AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಟ್ಟ ಗಾಯಗಳಾದಾಗ ಕಂಗಾಲಾಗಬೇಡಿ; ಮನೆಯಲ್ಲಿರುವ ಈ 5 ಪದಾರ್ಥಗಳನ್ನು ಹಚ್ಚಿರಿ

ಪಟಾಕಿ ಸಿಡಿಸುವಾಗ ಗಾಯಗಳಾದರೆ ಮನೆಯಲ್ಲಿ ಫಸ್ಟ್​ ಏಯ್ಡ್​ ಅಥವಾ ಪ್ರಥಮ ಚಿಕಿತ್ಸೆಯ ಕಿಟ್ ಇಲ್ಲದಿದ್ದರೆ ಏನು ಮಾಡಬೇಕು ಗೊತ್ತಾ? ಮನೆಯಲ್ಲೇ ಇರುವ ಈ ವಸ್ತುಗಳನ್ನು ಬಳಸಿ ಸುಟ್ಟ ಗಾಯದ ಉರಿಯನ್ನು ಕಡಿಮೆ ಮಾಡಬಹುದು.

ಸುಟ್ಟ ಗಾಯಗಳಾದಾಗ ಕಂಗಾಲಾಗಬೇಡಿ; ಮನೆಯಲ್ಲಿರುವ ಈ 5 ಪದಾರ್ಥಗಳನ್ನು ಹಚ್ಚಿರಿ
ಸಾಂದರ್ಭಿಕ ಚಿತ್ರImage Credit source: iStock
ಸುಷ್ಮಾ ಚಕ್ರೆ
|

Updated on: Nov 08, 2023 | 8:15 PM

Share

ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ದೀಪಾವಳಿಯಲ್ಲಿ (Deepavali) ಪಟಾಕಿ ಹೊಡೆಯುವಾಗ ಸುಟ್ಟ ಗಾಯಗಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ನಾವು ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕೆಲವೊಮ್ಮೆ ಗಾಯಗಳಾಗಿ ಬಿಡುತ್ತವೆ. ಪಟಾಕಿಗಳಲ್ಲಿ ಇರುವ ಶಾಖ ಮತ್ತು ರಾಸಾಯನಿಕಗಳಿಂದ ಗಾಯದ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿರುತ್ತದೆ. ಮಕ್ಕಳಲ್ಲಿ ತೆಳ್ಳಗಿನ ಚರ್ಮ ಇರುವುದರಿಂದ ಮಕ್ಕಳಿಗೆ ಪಟಾಕಿಯಿಂದ ಗಾಯಗಳಾಗುವ ಸಾಧ್ಯತೆಗಳು ಹೆಚ್ಚು. ಪಟಾಕಿ ಸಿಡಿಸುವಾಗ ಗಾಯಗಳಾದರೆ ಮನೆಯಲ್ಲಿ ಫಸ್ಟ್​ ಏಯ್ಡ್​ ಅಥವಾ ಪ್ರಥಮ ಚಿಕಿತ್ಸೆಯ ಕಿಟ್ ಇಲ್ಲದಿದ್ದರೆ ಏನು ಮಾಡಬೇಕು ಗೊತ್ತಾ? ಮನೆಯಲ್ಲೇ ಇರುವ ಈ ವಸ್ತುಗಳನ್ನು ಬಳಸಿ ಸುಟ್ಟ ಗಾಯದ ಉರಿಯನ್ನು ಕಡಿಮೆ ಮಾಡಬಹುದು.

ಪಟಾಕಿಯಿಂದ ಸುಟ್ಟ ಗಾಯಕ್ಕೆ 5 ಮನೆಮದ್ದುಗಳು ಇಲ್ಲಿವೆ:

1. ಅಲೋವೆರಾ:

ಅಲೋವೆರಾ ಸುಟ್ಟ ಚರ್ಮದ ಉರಿಯನ್ನು ಕಡಿಮೆ ಮಾಡುತ್ತದೆ ಎಂದು ನಿಮಗೆ ತಿಳಿದಿದೆಯೇ? ಅಲೋವೆರಾದ ಆ್ಯಂಟಿ ಬ್ಯಾಕ್ಟೀರಿಯಲ್ ಮತ್ತು ಉರಿಯೂತದ ಗುಣಲಕ್ಷಣಗಳು ಸುಟ್ಟಗಾಯಗಳ ಸುತ್ತ ರಕ್ತಪರಿಚಲನೆಯನ್ನು ಹೆಚ್ಚಿಸುತ್ತದೆ. ಇದು ಆ ಜಾಗದಲ್ಲಿ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಕಡಿಮೆ ಮಾಡಿ, ಸೋಂಕಿನಿಂದ ನಿಮ್ಮನ್ನು ರಕ್ಷಿಸುತ್ತದೆ. ಆದರೆ, ಅಲೋವೆರಾ ಗಿಡದಿಂದ ನೇರವಾಗಿ ತೆಗೆದ ಶುದ್ಧ ಅಲೋವೆರಾ ಜೆಲ್ ಅನ್ನು ಮಾತ್ರ ಬಳಸಿ.

ಇದನ್ನೂ ಓದಿ: ದಪ್ಪನೆ, ಆರೋಗ್ಯಯುತ ಕೂದಲಿಗೆ ಈ ಸ್ಪೆಷಲ್ ಎಣ್ಣೆ ಬಳಸಿ ನೋಡಿ

2. ಜೇನುತುಪ್ಪ:

ಕಡಿಮೆ ಗಾಯದಿಂದ ಮಧ್ಯಮ ಪ್ರಮಾಣದ ಸುಟ್ಟ ಗಾಯಗಳಿಗೆ ಜೇನುತುಪ್ಪವನ್ನು ಹಚ್ಚಿರಿ. ಇದು ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಸ್ವಭಾವವನ್ನು ಹೊಂದಿದೆ. ಮೊದಲ ಹಂತದ ಸುಟ್ಟ ಗಾಯಗಳನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ.

3. ತೆಂಗಿನ ಎಣ್ಣೆ:

ಎಲ್ಲ ರೀತಿಯ ಗಾಯಗಳಿಗೂ ತೆಂಗಿನ ಎಣ್ಣೆಯನ್ನು ಹಚ್ಚಿದರೆ ಬೇಗ ವಾಸಿಯಾಗುತ್ತದೆ ಎಂಬುದು ಅನೇಕರಿಗೆ ತಿಳಿದಿರುವ ವಿಚಾರ. ಸುಟ್ಟ ಗಾಯಗಳಾದಾಗ ಆ ಜಾಗಕ್ಕೆ ಕೊಬ್ಬರಿ ಎಣ್ಣೆ ಹಚ್ಚಿರಿ. ತೆಂಗಿನ ಎಣ್ಣೆಯು ವಿಟಮಿನ್ ಇ ಅನ್ನು ಹೊಂದಿರುತ್ತದೆ. ಇದು ಚರ್ಮದ ಮೇಲೆ ಇರುವ ಸುಟ್ಟ ಗಾಯದ ಗುರುತುಗಳನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: ಹೊಕ್ಕಳ ಸುತ್ತ ಎಣ್ಣೆ ಹಚ್ಚುವುದರಿಂದಾಗುವ 5 ಪ್ರಯೋಜನಗಳಿವು

4. ಲ್ಯಾವೆಂಡರ್ ಎಣ್ಣೆ:

ಲಿನಾಲಿಲ್ ಅಸಿಟೇಟ್ ಮತ್ತು ಬೀಟಾ-ಕ್ಯಾರಿಯೋಫಿಲೀನ್ ಲ್ಯಾವೆಂಡರ್ ಎಣ್ಣೆಯಲ್ಲಿ ನೋವು ನಿವಾರಕ ಮತ್ತು ಉರಿಯೂತದ ಗುಣಲಕ್ಷಣಗಳಿವೆ. ಇದು ಸುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ಗಾಯವನ್ನು ಬೇಗ ಗುಣಪಡಿಸುತ್ತದೆ.

5. ಟೀ ಟ್ರೀ ಆಯಿಲ್:

ಟೀ ಟ್ರೀ ಎಣ್ಣೆಯು ನಂಜುನಿರೋಧಕ, ಉರಿಯೂತದ ಮತ್ತು ನೋವು ನಿವಾರಕ ಗುಣಲಕ್ಷಣಗಳಿಂದ ತುಂಬಿರುತ್ತದೆ. ಇದು ಸಣ್ಣ ಸುಟ್ಟಗಾಯಗಳನ್ನು ನಿಯಂತ್ರಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು