AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breakup: ಬ್ರೇಕ್​ಅಪ್ ಎಂದರೆ ಎಲ್ಲವೂ ಮುಗಿದು ಹೋಯಿತು ಎಂದರ್ಥವಲ್ಲ, ಹೀಗೆ ಖುಷಿಯನ್ನು ಮರಳಿ ಪಡೆಯಿರಿ

ಬ್ರೇಕ್​ಅಪ್(Breakup) ಎಂದಾಕ್ಷಣ ಎಲ್ಲವೂ ಮುಗಿದುಹೋಗಿದೆ ಎಂದು ತಲೆ ಮೇಲೆ ಕೈಹೊತ್ತು ಮೂಲೆಯಲ್ಲಿ ಅಳುತ್ತಾ ಕೂರುವುದಲ್ಲ.

Breakup: ಬ್ರೇಕ್​ಅಪ್ ಎಂದರೆ ಎಲ್ಲವೂ ಮುಗಿದು ಹೋಯಿತು ಎಂದರ್ಥವಲ್ಲ, ಹೀಗೆ ಖುಷಿಯನ್ನು ಮರಳಿ ಪಡೆಯಿರಿ
Breakup
ನಯನಾ ರಾಜೀವ್
|

Updated on: Nov 16, 2022 | 4:03 PM

Share

ಬ್ರೇಕ್​ಅಪ್(Breakup) ಎಂದಾಕ್ಷಣ ಎಲ್ಲವೂ ಮುಗಿದುಹೋಗಿದೆ ಎಂದು ತಲೆ ಮೇಲೆ ಕೈಹೊತ್ತು ಮೂಲೆಯಲ್ಲಿ ಅಳುತ್ತಾ ಕೂರುವುದಲ್ಲ. ಜೀವನ ಎಂದರೆ ಹಾಗೆ ಕಷ್ಟ, ಸುಖಗಳ ಮಿಶ್ರಣ, ಕಷ್ಟದ ಬಳಿಕ ಸುಖ, ಸುಖದ ಬಳಿಕ ಕಷ್ಟ ಇದ್ದೇ ಇರುತ್ತದೆ, ದೊಡ್ಡವರು ಹೇಳುವಂತೆ ಸುಖ ಬಂದಾಗ ಹಿಗ್ಗಬಾರದು ಕಷ್ಟ ಬಂದಾಗ ಕುಗ್ಗಬಾರದು.

ನಮಗೂ ಮುಂದೊಂದು ದಿನ ಒಳ್ಳೆಯ ಸಮಯ ಬಂದೇ ಬರುತ್ತದೆ ಎನ್ನುವ ಆಶಾಭಾವದೊಂದಿಗೆ ಮುನ್ನುಗ್ಗಬೇಕು. ಆಗಿದ್ದಾಯಿತು ಮುಂದೆ ಖುಷಿಯನ್ನು ಮರಳಿ ಪಡೆಯಲು ಏನು ಮಾಡಬೇಕು ಎಂಬುದರ ಕುರಿತು ಆಲೋಚಿಸಬೇಕು.

ಹಳೆಯ ನೆನಪುಗಳನ್ನು ಮೆಲುಕು ಹಾಕಬೇಡಿ ಹಳೆಯ ನೆನಪುಗಳನ್ನು ಮರೆಯುವುದು ಸುಲಭವಲ್ಲ, ನಿಮ್ಮ ಪ್ರೀತಿಯನ್ನು ನೀವು ಉಳಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಅದು ಉಳಿಯಲಿಲ್ಲ ಎಂದಾಗ ಅದರ ಬಗ್ಗೆ ಚಿಂತಿಸಿ ಯಾವುದೇ ಫಲವಿಲ್ಲ. ನೀವು ಯಾವಾಗಲೂ ಇದೇ ಆಲೋಚನೆಯಲ್ಲಿದ್ದರೆ ಕಾಲ ಹೀಗೆಯೇ ಉಳಿಯುವುದಿಲ್ಲ, ಮುಂದೆ ಹೋಗುತ್ತಿರುತ್ತದೆ ನೀವು ಕೂಡ ಎಲ್ಲವನ್ನು ಮರೆತು ಮುಂದೆ ಸಾಗಲೇಬೇಕು.

ಶಾರ್ಟ್​ ಟರ್ಮ್​ ಗೋಲ್ ನೀವು ಅಲ್ಪಾವಧಿಯ ಗುರಿಗಳನ್ನು ಹಾಕಿಕೊಳ್ಳಿ, ಅದನ್ನು ಸಾಧಿಸಲು ಕಷ್ಟಪಡಿ. ನಿಮ್ಮ ಕ್ಷೇತ್ರದಲ್ಲಿ ಹೊಸದಾಗಿ ಏನನ್ನಾದರೂ ಕಲಿಯಿರಿ, ನಿಮಗೆ ನೃತ್ಯ ಕಲಿಯಬೇಕಿದ್ದರೆ, ಹೊರಗಡೆ ಹೋಗಬೇಕೆನಿಸಿದರೆ ಹೋಗಿ, ಪುಸ್ತಕವನ್ನು ಓದಬೇಕೆನಿಸಿದರೆ ಓದಿ, ಒಟ್ಟಿನಲ್ಲಿ ನಿಮ್ಮ ಜೀವನದಲ್ಲಿ ನಡೆದ ಕಹಿ ಘಟನೆಯನ್ನು ಮರೆಯುವಂತಹ ಕೆಲಸ ಮಾಡಿ.

ನೀವು ಮೊದಲು ಹೇಗಿದ್ದಿರಿ ಹಾಗೆ ಇರಲು ಟ್ರೈ ಮಾಡಿ ನೀವು ಪ್ರೀತಿಯಲ್ಲಿ ಬೀಳುವ ಮುನ್ನ ಹೇಗಿದ್ದರೆ ನಿಮ್ಮ ದಿನಚರಿ ಹೇಗಿತ್ತು, ಹಾಗೆಯೇ ನೀವು ಇರಲು ಟ್ರೈ ಮಾಡಿ. ಇದು ಒಂದು ದಿನದ್ದು ಮಾತ್ರವಲ್ಲ ಪ್ರತಿ ದಿನವೂ ಇದೇ ದಿನಚರಿಯುನ್ನು ನೀವು ಅಳವಡಿಸಿಕೊಳ್ಳಬೇಕು.

ಸ್ನೇಹಿತರೊಂದಿಗೆ ಸಮಯ ಕಳೆಯಿರಿ ನಿಮ್ಮ ಪ್ರೀತಿಯನ್ನು ಮರೆಯಬೇಕೆಂದರೆ ನೀವು ಹೆಚ್ಚೆಚ್ಚು ನಿಮ್ಮ ಸ್ನೇಹಿತರ ಜತೆ ಬೆರೆಯಬೇಕು. ನೀವು ಅವರ ಬಳಿ ಹೆಚ್ಚು ಸಮಯ ಕಳೆದರೆ ನಿಮ್ಮ ಮನಸ್ಸು ಹಗುರವಾಗುತ್ತದೆ.

ನಿತ್ಯ ವ್ಯಾಯಾಮ ಮಾಡುವುದನ್ನು ಮರೆಯಬೇಡಿ ನೀವು ನಿಮ್ಮ ಹಳೆಯ ನೆನಪುಗಳನ್ನು ಮರೆಯಲು ನಿತ್ಯ ವ್ಯಾಯಾಮ, ಧ್ಯಾನ ಮಾಡಿ. ನೀವು ಆರೋಗ್ಯವಾಗಿದ್ದರೆ ನಿಮ್ಮ ಮನಸ್ಸು ಕೂಡ ಶಾಂತವಾಗಿರುವುದು. ನಮಿತ್ಯ 30-35 ನಿಮಿಷಗಳ ಕಾಲ ವ್ಯಾಯಾಮ ಮಾಡಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ