ತ ಸಂಚಾರ ಉತ್ತಮವಾಗುತ್ತದೆ, ಮನಸ್ಸನ್ನು ಕ್ರಿಯಾಶೀಲವಾಗಿರುತ್ತದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ