Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮಸಾಲಾ ಮಜ್ಜಿಗೆಯ ಸಿಂಪಲ್​ ರೆಸಿಪಿ ಇಲ್ಲಿದೆ

ಮಜ್ಜಿಗೆಯಲ್ಲಿನ ಕ್ಯಾಲ್ಸಿಯಂ, ಪೊಟ್ಯಾಸಿಯಂ ಅಂಶಗಳು ರಕ್ತದೊತ್ತಡವನ್ನೂ ಕಡಿಮೆ ಮಾಡಿ,  ಕೊಲೆಸ್ಟ್ರಾಲ್​ ಅನ್ನು ನಿಯಂತ್ರಿಸುತ್ತದೆ. ಆಯುರ್ವೇದದಲ್ಲಿ ಮಜ್ಜಿಗೆಯನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗುತ್ತದೆ.

ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮಸಾಲಾ ಮಜ್ಜಿಗೆಯ ಸಿಂಪಲ್​ ರೆಸಿಪಿ ಇಲ್ಲಿದೆ
ಮಜ್ಜಿಗೆ
Follow us
TV9 Web
| Updated By: Pavitra Bhat Jigalemane

Updated on:Feb 19, 2022 | 1:09 PM

ಭಾರತೀಯ ಆಹಾರ(Food) ಪದ್ಧತಿಗಳಲ್ಲಿ ಎಲ್ಲವೂ ಆರೋಗ್ಯವನ್ನೂ ಸುಧಾರಿಸುವಂತಹವುಗಳೇ ಆಗಿವೆ. ಅನಾದಿ ಕಾಲದಿಂದಲೂ ಮನೆಮದ್ದು, ಮನೆಯಲ್ಲಿ ಬಳಸುವ ಪದಾರ್ಥಗಳಿಂದಲೇ ಹಲವು ಅನಾರೋಗ್ಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಾಗುತ್ತದೆ. ಅಂತಹವುಗಳಲ್ಲಿ ಮಜ್ಜಿಗೆ (Buttermilk) ಕೂಡ ಒಂದು. ಧೇಹದಲ್ಲಿನ ಅಧಿಕ ಕೊಬ್ಬನ್ನು ಕರಗಿಸಿ ಜೀರ್ಣ ಶಕ್ತಿಯನ್ನು (Digestion) ಹಚ್ಚಿಸುವಲ್ಲಿ ಮಜ್ಜಿಗೆ ಪ್ರಮುಖ ಪಾತ್ರ ವಹಿಸುತ್ತದೆ, ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ಸಹಾಯಮಾಡುವ ಮಜ್ಜಿಗೆ ಹಲವು ರೋಗಗಳನ್ನು ನಿಯಂತ್ರಿಸುತ್ತದೆ.

ಮಜ್ಜಿಗೆಯಲ್ಲಿನ ಕ್ಯಾಲ್ಸಿಯಂ, ಪೊಟ್ಯಾಸಿಯಂ ಅಂಶಗಳು ರಕ್ತದೊತ್ತಡವನ್ನೂ ಕಡಿಮೆ ಮಾಡಿ,  ಕೊಲೆಸ್ಟ್ರಾಲ್​ ಅನ್ನು ನಿಯಂತ್ರಿಸುತ್ತದೆ. ಆಯುರ್ವೇದದಲ್ಲಿ ಮಜ್ಜಿಗೆಯನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗುತ್ತದೆ. ಮಜ್ಜಿಗೆ ಇನ್ನೊಂದು ಗುಣವೆಂದರೆ ಇದು ಜೀರ್ಣಕ್ರಿಯೆಯನ್ನು ಉತ್ತಮ ಪಡಿಸುತ್ತದೆ. ಕಫ ಮತ್ತು ವಾತದ ಸಮಸ್ಯೆಯನ್ನು ಬಗೆಹರಿಸುತ್ತದೆ. ಹೀಗಾಗಿ ಮಜ್ಜಿಗೆಯ ಸೇವನೆ ದೇಹಕ್ಕೆ ಉತ್ತಮವಾಗಿದೆ. ಅದರಲ್ಲೂ ಬೇಸಿಗೆಯ ಸಮಯದಲ್ಲಿ ಬೇಸಿಗೆ ದೇಹಕ್ಕೆ ಹೆಚ್ಚು ಶಕ್ತಿ ನೀಡುತ್ತದೆ. ಮಧ್ಯಾಹ್ನದ ವೇಳೆ ಊಟದ ಜತೆಗೆ ಮಸಾಲೆ ಭರಿತ ಮಜ್ಜಿಗೆಯನ್ನು ಸೇವಿಸಿದರೆ ನಾಲಿಗೆಗೂ ರುಚಿ ಹೊಟ್ಟೆಗೂ ಹಿತ.

ಇಲ್ಲಿದೆ ನೋಡಿ ಮಸಾಲಾ ಮಜ್ಜಿಗೆಯ ರೆಸಿಪಿ

1/4 ಕಪ್​ ಮೊಸರು 1 ಕಪ್​ ನೀರು 1 ಚಮಚ ಜೀರಿಗೆ ಪುಡಿ ಕೊತ್ತಂಬರಿ ಸೊಪ್ಪು ಶುಂಠಿ ಪುದೀನಾ ಎಲೆ ರುಚಿಗೆ ತಕ್ಕಷ್ಟು ಉಪ್ಪು

ಮಾಡುವ ವಿಧಾನ: ಮೊಸರಿಗೆ ನೀರನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ, ಹ್ಯಾಂಡ್​ ಬ್ಲೆಂಡರ್​ನಿಂದ ಮಾಡಿದರೆ ಉತ್ತಮ. ನಂತರ ಅದಕ್ಕೆ ಜೀರಿಗೆ ಪುಡಿ, ಉಪ್ಪು, ಶುಂಠಿಯನ್ನು ಸೇರಿಸಿ. ಬಳಿಕ ಪುದೀನಾ ಎಲೆ ಮತ್ತು ಕೊತ್ತಂಬರಿ ಎಲೆಯನ್ನು ಕತ್ತರಿಸಿ ಹಾಕಿದರೆ ಅಜೀರ್ಣ ಸಮಸ್ಯೆಯನ್ನು ತಡೆಯುವ, ಚಯಾಪಯ ಕ್ರಿಯೆಯನ್ನು ಉತ್ತಮಗೊಳಿಸುವ ಮಸಾಲಾ ಮಜ್ಜಿಗೆ ಸವಿಯಲು ಸಿದ್ಧವಾಗುತ್ತದೆ.

ಇದನ್ನೂ ಓದಿ:

Grapes disadvantages: ದ್ರಾಕ್ಷಿ ಸೇವನೆಯಿಂದಾಗುವ ಅಪಾಯಗಳ ಬಗ್ಗೆ ತಿಳಿದುಕೊಳ್ಳಿ

Published On - 1:06 pm, Sat, 19 February 22

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್