AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips in Kannada : ಮೆಣಸಿನ ಖಾರಕ್ಕೆ ಕೈ ಉರಿದ್ರೆ ಈ ಸರಳ ಮನೆ ಮದ್ದು ಬಳಸಿ

ಉಪ್ಪು, ಹುಳಿ ಹಾಗೂ ಖಾರವಿದ್ದಾಗಲೇ ಆ ಅಡುಗೆಯು ರುಚಿಸುವುದು. ಕೆಲವರಿಗೆ ಅಡುಗೆಯು ಖಾರವಾಗಿ ಇರಲೇಬೇಕು, ಸ್ವಲ್ಪ ಖಾರ ಕಡಿಮೆಯಾದರೂ ಆಹಾರವು ಬಾಯಿಗೆ ಹಿಡಿಸುವುದೇ ಇಲ್ಲ. ಎಲ್ಲರಿಗೂ ಅಡುಗೆಯು ಖಾರವಾಗಿರಲೆಂದು ಮೆಣಸಿನಕಾಯಿಯನ್ನು ಬಳಸುತ್ತೇವೆ. ಆದರೆ ಈ ಮೆಣಸಿನಕಾಯಿ ಕತ್ತರಿಸಿದ ಬಳಿಕ ಕೈ ಸುಡುವಂತಹ ಅನುಭವವು ಬಹುತೇಕರಿಗೆ ಆಗಿರಬಹುದು. ಮೆಣಸಿನಕಾಯಿ ಕತ್ತರಿಸಿದ ನಂತರ ಕೈ ಉರಿಯುತ್ತಿದ್ದರೆ ಮನೆಯಲ್ಲೇ ಈ ಮನೆ ಮದ್ದನ್ನು ಮಾಡಿದರೆ ಉರಿಯೆಲ್ಲವು ಮಾಯಾವಾಗುತ್ತದೆ.

Kitchen Tips in Kannada : ಮೆಣಸಿನ ಖಾರಕ್ಕೆ ಕೈ ಉರಿದ್ರೆ ಈ ಸರಳ ಮನೆ ಮದ್ದು ಬಳಸಿ
ಸಾಯಿನಂದಾ
| Edited By: |

Updated on: May 07, 2024 | 12:54 PM

Share

ಖಾರವಾದ ಪದಾರ್ಥವನ್ನು ತಿಂದ ನಂತರ ಬಾಯಿ ಹೇಗೆ ಉರಿಯುತ್ತದೆಯೋ ಅದೇ ರೀತಿ ಮೆಣಸಿನಕಾಯಿಯನ್ನು ಕತ್ತರಿಸಿದ ಬಳಿಕ ಕೈ ಕೂಡ ಕೆಂಡದಂತೆ ಸುಡಲು ಪ್ರಾರಂಭವಾಗುತ್ತದೆ. ಕೈಯನ್ನು ತಣ್ಣನೆಯ ನೀರಿನಲ್ಲಿ ಎಷ್ಟೇ ಕೈ ತೊಳೆದರೂ ಕೈ ಉರಿ ಮಾತ್ರ ಕಡಿಮೆಯಾಗುವುದಿಲ್ಲ. ಮೆಣಸಿನ ಕಾಯಿಯಲ್ಲಿ ಕ್ಯಾಪ್ಸೈಸಿನ್ ಅಂಶವಿದ್ದು, ಇದು ಚರ್ಮಕ್ಕೆ ತಾಗಿದಾಗ ಸುಡುವ ಅನುಭವವಾಗುತ್ತದೆ. ಹೀಗಾದಾಗ ಮನೆಯಲ್ಲಿರುವ ಈ ಕೆಲವು ಪದಾರ್ಥಗಳೇ ರಾಮಬಾಣವಾಗಿ ಕೆಲಸ ಮಾಡುತ್ತದೆ.

* ಕೈಗಳು ಉರಿಯುತ್ತಿದ್ದರೆ ಕೈಗಳಿಗೆ ಐಸ್ ನಿಂದ ಮಸಾಜ್ ಮಾಡಿದರೆ ಉರಿ ಕಡಿಮೆಯಾಗುತ್ತದೆ.

* ಮೆಣಸಿನ ಕಾಯಿ ಕತ್ತರಿಸಿ ನಂತರ ಕೈಗಳು ಉರಿಯುತ್ತಿದ್ದರೆ ಕೈಗಳಿಗೆ ಅಲೊವೆರಾ ಜೆಲ್ ಅನ್ನು ಹಚ್ಚಿ ಸ್ವಲ್ಪ ಹೊತ್ತು ಹಾಗೆ ಬಿಡುವುದರಿಂದ ಉರಿಯು ನಿವಾರಣೆಯಾಗುತ್ತದೆ.

* ನಿಂಬೆಯನ್ನು ಕೈಗಳ ಮೇಲೆ ತಿಕ್ಕಿ ಕೊಳ್ಳುವುದರಿಂದಲೂ ಉರಿಯು ಕಡಿಮೆಯಾಗುತ್ತದೆ..

* ಮೆಣಸಿನ ಕಾಯಿಯನ್ನು ಕತ್ತರಿಸಿದ ಬಳಿಕ ಕೈಗಳಲ್ಲಿ ಉರಿ ಹಾಗೂ ಸುಡುವ ಅನುಭವವಾದರೆ ಕೈಗಳಿಗೆ ಹಿಟ್ಟನ್ನು ಬೆರೆಸುವುದರಿಂದ ಈ ಉರಿ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಎಳನೀರು ಕುಡಿಯುವವರ ಗಮನಕ್ಕೆ, ಈ ವಿಚಾರ ನಿಮಗೆ ತಿಳಿದಿರಲೇಬೇಕು

* ತಣ್ಣನೆಯ ಹಾಲು ಅಥವಾ ಮೊಸರನ್ನು ಕೈಗಳಿಗೆ ಹಚ್ಚುವುದರಿಂದ ಉರಿಯು ಶಮನವಾಗುತ್ತದೆ.

* ಬೇಕಿಂಗ್ ಪೌಡರನ್ನು ನೀರಿನೊಂದಿಗೆ ಬೆರೆಸಿ ಕೈಗಳಿಗೆ ಹಚ್ಚುವುದು ಕೂಡ ಪರಿಣಾಮಕಾರಿಯಾಗಿದೆ.

* ಕೈ ಸುಡುವ ಅನುಭವವಾಗುತ್ತಿದ್ದರೆ ವ್ಯಾಸ್ಲಿನ್‌ ಅಥವಾ ಆಲಿವ್ ಎಣ್ಣೆ ಹಚ್ಚುವುದು ಕೂಡ ಪರಿಣಾಮಕಾರಿಯಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!