AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕಪ್​ ಆ ಕ್ಷಣಕ್ಕೆ ನೋವು ನೀಡಬಹುದು, ಆದರೆ ಅದರಿಂದ ನೀವು ಕಲಿಯುವುದು ಬಹಳಷ್ಟಿದೆ

Breakup: ಬ್ರೇಕಪ್ ನೋವಿನಿಂದ ಕೂಡಿದ್ದರೂ ಕೂಡ ಅದರಿಂದ ಕಲಿಯುವುದು ಕೂಡ ಅಷ್ಟೇ ಇದೆ. ನಿಮ್ಮ ಸಂಗಾತಿ ನಿಮಗೆ ಮೋಸ ಮಾಡಿರಬಹುದು, ನಿಮಗೆ ಸುಳ್ಳು ಹೇಳಿ ಬೇರೊಬ್ಬರ ಜತೆಗೆ ಪ್ರೀತಿಯಲ್ಲಿ ಬಿದ್ದಿರಬಹುದು.

ಬ್ರೇಕಪ್​ ಆ ಕ್ಷಣಕ್ಕೆ ನೋವು ನೀಡಬಹುದು, ಆದರೆ ಅದರಿಂದ ನೀವು ಕಲಿಯುವುದು ಬಹಳಷ್ಟಿದೆ
ಬ್ರೇಕಪ್​Image Credit source: Healthshots.com
ನಯನಾ ರಾಜೀವ್
|

Updated on: Aug 09, 2023 | 3:00 PM

Share

ಬ್ರೇಕಪ್ ನೋವಿನಿಂದ ಕೂಡಿದ್ದರೂ ಕೂಡ ಅದರಿಂದ ಕಲಿಯುವುದು ಕೂಡ ಅಷ್ಟೇ ಇದೆ. ನಿಮ್ಮ ಸಂಗಾತಿ ನಿಮಗೆ ಮೋಸ ಮಾಡಿರಬಹುದು, ನಿಮಗೆ ಸುಳ್ಳು ಹೇಳಿ ಬೇರೊಬ್ಬರ ಜತೆಗೆ ಪ್ರೀತಿಯಲ್ಲಿ ಬಿದ್ದಿರಬಹುದು. ಆಗ ನಿಮ್ಮನ್ನು ನಿರ್ಲಕ್ಷಿಸುವುದಾಗಲಿ, ಕಾರಣವೇ ಇಲ್ಲದೆ ನಿಮ್ಮ ಬೈಯ್ಯುವುದಾಗಲಿ ಮಾಡಬಹುದು. ಆಗ ನೀವು ಎಚ್ಚೆತ್ತುಕೊಳ್ಳಲೇಬೇಕು. ಉಸಿರುಗಟ್ಟುವ ವಾತಾವರಣದಲ್ಲಿ ಇರುವುದಕ್ಕಿಂತ ಹೊರಬರುವುದೇ ಲೇಸು.

ಪ್ರೀತಿ ನಿಜವಾಗಿಯೂ ಕುರುಡು ಪ್ರೀತಿ ಎಂಬುದು ನಿಜವಾಗಿಯೂ ಕುರುಡು, ಯಾಕೆಂದರೆ ಪ್ರೀತಿಯಲ್ಲಿರುವಾಗ ಯಾವುದು ಸರಿ, ಯಾವುದು ತಪ್ಪೆಂದು ಅರಿಯದ ಸ್ಥಿತಿಯಲ್ಲಿರುತ್ತಾರೆ. ಸಂಗಾತಿ ಏನೇ ಹೇಳಿದರು ಸತ್ಯವೆಂದು ನಂಬುತ್ತೀರಿ, ನೀವು ಬೇಡ ಎಂದಾದಾಗ ಅವರ ವರಸೆಯೇ ಬದಲಾಗುವುದು. ಆಗ ನೀವು ನೋವು ಪಡುತ್ತೀರಿ.

ಮಾತನಾಡುವುದು ಮುಖ್ಯ ಯಾವುದೇ ಸಂಬಂಧವಾಗಲೀ ಸಂವಹನ ಎಂಬುದು ಮುಖ್ಯ, ಹಾಗೆಯೇ ಭಾವನೆಗಳಿಗೂ ಕೂಡ ಬೆಲೆ ಕೊಡಬೇಕು. ಪ್ರಾಮಾಣಿಕವಾಗಿ ಮಾತನಾಡುವುದನ್ನು ನೀವು ಕಲಿಯಬೇಕು.

ಪ್ರತಿ ಸಂಬಂಧದಲ್ಲಿ ಗಡಿಗಳು ಮುಖ್ಯ ಸಂಬಂಧವನ್ನು ಕಾಪಾಡಿಕೊಳ್ಳಬೇಕಾದರೆ ನಿಮ್ಮ ನಿಮ್ಮ ಗಡಿಯನ್ನು ದಾಟಿ ಹೋಗಬೇಡಿ, ನಿಮ್ಮ ಗಡಿಯಲ್ಲೇ ನಿಂತು ಪ್ರಯತ್ನಪಡಿ. ಭವಿಷ್ಯದಲ್ಲಿ ಸಂಭವನೀಯ ಸಮಸ್ಯೆಗಳನ್ನು ತಪ್ಪಿಸಲು ನಿಮಗೆ ಸಹಾಯ ಮಾಡುತ್ತದೆ. ಯಾರೊಬ್ಬರ ವೈಯಕ್ತಿಕ ಜಾಗವನ್ನು ಪ್ರವೇಶಿಸುವ ತಪ್ಪು ಮಾಡಬೇಡಿ.

ರಾಜಿ ಮಾಡಿಕೊಳ್ಳಿ ಟೀಮ್​ವರ್ಕ್​ ಇರಲಿ ಇಬ್ಬರೂ ಸಂಬಂಧದಲ್ಲಿರುವಾಗ ಇಬ್ಬರ ಅಗತ್ಯಗಳನ್ನು ಕೂಡ ನೋಡಿಕೊಳ್ಳಬೇಕು. ಸ್ವಾಭಾವಿಕವಾಗಿ ಇಬ್ಬರೂ ರಾಜಿ ಮಾಡಿಕೊಳ್ಳಬೇಕು. ಆಗ ಮಾತ್ರ ನೀವು ಪರಸ್ಪರ ಸಹಕರಿಸಲು ಸಾಧ್ಯವಾಗುತ್ತದೆ. ಇಬ್ಬರೂ ಒಟ್ಟಿಗೆ ಕೆಲಸ ಮಾಡಬೇಕು. ಪರಸ್ಪರರ ಗುರಿ ಹಾಗೂ ಆಕಾಂಕ್ಷೆಯನ್ನು ಬೆಂಬಲಿಸುವುದನ್ನು ಕಲಿಯಬೇಕು.

ಗೌರವ ಇರಲಿ ನಿಮ್ಮ ಸಂಗಾತಿಯ ಭಾವನೆಗಳು, ಆಲೋಚನೆಗಳು ಮತ್ತು ವ್ಯಕ್ತಿತ್ವವನ್ನು ಗೌರವಿಸಿ, ಸಂಗಾತಿ ಏನೇ ಕೆಲಸ ಮಾಡಿದರೂ ಅದನ್ನು ಒಪ್ಪಿಕೊಳ್ಳುವುದು, ಗೌರವಿಸುವುದನ್ನು ಕಲಿಯಿರಿ.

ಹಳೆಯ ತಪ್ಪುಗಳನ್ನು ಪುನರಾವರ್ತಿಸಬೇಡಿ ಯಾವುದೇ ಸಂಬಂಧದಲ್ಲಿ ಜಗಳಗಳು ತುಂಬಾ ಸಾಮಾನ್ಯವಾಗಿದೆ. ಅವುಗಳನ್ನು ತಪ್ಪಿಸುವ ಬದಲು, ಅವುಗಳನ್ನು ರಚನಾತ್ಮಕವಾಗಿ ನಿರ್ವಹಿಸಲು ಕಲಿಯಿರಿ. ಸಮಸ್ಯೆಗಳನ್ನು ಮುಕ್ತವಾಗಿ ಪರಿಹರಿಸುವುದು ಮತ್ತು ಒಟ್ಟಿಗೆ ಪರಿಹಾರಗಳನ್ನು ಕಂಡುಹಿಡಿಯುವುದು ನಿಮ್ಮ ಬಂಧವನ್ನು ಬಲಪಡಿಸುತ್ತದೆ. ಯಾವುದೇ ಜಗಳದಿಂದ ಓಡಿಹೋಗಬೇಡಿ ಮತ್ತು ಮಾತನಾಡುವುದನ್ನು ನಿಲ್ಲಿಸಬೇಡಿ.

ಮತ್ತೊಬ್ಬರ ಪ್ರೀತಿಯಲ್ಲಿ ಬೀಳುವ ಮುನ್ನ ಸ್ವಲ್ಪ ಸಮಯ ತೆಗೆದುಕೊಳ್ಳಿ ನಿಮ್ಮ ಅಗತ್ಯತೆಗಳು ಮತ್ತು ಆದ್ಯತೆಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದೆ ಹೊಸ ಸಂಬಂಧದಲ್ಲಿ ಬೀಳುವುದು, ಹಿಂದಿನ ತಪ್ಪುಗಳನ್ನು ಪುನರಾವರ್ತಿಸಲು ಕಾರಣವಾಗಬಹುದು. ವ್ಯಕ್ತಿಯನ್ನು ಹಾಗೂ ಸ್ವಭಾವವನ್ನು ತಿಳಿದುಕೊಳ್ಳಲು ಪ್ರಾರಂಭಿಸಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!