AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Drinks : ಸುಡುಬಿಸಿಲಿಗೆ ದೇಹವನ್ನು ಕೂಲ್ ಆಗಿಸುತ್ತೆ ಸೋರೆ ಕಾಯಿ ಜ್ಯೂಸ್

Bottle Gourd Juice : ಬಿಸಿಲ ಧಗೆಯೂ ಹೆಚ್ಚಾಗಿದೆ. ಹೊರಗದೇ ಕಾಲಿಡಲು ಆಗುತ್ತಿಲ್ಲ. ರಾಜ್ಯದ ಕೆಲವೆಡೆ ಮಳೆರಾಯನು ಭೂಮಿಯನ್ನು ತಂಪಾಗಿಸಿದ್ದಾನೆ. ಆದರೆ ಉರಿ ಸೆಕೆಯಂತೂ ಕಡಿಮೆಯಾಗಿಲ್ಲ. ಕಾಡುವ ಆರೋಗ್ಯ ಸಮಸ್ಯೆಗಳ ನಡುವೆ ಹೆಚ್ಚಿನವರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಆದರೆ ದೇಹವನ್ನು ತಂಪಾಗಿಸಲು ಮನೆಯಲ್ಲೇ ಸೋರೆ ಕಾಯಿ ಜ್ಯೂಸ್ ಮಾಡಿ ಕುಡಿಯುವುದು ತುಂಬಾನೇ ಸುಲಭ.

Summer Drinks : ಸುಡುಬಿಸಿಲಿಗೆ ದೇಹವನ್ನು ಕೂಲ್ ಆಗಿಸುತ್ತೆ ಸೋರೆ ಕಾಯಿ ಜ್ಯೂಸ್
ಸೋರೆ ಕಾಯಿ ಜ್ಯೂಸ್Image Credit source: pinterest
ಸಾಯಿನಂದಾ
| Edited By: |

Updated on: Apr 18, 2024 | 4:54 PM

Share

ಬೇಸಿಗೆ ಶಾಖಕ್ಕೆ ದಾಹವೂ ಹೆಚ್ಚಾಗುತ್ತಿದ್ದಂತೆ ತಂಪಾಗಿರುವ ಉಲ್ಲಾಸಕರವಾದ ಏನನ್ನಾದರೂ ಸೇವಿಸಬೇಕೆಂದೆನಿಸುವುದು ಸಹಜ. ಹೀಗಾಗಿ ಹೆಚ್ಚಿನವರು ಕೂಲ್ ಕೂಲ್ ಆಗಿಸುವ ಪೇಯಗಳತ್ತ ಮುಖ ಮಾಡುತ್ತಾರೆ. ಆದರೆ ನಿತ್ಯವೂ ಎಳನೀರು, ತಾಳೆಹಣ್ಣು, ಕಲ್ಲಂಗಡಿ, ಖರ್ಬೂಜ ಜ್ಯೂಸ್ ಕುಡಿದು ಬೇಸರವೆನಿಸಿದ್ದು, ಬೇರೆ ಏನಾದರೂ ಕುಡಿಯಬೇಕು ಎಂದುಕೊಂಡಿದ್ದರೆ ಸೋರೆಕಾಯಿ ಜ್ಯೂಸ್ ಕುಡಿದು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಸೋರೆ ಕಾಯಿ ಜ್ಯೂಸ್ ಮಾಡಲು ಬೇಕಾಗುವ ಸಾಮಗ್ರಿಗಳು:

* ಒಂದು ಕಪ್ ಕಪ್ ಸೋರೆಕಾಯಿ / ಲೌಕಿ / ಬಾಟಲ್ ಗೌರ್ಡ್

* ಪುದೀನ ಎಲೆ

* ಒಂದು ಚಮಚದಷ್ಟು ಜೀರಿಗೆ ಪುಡಿ

* ಒಂದು ಚಮಚ ಕಾಳು ಮೆಣಸಿನ ಪುಡಿ

* ಶುಂಠಿ

* ಉಪ್ಪು

* ಎರಡು ಚಮಚ ನಿಂಬೆ ರಸ

* ನೀರು

ಇದನ್ನೂ ಓದಿ: ರಾತ್ರಿ ಮಲಗಿದಾಗ ಬಾಯಿ ಒಣಗುತ್ತದೆಯೇ? ಇಲ್ಲಿದೆ ಸರಳ ಮನೆ ಮದ್ದುಗಳು

ಸೋರೆ ಕಾಯಿ ಜ್ಯೂಸ್ ಮಾಡುವ ವಿಧಾನ:

* ಮೊದಲಿಗೆ ಮಿಕ್ಸಿ ಜಾರಿಗೆ ಒಂದು ಕಪ್ ನಷ್ಟು ಸಿಪ್ಪೆ ಸುಲಿದು ಕತ್ತರಿಸಿದ ಸೋರೆಕಾಯಿಯನ್ನು ಹಾಕಿಕೊಳ್ಳಿ.

* ಆ ಬಳಿಕ ಪುದೀನ ಎಲೆ, ಚಿಟಿಕೆಯಷ್ಟು ಜೀರಿಗೆ ಪುಡಿ ಹಾಗೂ ಕಾಳು ಮೆಣಸಿನ ಪುಡಿ, ಶುಂಠಿ, ರುಚಿಗೆ ತಕ್ಕಷ್ಟು ಉಪ್ಪು, ಎರಡು ಚಮಚ ನಿಂಬೆ ರಸ ಹಾಗೂ ನೀರು ಹಾಕಿ ಸಣ್ಣಗೆ ರುಬ್ಬಿಕೊಳ್ಳಿ.

* ಕೊನೆಗೆ ರುಬ್ಬಿದ ಈ ಮಿಶ್ರಣವನ್ನು ಸೋಸಿ, ಐಸ್ ಕ್ಯೂಬ್ ಗಳನ್ನು ಸೇರಿಸಿದರೆ ಸೋರೆಕಾಯಿ ಜ್ಯೂಸ್ ಸವಿಯಲು ಸಿದ್ಧ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್