Chartered Accountants day 2024 : ಲೆಕ್ಕ ಪರಿಶೋಧಕರ ದಿನದಂದು ಶುಭಾಶಯ ಕೋರಲು ಇಲ್ಲಿದೆ ಸಂದೇಶಗಳು

ದೇಶದಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸ್ ಆಫ್ ಇಂಡಿಯಾವನ್ನು ಸ್ಥಾಪನೆ ಮಾಡಿದ ದಿನವಾದ ಜುಲೈ 1ರಂದು ಪ್ರತಿ ವರ್ಷ ಸಿಎ ದಿನ ಅಥವಾ ಚಾರ್ಟೆಡ್ ಅಕೌಂಟೆಂಟ್ ದಿನವೆಂದು ಆಚರಿಸಲಾಗುತ್ತದೆ. ಈ ದಿನವನ್ನು ಸಿಎ ಸಂಸ್ಥಾಪನಾ ದಿನ ಎಂದು ಕರೆಯಲಾಗುತ್ತದೆ. ಈ ವಿಶೇಷ ದಿನದಂದು ಲೆಕ್ಕ ಪರಿಶೋಧಕರಾಗಿ ಕೆಲಸ ಮಾಡುತ್ತಿರುವವರಿಗೆ ಈ ರೀತಿ ಸಂದೇಶ ಕಳುಹಿಸಿ ಶುಭಾಶಯಗಳನ್ನು ಕೋರಬಹುದು.

Chartered Accountants day 2024 : ಲೆಕ್ಕ ಪರಿಶೋಧಕರ ದಿನದಂದು ಶುಭಾಶಯ ಕೋರಲು ಇಲ್ಲಿದೆ ಸಂದೇಶಗಳು
ಲೆಕ್ಕ ಪರಿಶೋಧಕರ ದಿನ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 01, 2024 | 10:08 AM

ಇತ್ತೀಚೆಗಿನ ದಿನಗಳಲ್ಲಿ ಸಿಎ ಗಳಿಗೆ ಬಾರಿ ಬೇಡಿಕೆಯಿದ್ದು, ಆದರೆ ಲೆಕ್ಕ ಪರಿಶೋಧಕರ ಸಂಖ್ಯೆಗಳು ಮಾತ್ರ ಕಡಿಮೆಯೇ ಇದೆ. ಇದಕ್ಕೆ ಮುಖ್ಯ ಕಾರಣ ಈ ಸಿಎ ತಯಾರಿಯು ತುಂಬಾನೇ ಕಠಿಣವಾಗಿರುವುದಾಗಿದೆ. ಇಂದಿನ ಹಣಕಾಸು ಮತ್ತು ಉದ್ಯಮ ವಲಯದಲ್ಲಿ ಸಿಎ ಅಥವಾ ಚಾರ್ಟರ್ಡ್ ಅಕೌಂಟೆಂಟ್ಸ್ ಅಥವಾ ಲೆಕ್ಕ ಪರಿಶೋಧಕರ ಪಾತ್ರವು ಅಗಾಧವಾದದ್ದು. ಲೆಕ್ಕಪತ್ರ ನಿರ್ವಹಣೆ ಕ್ಷೇತ್ರದ ವೃತ್ತಿಪರರು ಮತ್ತು ಚಾರ್ಟರ್ಡ್ ಅಕೌಂಟೆಂಟ್‌ ಗಳಿಗಾಗಿ ಈ ದಿನವನ್ನು ಮೀಸಲಿಡಲಾಗಿದೆ. ಆರ್ಥಿಕತೆಯ ವಿವಿಧ ಕ್ಷೇತ್ರಗಳಲ್ಲಿ ಸಿಎಗಳ ಕೊಡುಗೆಗಳನ್ನು ಗೌರವಿಸುವ ದಿನವಾಗಿದೆ. ಹೀಗಾಗಿ ಪ್ರತಿ ವರ್ಷ ಜುಲೈ 1 ರಂದು ಚಾರ್ಟರ್ಡ್ ಅಕೌಂಟೆಂಟ್ಸ್ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ‘ಸುಸ್ಥಿರ ಭವಿಷ್ಯಕ್ಕಾಗಿ ನಾವೀನ್ಯತೆ’ ಥೀಮ್ ನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ದಿನವನ್ನು ಆಚರಿಸಲಾಗುತ್ತಿದೆ.

* ಹಣಕಾಸಿನ ಸಮಗ್ರತೆಯನ್ನು ಕಾಪಾಡಿಕೊಳ್ಳಲು ನಿಮ್ಮ ಸಮರ್ಪಣೆ ಮತ್ತು ಬದ್ಧತೆಗೆ ಧನ್ಯವಾದಗಳು. ಎಲ್ಲಾ ಚಾರ್ಟರ್ಡ್ ಅಕೌಂಟೆಂಟ್‌ಗಳಿಗೆ ಚಾರ್ಟರ್ಡ್ ಅಕೌಂಟೆಂಟ್ಸ್ ದಿನದ ಶುಭಾಶಯಗಳು.

* ಹಣಕಾಸಿನ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಮತ್ತು ಆರ್ಥಿಕ ಬೆಳವಣಿಗೆಗೆ ಚಾರ್ಟರ್ಡ್ ಅಕೌಂಟೆಂಟ್‌ಗಳ ಅಮೂಲ್ಯ ಪಾತ್ರ ಅಗಾಧ. ಇಂದು ನಿಮ್ಮ ದಿನವಾಗಿದ್ದು, ಚಾರ್ಟರ್ಡ್ ಅಕೌಂಟೆಂಟ್ ದಿನದ ಶುಭಾಶಯಗಳು.

* ಹಣಕಾಸು ಜಗತ್ತಿನಲ್ಲಿ ಉತ್ಕೃಷ್ಟರಾಗಿರುವ ಚಾರ್ಟರ್ಡ್ ಅಕೌಂಟೆಂಟ್‌ಗಳನ್ನು ಗೌರವಿಸುತ್ತೇವೆ. ನಿಮ್ಮ ಸಮರ್ಪಣೆ, ನಿಖರತೆ ಮತ್ತು ನೈತಿಕ ಮಾನದಂಡಗಳು ಮತ್ತು ಸಂಸ್ಥೆಗಳ ಯಶಸ್ಸಿಗೆ ಕಾರಣವಾಗಿದೆ. ಚಾರ್ಟರ್ಡ್ ಅಕೌಂಟೆಂಟ್ ದಿನದ ಶುಭಾಶಯಗಳು.

* ನಿಮ್ಮ ವೃತ್ತಿಪರ ಪ್ರಯಾಣವು ನಿರಂತರ ಬೆಳವಣಿಗೆ, ಅವಕಾಶಗಳು ಮತ್ತು ಗಮನಾರ್ಹ ಸಾಧನೆಗಳಿಂದ ತುಂಬಿರಲಿ. ಚಾರ್ಟರ್ಡ್ ಅಕೌಂಟೆಂಟ್ ದಿನದ ಶುಭಾಶಯಗಳು.

ಇದನ್ನೂ ಓದಿ: ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನ! ಈ ದಿನದ ಇತಿಹಾಸ, ಮಹತ್ವದ ಮಾಹಿತಿ ಇಲ್ಲಿದೆ

* ಲೆಕ್ಕಪರಿಶೋಧನೆ, ತೆರಿಗೆ ಮತ್ತು ಹಣಕಾಸು ನಿರ್ವಹಣೆಯಲ್ಲಿ ನಿಮ್ಮ ಕೌಶಲ್ಯಗಳು ಶ್ಲಾಘನೀಯ. ಹಣಕಾಸು ಜಗತ್ತಿನಲ್ಲಿ ಪ್ರಕಾಶಮಾನವಾಗಿ ಹೊಳೆಯುವ ನಿಮಗೆ ಚಾರ್ಟರ್ಡ್ ಅಕೌಂಟೆಂಟ್ ದಿನದ ಶುಭಾಶಯಗಳು

* ಆರ್ಥಿಕತೆಯ ಬೆಳವಣಿಗೆಗೆ ಮತ್ತು ಪಾರದರ್ಶಕತೆಗೆ ಶ್ರಮಿಸುತ್ತಿರುವ ಸಿಎ ಗಳಿಗೆ ಚಾರ್ಟರ್ಡ್ ಅಕೌಂಟೆಂಟ್ ದಿನದ ಹಾರ್ಥಿಕ ಶುಭಾಶಯಗಳು

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು