AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರತಿನಿತ್ಯ ಸೋರೆಕಾಯಿ ರಸ ಕುಡಿದು ರಕ್ತದೊತ್ತಡ 40ಕ್ಕೆ ಇಳಿದಿತ್ತು’ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಬಳಿಕ ನಟಿಯ ಇನ್​ಸ್ಟಾಗ್ರಾಂ ಪೋಸ್ಟ್

ಇನ್​ಸ್ಟಾಗ್ರಾಮ್​ ಜಾಗೃತಿ ಮೂಡಿಸುವ ಒಂದು ಅದ್ಭುತ ವೇದಿಕೆಯಾಗಿದೆ. ಸೋರೇಕಾಯಿಯಲ್ಲಿನ ವಿಷದ ಪ್ರಮಾಣ ಅತ್ಯಂತ ಭೀಕರ ಪರಿಣಾಮವನ್ನು ಉಂಟುಮಾಡುತ್ತದೆ. ಇದು ಆರೋಗ್ಯಕ್ಕೆ ತುಂಬಾ ಮಾರಕವಾಗಿದೆ ಎಂದು ತಾಹಿರಾ ಕಶ್ಯಪ್​ ಪೋಸ್ಟ್​ ಮಾಡಿದ್ದಾರೆ.

‘ಪ್ರತಿನಿತ್ಯ ಸೋರೆಕಾಯಿ ರಸ ಕುಡಿದು ರಕ್ತದೊತ್ತಡ 40ಕ್ಕೆ ಇಳಿದಿತ್ತು’ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಬಳಿಕ ನಟಿಯ ಇನ್​ಸ್ಟಾಗ್ರಾಂ ಪೋಸ್ಟ್
ಲೇಖಕಿ, ನಟಿ ಮತ್ತು ಚಲನಚಿತ್ರ ನಿರ್ಮಾಪಕಿ ತಾಹಿರಾ ಕಶ್ಯಪ್
TV9 Web
| Updated By: shruti hegde|

Updated on: Oct 11, 2021 | 2:27 PM

Share

ಲೇಖಕಿ, ನಟಿ ಮತ್ತು ಚಲನಚಿತ್ರ ನಿರ್ಮಾಪಕಿ ತಾಹಿರಾ ಕಶ್ಯಪ್ ಇನ್​ಸ್ಟಾಗ್ರಾಮ್​ನಲ್ಲಿ ಇತ್ತೀಚೆಗೆ ಸೋರೆಕಾಯಿ ರಸ ಸೇವಿಸಿ ಉಂಟಾದ ಆರೋಗ್ಯ ಸಮಸ್ಯೆಯನ್ನು ಪೋಸ್ಟ್ ಮೂಲಕ ಹೇಳಿಕೊಂಡಿದ್ದಾರೆ.  ಅವರು ಉದ್ದದ ಸೋರೆಕಾಯಿ ರಸವನ್ನು ಪ್ರತಿನಿತ್ಯ ಸೇವಿಸುತ್ತಿದ್ದರು. ಆ ಬಳಿಕ ನನ್ನ ರಕ್ತದೊತ್ತಡ 40ಕ್ಕೆ ಇಳಿದಿದೆ. ತೀವ್ರ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಇರಬೇಕಾದ ಪರಿಸ್ಥಿತಿ ಎದುರಾಯಿತು. ಚಿಕಿತ್ಸೆ ಬಳಿಕ ಇದೀಗ ನಾನು ಆರಾಮವಾಗಿದ್ದೇನೆ. ಬೇರೆಯವರಿಗೆ ಹೀಗೆ ಆಗದಂತೆ ಎಚ್ಚರಿಸಲು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಹಂಚಿಕೊಂಡಿರುವುದಾಗಿ ಅವರು ಹೇಳಿದ್ದಾರೆ.

ಇದನ್ನು ಕೇಳಿರಿ, ಇನ್​ಸ್ಟಾಗ್ರಾಮ್​ ಜಾಗೃತಿ ಮೂಡಿಸುವ ಒಂದು ಅದ್ಭುತ ವೇದಿಕೆಯಾಗಿದೆ! ಹಸಿರು ಉದ್ದದ ಸೋರೆಕಾಯಿಯಲ್ಲಿನ ವಿಷದ ಪ್ರಮಾಣ ಅತ್ಯಂತ ಭೀಕರ ಪರಿಣಾಮವನ್ನು ಉಂಟುಮಾಡುತ್ತದೆ. ಇದು ಆರೋಗ್ಯಕ್ಕೆ ತುಂಬಾ ಮಾರಕವಾಗಿದೆ. ಆರೋಗ್ಯದ ಹೆಸರಿನಲ್ಲಿ ರಸವನ್ನು ಅತಿಯಾಗಿ ಸೇವಿಸಬೇಡಿ ಎಂದು ಅವರು ಹೇಳಿದ್ದಾರೆ.

ವಿಡಿಯೋದಲ್ಲಿ ತಾಹಿರಾ ಕಶ್ಯಪ್ ಅರಿಶಿಣ, ಉದ್ದದ ಸೋರೇಕಾಯಿ ಮತ್ತು ಆಮ್ಲಾದ ಮಿಶ್ರಣವನ್ನು ಸೇವಿಸಿದ್ದೆ, ಪ್ರತಿನಿತ್ಯ ಸೋರೆಕಾಯಿ ರಸವನ್ನು ಸೇವಿಸುತ್ತಿದ್ದೆ ಎಂದು ಅವರು ಹೇಳಿದ್ದಾರೆ. ತುಂಬಾ ಕಹಿ ರುಚಿ ನೀಡುವ ಸೋರೇಕಾಯಿ ರಸವನ್ನು ಹೆಚ್ಚಾಗಿ ಸೇವಿಸಬೇಡಿ ಎಂದು ತಮ್ಮ ಹಿಂಬಾಲಕರ ಬಳಿ ಕೇಳಿಕೊಂಡಿದ್ದಾರೆ.

ತಾಹಿರಾ ಕಶ್ಯಪ್ ಪೋಸ್ಟ್ ಇಲ್ಲಿದೆ ನೋಡಿ;

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ತಾಹಿರಾ ಕಶ್ಯಪ್ ತಮ್ಮ ಮುಂಬರುವ ಚಿತ್ರ ಶರ್ಮಾಜಿ ಕೀ ಬೇಟೀ ಚಿತ್ರದ ಸೆಟ್​ಗೆ ಮರಳಿದ್ದಾರೆ. ಚಿತ್ರದ ನಿರ್ಮಾಪಕ ತನುಜ್ ಅವರು ಹಂಚಿಕೊಂಡ ಪೋಸ್ಟ್ ಇಲ್ಲಿದೆ ನೋಡಿ;

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ