AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brown Rice Benefits: ಕುಚ್ಚಲಕ್ಕಿಯದಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂದು ತಿಳಿದಿದೆಯಾ?

ಬ್ರೌನ್ ರೈಸ್ ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದ್ದು, ಇದು ಚಯಾಪಚಯವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ.

Brown Rice Benefits: ಕುಚ್ಚಲಕ್ಕಿಯದಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂದು ತಿಳಿದಿದೆಯಾ?
ಕುಚ್ಚಲಕ್ಕಿ ಅನ್ನImage Credit source: Sharmis Passions
Follow us
ಅಕ್ಷತಾ ವರ್ಕಾಡಿ
|

Updated on:Jan 25, 2023 | 10:40 AM

ಕರಾವಳಿ ಭಾಗದ ಪ್ರತಿಯೊಂದು ಮನೆಯಲ್ಲಿ ಕುಚ್ಚಲಕ್ಕಿ(Brown Rice)ಯನ್ನು ಬಳಸಲಾಗುತ್ತದೆ. ವೈಟ್ ರೈಸ್​​​ಗೆ ಹೋಲಿಸಿದರೆ ಕುಚ್ಚಲಕ್ಕಿಯಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಭತ್ತದಿಂದ ಕೇವಲ ಹೊರ ಸಿಪ್ಪೆಯನ್ನು ತೆಗೆದ ನಂತರ ಸಿಗುವ ಅಕ್ಕಿಯನ್ನು ಕುಚ್ಚಲಕ್ಕಿ ಅಥವಾ ಕಂದು ಬಣ್ಣದ ಅಕ್ಕಿ ಅಥವಾ ಬ್ರೌನ್ ರೈಸ್ ಎಂದು ಕರೆಯುತ್ತಾರೆ. ಮೊದಲೇ ಹೇಳಿದಂತೆ, ಸಂಸ್ಕರಣೆಯಿಂದಾಗಿ, ಬಿಳಿ ಅಕ್ಕಿಯು ವಿಟಮಿನ್‌ಗಳು ಮತ್ತು ಫೈಬರ್​​ನ್ನು ಒಳಗೊಂಡಿದೆ. ಮತ್ತೊಂದೆಡೆ, ಕಂದು ಅಕ್ಕಿ ಮ್ಯಾಂಗನೀಸ್, ಕ್ಯಾಲ್ಸಿಯಂ, ಫೈಬರ್ ಮತ್ತು ಪ್ರೋಟೀನ್ ಸೇರಿದಂತೆ ಹಲವಾರು ಪ್ರಯೋಜನಕಾರಿ ಗುಣಗಳನ್ನು ಹೊಂದಿರುವ ಹೊಟ್ಟು ಮತ್ತು ಸೂಕ್ಷ್ಮಾಣುಗಳನ್ನು ಒಳಗೊಂಡಿರುತ್ತದೆ.

ಕುಚ್ಚಲಕ್ಕಿಯ ಪ್ರಯೋಜನಗಳು:

ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ:

ಬ್ರೌನ್ ರೈಸ್ ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದ್ದು, ಇದು ಚಯಾಪಚಯವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಈ ಅಂಶಗಳು ಆಮ್ಲೀಯತೆ, ಅಜೀರ್ಣ, ಕರುಳಿನ ಸಮಸ್ಯೆಗಳು ಮತ್ತು ಹೆಚ್ಚಿನವುಗಳ ಅಪಾಯವನ್ನು ಮತ್ತಷ್ಟು ಕಡಿಮೆ ಮಾಡುತ್ತದೆ. ಒಟ್ಟಾರೆ ಕರುಳಿನ ಆರೋಗ್ಯವನ್ನು ಹೆಚ್ಚಿಸುತ್ತದೆ.

ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಿಸುತ್ತದೆ:

ಡಾ. ಗಾರ್ಗಿ ಶರ್ಮಾ ಅವರು ಕಂದು ಅಕ್ಕಿಯನ್ನು ಅದರ ಶ್ರೀಮಂತ ಪೋಷಕಾಂಶದ ಪ್ರೊಫೈಲ್‌ನಿಂದ ಸಂಪೂರ್ಣ ಧಾನ್ಯವೆಂದು ಪರಿಗಣಿಸಲಾಗುತ್ತದೆ ಎಂದು ವಿವರಿಸುತ್ತಾರೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಿಸಲು ಮತ್ತು ಹೃದಯರಕ್ತನಾಳದ ಕಾಯಿಲೆಗಳ ಅಪಾಯಗಳನ್ನು ತಡೆಯಲು ಸಹಾಯ ಮಾಡುತ್ತದೆ.

ತೂಕ ನಷ್ಟಕ್ಕೆ ಸಹಾಯಕ:

ಫೈಬರ್, ಉತ್ಕರ್ಷಣ ನಿರೋಧಕಗಳು ಮತ್ತು ಹೆಚ್ಚಿನವುಗಳಿಂದ ಸಮೃದ್ಧವಾಗಿರುವ ಬ್ರೌನ್ ರೈಸ್ ತೂಕ ಇಳಿಸುವ ಆಹಾರದಲ್ಲಿರುವ ಜನರಿಗೆ ಉತ್ತಮವೆಂದು ಪರಿಗಣಿಸಲಾಗುತ್ತದೆ. ಇದು ಫೈಬರ್​​​​ ಹೊಂದಿದ್ದು ಹೆಚ್ಚು ಗಂಟೆಗಳ ಕಾಲ ಹೊಟ್ಟೆ ತುಂಬಿರುವಂತೆ ಮಾಡುತ್ತದೆ.

ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ:

ಇಂಟರ್ನ್ಯಾಷನಲ್ ಜರ್ನಲ್ ಆಫ್ ಮಾಲಿಕ್ಯುಲರ್ ಸೈನ್ಸ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಸಂಶೋಧಕರು ಇತ್ತೀಚೆಗೆ ಆಂಟಿಆಕ್ಸಿಡೆಂಟ್ ಕುಚ್ಚಲಕ್ಕಿಯಲ್ಲಿ ಸಮೃದ್ದವಾಗಿದೆ ಎಂದು ತಿಳಿಸಿದ್ದಾರೆ. ನೀವು ಕುಚ್ಚಲಕ್ಕಿಯನ್ನು ನಿಮ್ಮ ಆಹಾರ ಕ್ರಮದಲ್ಲಿ ಸೇರಿಸುವುದರಿಂದ ನಿಮ್ಮ ಜೀವಕೋಶಗಳಲ್ಲಿ ಉತ್ಕರ್ಷಣ ನಿರೋಧಕಗಳ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಒತ್ತಡದಿಂದ ಜೀವಕೋಶಗಳನ್ನು ರಕ್ಷಿಸುತ್ತದೆ ಎಂದು ಸಂಶೋಧಕರು ಹೇಳುತ್ತಾರೆ.

ಇದನ್ನು ಓದಿ: ಚಳಿಗಾಲದಲ್ಲಿ ತಲೆ ಹೊಟ್ಟಿನಿಂದ ಮುಕ್ತಿ ಪಡೆಯುವುದು ಹೇಗೆ?; ಇಲ್ಲಿವೆ ಮನೆಮದ್ದು

 ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆಗೊಳಿಸುತ್ತದೆ:

ವಿವಿಧ ಅಧ್ಯಯನಗಳ ಪ್ರಕಾರ, ಪ್ರತಿದಿನ ಒಂದು ಕಪ್ ಬ್ರೌನ್ ರೈಸ್ ಅನ್ನವನ್ನು ಸೇವಿಸುವುದರಿಂದ ಮಧುಮೇಹದ ಅಪಾಯವನ್ನು ಶೇಕಡಾ 60 ರಷ್ಟು ಕಡಿಮೆ ಮಾಡಬಹುದು. ಕಂದು ಅಕ್ಕಿಯಲ್ಲಿರುವ ಆಹಾರದ ಫೈಬರ್ ಕಾರ್ಬೋಹೈಡ್ರೇಟ್‌ಗಳನ್ನು ರಕ್ತದಲ್ಲಿನ ಸಕ್ಕರೆಯಾಗಿ ಪರಿವರ್ತಿಸುವ ದರವನ್ನು ನಿಧಾನಗೊಳಿಸುತ್ತದೆ.

ಕುಚ್ಚಲಕ್ಕಿಯ ಅನ್ನವನ್ನು ತಯಾರಿಸುವ ವಿಧಾನ:

ಅಕ್ಕಿಯನ್ನು ಸುಮಾರು ಎರಡು ಗಂಟೆಗಳ ಕಾಲ ನೆನೆಸಿಡಿ. ಸಮಯವನ್ನು ಉಳಿಸಲು, ನೀವು ರಾತ್ರಿಯಿಡೀ ನೆನೆಸಬಹುದು. ನಂತರ ಅಕ್ಕಿಯನ್ನು ಚೆನ್ನಾಗಿ ತೊಳೆಯಿರಿ. ಒಂದು ಕಪ್ ಅಕ್ಕಿಗೆ 3ರಿಂದ 4 ಲೋಟ ನೀರು ತೆಗೆದುಕೊಳ್ಳಿ. ಕುಕ್ಕರ್​​ನಲ್ಲಿ ಮಧ್ಯಮ ಉರಿಯಲ್ಲಿ ಸುಮಾರು ಏಳೆಂಟು ಸೀಟಿಗಳವರೆಗೆ ಬೇಯಿಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:37 am, Wed, 25 January 23

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್