AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips in Kannada : ಮೆಣಸಿನ ಖಾರಕ್ಕೆ ಕೈ ಉರಿದ್ರೆ ಈ ಸರಳ ಮನೆ ಮದ್ದು ಬಳಸಿ

ಉಪ್ಪು, ಹುಳಿ ಹಾಗೂ ಖಾರವಿದ್ದಾಗಲೇ ಆ ಅಡುಗೆಯು ರುಚಿಸುವುದು. ಕೆಲವರಿಗೆ ಅಡುಗೆಯು ಖಾರವಾಗಿ ಇರಲೇಬೇಕು, ಸ್ವಲ್ಪ ಖಾರ ಕಡಿಮೆಯಾದರೂ ಆಹಾರವು ಬಾಯಿಗೆ ಹಿಡಿಸುವುದೇ ಇಲ್ಲ. ಎಲ್ಲರಿಗೂ ಅಡುಗೆಯು ಖಾರವಾಗಿರಲೆಂದು ಮೆಣಸಿನಕಾಯಿಯನ್ನು ಬಳಸುತ್ತೇವೆ. ಆದರೆ ಈ ಮೆಣಸಿನಕಾಯಿ ಕತ್ತರಿಸಿದ ಬಳಿಕ ಕೈ ಸುಡುವಂತಹ ಅನುಭವವು ಬಹುತೇಕರಿಗೆ ಆಗಿರಬಹುದು. ಮೆಣಸಿನಕಾಯಿ ಕತ್ತರಿಸಿದ ನಂತರ ಕೈ ಉರಿಯುತ್ತಿದ್ದರೆ ಮನೆಯಲ್ಲೇ ಈ ಮನೆ ಮದ್ದನ್ನು ಮಾಡಿದರೆ ಉರಿಯೆಲ್ಲವು ಮಾಯಾವಾಗುತ್ತದೆ.

Kitchen Tips in Kannada : ಮೆಣಸಿನ ಖಾರಕ್ಕೆ ಕೈ ಉರಿದ್ರೆ ಈ ಸರಳ ಮನೆ ಮದ್ದು ಬಳಸಿ
ಸಾಯಿನಂದಾ
| Edited By: |

Updated on: May 07, 2024 | 12:54 PM

Share

ಖಾರವಾದ ಪದಾರ್ಥವನ್ನು ತಿಂದ ನಂತರ ಬಾಯಿ ಹೇಗೆ ಉರಿಯುತ್ತದೆಯೋ ಅದೇ ರೀತಿ ಮೆಣಸಿನಕಾಯಿಯನ್ನು ಕತ್ತರಿಸಿದ ಬಳಿಕ ಕೈ ಕೂಡ ಕೆಂಡದಂತೆ ಸುಡಲು ಪ್ರಾರಂಭವಾಗುತ್ತದೆ. ಕೈಯನ್ನು ತಣ್ಣನೆಯ ನೀರಿನಲ್ಲಿ ಎಷ್ಟೇ ಕೈ ತೊಳೆದರೂ ಕೈ ಉರಿ ಮಾತ್ರ ಕಡಿಮೆಯಾಗುವುದಿಲ್ಲ. ಮೆಣಸಿನ ಕಾಯಿಯಲ್ಲಿ ಕ್ಯಾಪ್ಸೈಸಿನ್ ಅಂಶವಿದ್ದು, ಇದು ಚರ್ಮಕ್ಕೆ ತಾಗಿದಾಗ ಸುಡುವ ಅನುಭವವಾಗುತ್ತದೆ. ಹೀಗಾದಾಗ ಮನೆಯಲ್ಲಿರುವ ಈ ಕೆಲವು ಪದಾರ್ಥಗಳೇ ರಾಮಬಾಣವಾಗಿ ಕೆಲಸ ಮಾಡುತ್ತದೆ.

* ಕೈಗಳು ಉರಿಯುತ್ತಿದ್ದರೆ ಕೈಗಳಿಗೆ ಐಸ್ ನಿಂದ ಮಸಾಜ್ ಮಾಡಿದರೆ ಉರಿ ಕಡಿಮೆಯಾಗುತ್ತದೆ.

* ಮೆಣಸಿನ ಕಾಯಿ ಕತ್ತರಿಸಿ ನಂತರ ಕೈಗಳು ಉರಿಯುತ್ತಿದ್ದರೆ ಕೈಗಳಿಗೆ ಅಲೊವೆರಾ ಜೆಲ್ ಅನ್ನು ಹಚ್ಚಿ ಸ್ವಲ್ಪ ಹೊತ್ತು ಹಾಗೆ ಬಿಡುವುದರಿಂದ ಉರಿಯು ನಿವಾರಣೆಯಾಗುತ್ತದೆ.

* ನಿಂಬೆಯನ್ನು ಕೈಗಳ ಮೇಲೆ ತಿಕ್ಕಿ ಕೊಳ್ಳುವುದರಿಂದಲೂ ಉರಿಯು ಕಡಿಮೆಯಾಗುತ್ತದೆ..

* ಮೆಣಸಿನ ಕಾಯಿಯನ್ನು ಕತ್ತರಿಸಿದ ಬಳಿಕ ಕೈಗಳಲ್ಲಿ ಉರಿ ಹಾಗೂ ಸುಡುವ ಅನುಭವವಾದರೆ ಕೈಗಳಿಗೆ ಹಿಟ್ಟನ್ನು ಬೆರೆಸುವುದರಿಂದ ಈ ಉರಿ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಎಳನೀರು ಕುಡಿಯುವವರ ಗಮನಕ್ಕೆ, ಈ ವಿಚಾರ ನಿಮಗೆ ತಿಳಿದಿರಲೇಬೇಕು

* ತಣ್ಣನೆಯ ಹಾಲು ಅಥವಾ ಮೊಸರನ್ನು ಕೈಗಳಿಗೆ ಹಚ್ಚುವುದರಿಂದ ಉರಿಯು ಶಮನವಾಗುತ್ತದೆ.

* ಬೇಕಿಂಗ್ ಪೌಡರನ್ನು ನೀರಿನೊಂದಿಗೆ ಬೆರೆಸಿ ಕೈಗಳಿಗೆ ಹಚ್ಚುವುದು ಕೂಡ ಪರಿಣಾಮಕಾರಿಯಾಗಿದೆ.

* ಕೈ ಸುಡುವ ಅನುಭವವಾಗುತ್ತಿದ್ದರೆ ವ್ಯಾಸ್ಲಿನ್‌ ಅಥವಾ ಆಲಿವ್ ಎಣ್ಣೆ ಹಚ್ಚುವುದು ಕೂಡ ಪರಿಣಾಮಕಾರಿಯಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ