AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brain Health: ಈ ಪದಾರ್ಥಗಳನ್ನು ತಿನ್ನುವುದರಿಂದ ಮೆದುಳು ಚೆನ್ನಾಗಿ ಕಾರ್ಯನಿರ್ವಹಿಸುತ್ತದೆ! ಹಾಗಾದರೆ ಆ ಪದಾರ್ಥಗಳು ಯಾವವು?

ನಾವು ನಮ್ಮ ಏಕಾಗ್ರತೆಯನ್ನು ಹೆಚ್ಚಿಸಬಹುದು. ಜ್ಞಾಪಕಶಕ್ತಿಯನ್ನು ಸುಧಾರಿಸಬಹುದು. ನಮ್ಮ ಮೆದುಳಿನ ಕಾರ್ಯವನ್ನು ಸುಧಾರಿಸುವ ಕೆಲವು ಆಹಾರಗಳ ಬಗ್ಗೆ ತಿಳಿದುಕೊಳೋಣ. 

Brain Health: ಈ ಪದಾರ್ಥಗಳನ್ನು ತಿನ್ನುವುದರಿಂದ ಮೆದುಳು ಚೆನ್ನಾಗಿ ಕಾರ್ಯನಿರ್ವಹಿಸುತ್ತದೆ! ಹಾಗಾದರೆ ಆ ಪದಾರ್ಥಗಳು ಯಾವವು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 05, 2022 | 7:00 AM

Share

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಉತ್ತಮ ಆಹಾರ (food) ವನ್ನು ಸೇವಿಸುವುದು ಬಹಳ ಮುಖ್ಯ. ಅದರಲ್ಲಿಯೂ ಪೌಷ್ಟಿಕಾಂಶವಿರುವ ಹಣ್ಣು, ತರಕಾರಿಗಳನ್ನು ಚೆನ್ನಾಗಿ ಸೇವಿಸಬೇಕು. ಇದು ದೇಹಕ್ಕೆ ಅಗತ್ಯವಾದ ಜೀವಸತ್ವಗಳು, ಖನಿಜಗಳು ಮತ್ತು ನಿರೋಧಕಗಳಲ್ಲಿ ವಿಶೇಷವಾಗಿ ಸಮೃದ್ಧವಾಗಿರುತ್ತವೆ. ಕೆಲವು ತರಕಾರಿಗಳಲ್ಲಿ ವಿಟಮಿನ್ ಎ ಸಮೃದ್ಧವಾಗಿದ್ದು, ಇದು ಕಣ್ಣುಗಳಿಗೆ ಒಳ್ಳೆಯದು. ಕೆಲವು ತರಕಾರಿಗಳಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ, ಇದು ಚರ್ಮ ಮತ್ತು ಪ್ರತಿರಕ್ಷಣಾ ವ್ಯವಸ್ಥೆಗೆ ಒಳ್ಳೆಯದು. ದೇಹದ ಇತರ ಅಂಗಗಳಂತೆ, ಮೆದುಳಿಗೆ ಅಗತ್ಯವಾದ ಪ್ರಮಾಣದ ಜೀವಸತ್ವಗಳು ಮತ್ತು ಖನಿಜಗಳ ಅಗತ್ಯವಿರುತ್ತದೆ. ಆದ್ದರಿಂದ ನಾವು ನಮ್ಮ ಏಕಾಗ್ರತೆಯನ್ನು ಹೆಚ್ಚಿಸಬಹುದು. ಜ್ಞಾಪಕಶಕ್ತಿಯನ್ನು ಸುಧಾರಿಸಬಹುದು. ನಮ್ಮ ಮೆದುಳಿನ ಕಾರ್ಯವನ್ನು ಸುಧಾರಿಸುವ ಕೆಲವು ಆಹಾರಗಳ ಬಗ್ಗೆ ತಿಳಿದುಕೊಳೋಣ.

ಬೀಟ್ರೂಟ್:

ನೈಟ್ರೇಟ್ ಮತ್ತು ಫೋಲಿಕ್ ಆಮ್ಲದಿಂದ ಬೀಟ್ರೂಟ್ ಸಮೃದ್ಧವಾಗಿದ್ದು, ಇವು ಮೆದುಳನ್ನು ಆರೋಗ್ಯವಾಗಿಡಲು ನೆರವಾಗುತ್ತವೆ. ನಿರ್ದಿಷ್ಟವಾಗಿ ನೈಟ್ರೇಟ್‌ಗಳು ಮೆದುಳಿಗೆ ರಕ್ತ ಪೂರೈಕೆಯ ಪ್ರಕ್ರಿಯೆಯನ್ನು ಸುಧಾರಿಸುತ್ತದೆ. ಅಲ್ಲದೆ ಫೋಲಿಕ್ ಆಸಿಡ್, ವಿಟಮಿನ್ ಬಿ9 ಆಲ್ಝೈಮರ್ಸ್ ನಂತಹ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಬ್ರೊಕೊಲಿ:

ಬ್ರೊಕೊಲಿ ಮತ್ತು ಹೂಕೋಸು ಮೆದುಳಿನ ಆರೋಗ್ಯಕರ ತರಕಾರಿಗಳು. ಅವು ವಿಟಮಿನ್ ಕೆನ್ನು ಹೊಂದಿವೆ. ಇದು ಜ್ಞಾಪಕಶಕ್ತಿ ಸುಧಾರಿಸಲು ಮತ್ತು ಮೆದುಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

ತರಕಾರಿಗಳು: 

ತರಕಾರಿಗಳು ನಿರೋಧಕಗಳಾಗದ್ದು, ಬೀಟಾ ಕ್ಯಾರೋಟಿನ್ ಮತ್ತು ವಿಟಮಿನ್ ಕೆ ಯಲ್ಲಿ ಸಮೃದ್ಧವಾಗಿವೆ. ಇವೆಲ್ಲವೂ ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ. ಆಂಟಿಆಕ್ಸಿಡೆಂಟ್‌ಗಳು ದೇಹಕ್ಕೆ ಹಾನಿಯಾಗದಂತೆ ಸ್ವತಂತ್ರ ರಾಡಿಕಲ್‌ಗಳನ್ನು ತಡೆಯಲು ಸಹಾಯ ಮಾಡುತ್ತದೆ.

ಕ್ಯಾರೆಟ್:

ಕ್ಯಾರೆಟ್, ಸಿಹಿ ಆಲೂಗಡ್ಡೆ, ಕೆಂಪು ಮೆಣಸು ಮತ್ತು ಇತರ ತರಕಾರಿಗಳು ಬೀಟಾ ಕ್ಯಾರೋಟಿನ್​ನ್ನು ಹೊಂದಿರುತ್ತವೆ. ಇದು ಮೆದುಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಬೀಟಾ-ಕ್ಯಾರೋಟಿನ್ ಒಂದು ಉತ್ಕರ್ಷಣ ನಿರೋಧಕವಾಗಿದ್ದು ಅದು ದೇಹಕ್ಕೆ ಸ್ವತಂತ್ರ ರಾಡಿಕಲ್ ಹಾನಿಯನ್ನು ತಡೆಯುತ್ತದೆ. ಇದು ನೆನಪಿನ ಶಕ್ತಿಯನ್ನೂ ಸುಧಾರಿಸುತ್ತದೆ.

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ