Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes diet: ಪಪ್ಪಾಯ ಸೇವನೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದೆ?

ಮಧುಮೇಹಿಗಳು ಆದಷ್ಟು ಆರೋಗ್ಯಕರ ಜೀವನಶೈಲಿ ಹಾಗೂ ಆಹಾರ ಕ್ರಮಗಳನ್ನು ಪಾಲಿಸುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು. ಆರೋಗ್ಯವನ್ನು ಕಾಪಾಡಿಕೊಳ್ಳಲು ಹೆಚ್ಚಿನವರು ಹಣ್ಣುಗಳ ಸೇವನೆಯನ್ನು ಮಾಡುತ್ತಾರೆ. ಇನ್ನು ಸಾಮಾನ್ಯವಾಗಿ ಲಭ್ಯವಿರುವಂತಹ ಪಪ್ಪಾಯಿ ಮಧುಮೇಹಿಗಳಿಗೆ ಉತ್ತಮವೇ? ಅದರ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ.

Diabetes diet: ಪಪ್ಪಾಯ ಸೇವನೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದೆ?
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: May 10, 2023 | 9:19 AM

ಮಧುಮೇಹವು ಜೀವನಶೈಲಿಯ ಕಾಯಿಲೆಯಾಗಿದ್ದು, ಅದು ರಕ್ತದಲ್ಲಿನ ಸಕ್ಕರೆಯ ಮಟ್ಟ ಅಥವಾ ರಕ್ತದಲ್ಲಿನ ಗ್ಲೂಕೋಸ್ ಅಂಶವು ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಾದಾಗ ಸಂಭವಿಸುತ್ತದೆ. ಮಧುಮೇಹ ಮತ್ತು ಆಹಾರದ ನಡುವೆ ನಿಕಟವಾದ ಸಂಬಂಧವಿದೆ. ಜೀವನಶೈಲಿ ಮತ್ತು ಮತ್ತು ಆಹಾರ ಪದ್ಧತಿಗಳು ಸೇರಿದಂತೆ ಹಲವಾರು ಅಂಶಗಳು ಮಧುಮೇಹದ ಬೆಳವಣಿಗೆಗೆ ಕಾರಣವಾಗಬಹುದು. ಹಾಗಾಗಿ ಮಧುಮೇಹದ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ನಾವು ಸೇವಿಸುವ ಆಹಾರಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಆಹಾರದ ಆಯ್ಕೆಯಲ್ಲಿ ಹಣ್ಣು ಎಲ್ಲಾ ಜನರಿಗೆ ಯೋಗ್ಯವಾಗಿದೆ ಜೊತೆಗೆ ಹಣ್ಣುಗಳು ಫೈಬರ್, ಜೀವಸತ್ವಗಳು ಮತ್ತು ಖನಿಜಗಳಿಂದ ತುಂಬಿರುತ್ತವೆ. ಆದರೂ ಮಧುಮೇಹ ಹೊಂದಿರುವ ರೋಗಿಗೆ ಹಣ್ಣಿನಲ್ಲಿರುವ ಸಕ್ಕರೆ ಅಂಶದ ಬಗ್ಗೆ ಜಾಗರೂಕವಾಗಿರಬೇಕು. ಹಾಗಾಗಿ ಮಧುಮೇಹ ಹೊಂದಿರುವ ಜನರಿಗೆ ಪಪ್ಪಾಯಿ ಉತ್ತಮ ಆಯ್ಕೆಯಾಗಿದೆ. ಇದರಲ್ಲಿ ಗ್ಲೆಸೆಮಿಕ್ ಸೂಚ್ಯಂಕವು ಮಧ್ಯಮವಾಗಿದ್ದು, ಇದು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ಹಠಾತ್ ಏರಿಕೆಗೆ ಕಾರಣವಾಗುವುದಿಲ್ಲ. ಅಲ್ಲದೆ ಪಪ್ಪಾಯವು ನೈಸರ್ಗಿಕ ಉತ್ಕರ್ಷಣ ನಿರೋಧಕಗಳಾದ ಲೈಕೋಪಿನ್ ಮತ್ತು ಫ್ಲೇವನಾಯ್ಡ್ ಗಳನ್ನು ಹೊಂದಿರುತ್ತವೆ.

ಮಧುಮೇಹಿಗಳಿಗೆ ಪಪ್ಪಾಯಿ ಹೇಗೆ ಪ್ರಯೋಜನಕಾರಿ?

ಪಪ್ಪಾಯಿಯು ಗ್ಲೆಸೆಮಿಕ್ ಸೂಚ್ಯಂಕ (ಜಿಐ) ಪ್ರಮಾಣದಲ್ಲಿ ಕಡಿಮೆಯಾಗಿದೆ, ಅಂದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಗಮನಾರ್ಹವಾಗಿ ಹೆಚ್ಚಿಸುವುದಿಲ್ಲ. ಇದು 60 ಜಿಐ ನ್ನು ಹೊಂದಿದೆ, ಇದು ಮಧುಮೇಹಿಗಳಿಗೆ ಸುರಕ್ಷಿತವಾಗಿದೆ.

ಪಪ್ಪಾಯಿ ಪಪೈನ್ ಮತ್ತು ಚೈಮೊಪಪೈನ್ ಎಂಬ ಕಿಣ್ವಗಳನ್ನು ಹೊಂದಿರುತ್ತವೆ. ಇದು ಕಾರ್ಬೋಹೈಡ್ರೇಟ್, ಪ್ರೋಟಿನ್ ಮತ್ತು ಕೊಬ್ಬನ್ನು ಸುಲಭವಾಗಿ ಜೀರ್ಣವಾಗುವ ರೂಪಕಗಳಾಗಿ ವಿಭಜಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆಯ ಹೆಚ್ಚಳವನ್ನು ತಡೆಯುತ್ತದೆ.

ಪಪ್ಪಾಯಿಯಲ್ಲಿರುವ ನಾರಿನಾಂಶವು ರಕ್ತದ ಹರಿವಿಗೆ ಸಕ್ಕರೆಯನ್ನು ಹೀರಿಕೊಳ್ಳುವುದನ್ನು ನಿಧಾನಗೊಳಿಸುವ ಮೂಲಕ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಕರುಳಿನ ಆರೋಗ್ಯವನ್ನು ಉತ್ತೇಜಿಸುತ್ತದೆ. ಮತ್ತು ಮಲಬದ್ಧತೆಯನ್ನು ತಡೆಯುತ್ತದೆ.

ಪಪ್ಪಾಯಿಯು ವಿಟಮಿನ್ ಸಿ ಮತ್ತು ಎ ಅಂಶಗಳಿಂದ ಸಮೃದ್ಧವಾಗಿದೆ. ಇದು ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳಾಗಿದ್ದು, ಇದು ಮಧುಮೇಹಕ್ಕೆ ಸಂಬಂಧಿಸಿದ ತೊಡಕುಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಪಪ್ಪಾಯಿಯನ್ನು ತಿನ್ನುವುದರಿಂದ ಮಧುಮೇಹದ ಇತರ ದೀರ್ಘಕಾಲದ ತೊಡಕುಗಳನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ತಡೆಯಲು ಸಹಾಯ ಮಾಡುತ್ತದೆ.

ಪಪ್ಪಾಯಿಯು ಫ್ಲೆವನಾಯ್ಡ್ ಗಳನ್ನು ಹೊಂದಿರುತ್ತವೆ. ಇದು ನಿಮ್ಮ ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.

ಇದನ್ನೂ ಓದಿ:Diabetes Diet: ಈ ಬೇಸಿಗೆಯಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಮಧುಮೇಹಿಗಳು ಸೇವಿಸಬೇಕಾದ 5 ಪಾನೀಯಗಳು

ಪಪ್ಪಾಯಿಯನ್ನು ಸೇವಿಸಲು ಉತ್ತಮ ಮಾರ್ಗ ಯಾವುದು?

ತಾಜಾ, ಮಾಗಿದ ಪಪ್ಪಾಯಿಯನ್ನು ಲಘು ಆಹಾರವಾಗಿ ಅಥವಾ ಊಟದ ಭಾಗವಾಗಿ ಸೇವಿಸಿ. ಕತ್ತರಿಸಿದ ಪಪ್ಪಾಯಿಯನ್ನು ಫ್ರೂಟ್ ಸಲಾಡ್ ಅಥವಾ ಸ್ಮೂಥಿ ರೂಪದಲ್ಲಿ ಸೇವಿಸಿ. ಆದರೂ ಪಪ್ಪಾಯವನ್ನು ಮಿತವಾಗಿ ತಿನ್ನುವುದು ಉತ್ತಮ. ಏಕೆಂದರೆ ಯಾವುದೇ ಹಣ್ನಿನ ಹೆಚ್ಚಿನ ಸೇವನೆ ರಕ್ತದಲ್ಲಿನ ಸಕ್ಕರೆ ಮಟ್ಟದ ಹೆಚ್ಚಳಕ್ಕೆ ಕಾರಣವಾಗಬಹುದು.

ಪಪ್ಪಾಯಿಯನ್ನು ದಿನದಲ್ಲಿ ಯಾವಾಗ ಬೇಕಾದರೂ ಸೇವಿಸಬಹುದಾದರೂ, ಉಪಹಾರ ಮೆನುವಿನಲ್ಲಿ ಅದನ್ನು ಹೆಚ್ಚಾಗಿ ಸೇವಿಸಲು ಸಲಹೆ ನೀಡಲಾಗುತ್ತದೆ. ಈ ಹಣ್ಣಿನಲ್ಲಿರುವ ಆಂಟಿಆಕ್ಸಿಡೆಂಟ್ ಗಳು ನಮ್ಮ ದೇಹವನ್ನು ದಿನಪೂರ್ತಿ ವಿಷಮುಕ್ತವಾಗಿಡಲು ಸಹಾಯ ಮಾಡುತ್ತದೆ. ಮತ್ತು ಊಟದ ನಡುವಿನ ಹಸಿವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ. ಇದು ಮಧುಮೇಹಿ ರೋಗಿಗೆ ತುಂಬಾ ಮುಖ್ಯವಾಗಿದೆ.

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!