AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮಸಾಲಾ ಮಜ್ಜಿಗೆಯ ಸಿಂಪಲ್​ ರೆಸಿಪಿ ಇಲ್ಲಿದೆ

ಮಜ್ಜಿಗೆಯಲ್ಲಿನ ಕ್ಯಾಲ್ಸಿಯಂ, ಪೊಟ್ಯಾಸಿಯಂ ಅಂಶಗಳು ರಕ್ತದೊತ್ತಡವನ್ನೂ ಕಡಿಮೆ ಮಾಡಿ,  ಕೊಲೆಸ್ಟ್ರಾಲ್​ ಅನ್ನು ನಿಯಂತ್ರಿಸುತ್ತದೆ. ಆಯುರ್ವೇದದಲ್ಲಿ ಮಜ್ಜಿಗೆಯನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗುತ್ತದೆ.

ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮಸಾಲಾ ಮಜ್ಜಿಗೆಯ ಸಿಂಪಲ್​ ರೆಸಿಪಿ ಇಲ್ಲಿದೆ
ಮಜ್ಜಿಗೆ
TV9 Web
| Edited By: |

Updated on:Feb 19, 2022 | 1:09 PM

Share

ಭಾರತೀಯ ಆಹಾರ(Food) ಪದ್ಧತಿಗಳಲ್ಲಿ ಎಲ್ಲವೂ ಆರೋಗ್ಯವನ್ನೂ ಸುಧಾರಿಸುವಂತಹವುಗಳೇ ಆಗಿವೆ. ಅನಾದಿ ಕಾಲದಿಂದಲೂ ಮನೆಮದ್ದು, ಮನೆಯಲ್ಲಿ ಬಳಸುವ ಪದಾರ್ಥಗಳಿಂದಲೇ ಹಲವು ಅನಾರೋಗ್ಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಾಗುತ್ತದೆ. ಅಂತಹವುಗಳಲ್ಲಿ ಮಜ್ಜಿಗೆ (Buttermilk) ಕೂಡ ಒಂದು. ಧೇಹದಲ್ಲಿನ ಅಧಿಕ ಕೊಬ್ಬನ್ನು ಕರಗಿಸಿ ಜೀರ್ಣ ಶಕ್ತಿಯನ್ನು (Digestion) ಹಚ್ಚಿಸುವಲ್ಲಿ ಮಜ್ಜಿಗೆ ಪ್ರಮುಖ ಪಾತ್ರ ವಹಿಸುತ್ತದೆ, ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ಸಹಾಯಮಾಡುವ ಮಜ್ಜಿಗೆ ಹಲವು ರೋಗಗಳನ್ನು ನಿಯಂತ್ರಿಸುತ್ತದೆ.

ಮಜ್ಜಿಗೆಯಲ್ಲಿನ ಕ್ಯಾಲ್ಸಿಯಂ, ಪೊಟ್ಯಾಸಿಯಂ ಅಂಶಗಳು ರಕ್ತದೊತ್ತಡವನ್ನೂ ಕಡಿಮೆ ಮಾಡಿ,  ಕೊಲೆಸ್ಟ್ರಾಲ್​ ಅನ್ನು ನಿಯಂತ್ರಿಸುತ್ತದೆ. ಆಯುರ್ವೇದದಲ್ಲಿ ಮಜ್ಜಿಗೆಯನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗುತ್ತದೆ. ಮಜ್ಜಿಗೆ ಇನ್ನೊಂದು ಗುಣವೆಂದರೆ ಇದು ಜೀರ್ಣಕ್ರಿಯೆಯನ್ನು ಉತ್ತಮ ಪಡಿಸುತ್ತದೆ. ಕಫ ಮತ್ತು ವಾತದ ಸಮಸ್ಯೆಯನ್ನು ಬಗೆಹರಿಸುತ್ತದೆ. ಹೀಗಾಗಿ ಮಜ್ಜಿಗೆಯ ಸೇವನೆ ದೇಹಕ್ಕೆ ಉತ್ತಮವಾಗಿದೆ. ಅದರಲ್ಲೂ ಬೇಸಿಗೆಯ ಸಮಯದಲ್ಲಿ ಬೇಸಿಗೆ ದೇಹಕ್ಕೆ ಹೆಚ್ಚು ಶಕ್ತಿ ನೀಡುತ್ತದೆ. ಮಧ್ಯಾಹ್ನದ ವೇಳೆ ಊಟದ ಜತೆಗೆ ಮಸಾಲೆ ಭರಿತ ಮಜ್ಜಿಗೆಯನ್ನು ಸೇವಿಸಿದರೆ ನಾಲಿಗೆಗೂ ರುಚಿ ಹೊಟ್ಟೆಗೂ ಹಿತ.

ಇಲ್ಲಿದೆ ನೋಡಿ ಮಸಾಲಾ ಮಜ್ಜಿಗೆಯ ರೆಸಿಪಿ

1/4 ಕಪ್​ ಮೊಸರು 1 ಕಪ್​ ನೀರು 1 ಚಮಚ ಜೀರಿಗೆ ಪುಡಿ ಕೊತ್ತಂಬರಿ ಸೊಪ್ಪು ಶುಂಠಿ ಪುದೀನಾ ಎಲೆ ರುಚಿಗೆ ತಕ್ಕಷ್ಟು ಉಪ್ಪು

ಮಾಡುವ ವಿಧಾನ: ಮೊಸರಿಗೆ ನೀರನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ, ಹ್ಯಾಂಡ್​ ಬ್ಲೆಂಡರ್​ನಿಂದ ಮಾಡಿದರೆ ಉತ್ತಮ. ನಂತರ ಅದಕ್ಕೆ ಜೀರಿಗೆ ಪುಡಿ, ಉಪ್ಪು, ಶುಂಠಿಯನ್ನು ಸೇರಿಸಿ. ಬಳಿಕ ಪುದೀನಾ ಎಲೆ ಮತ್ತು ಕೊತ್ತಂಬರಿ ಎಲೆಯನ್ನು ಕತ್ತರಿಸಿ ಹಾಕಿದರೆ ಅಜೀರ್ಣ ಸಮಸ್ಯೆಯನ್ನು ತಡೆಯುವ, ಚಯಾಪಯ ಕ್ರಿಯೆಯನ್ನು ಉತ್ತಮಗೊಳಿಸುವ ಮಸಾಲಾ ಮಜ್ಜಿಗೆ ಸವಿಯಲು ಸಿದ್ಧವಾಗುತ್ತದೆ.

ಇದನ್ನೂ ಓದಿ:

Grapes disadvantages: ದ್ರಾಕ್ಷಿ ಸೇವನೆಯಿಂದಾಗುವ ಅಪಾಯಗಳ ಬಗ್ಗೆ ತಿಳಿದುಕೊಳ್ಳಿ

Published On - 1:06 pm, Sat, 19 February 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!