ಉಗುರುಗಳನ್ನು ಉಜ್ಜಿದರೆ ಕೂದಲು ಉದ್ದವಾಗುತ್ತಾ?

ನಿಮ್ಮ ಉಗುರುಗಳನ್ನು ಉಜ್ಜುವುದು ಶಾಂತಗೊಳಿಸುವ ವ್ಯಾಯಾಮವಾಗಿದ್ದು ಅದು ನಿಮಗೆ ವಿಶ್ರಾಂತಿಗೆ ಸಹಾಯ ಮಾಡುತ್ತದೆ. ನೆತ್ತಿಯ ರಕ್ತದ ಹರಿವು ಸುಧಾರಿಸುತ್ತದೆ, ಇದು ಕೂದಲಿನ ಕಿರುಚೀಲಗಳನ್ನು ಬಲಪಡಿಸುತ್ತದೆ ಮತ್ತು ಆರೋಗ್ಯಕರ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.

ಉಗುರುಗಳನ್ನು ಉಜ್ಜಿದರೆ ಕೂದಲು ಉದ್ದವಾಗುತ್ತಾ?
ಉಗುರುಗಳನ್ನು ಉಜ್ಜುವುದು Image Credit source: iStock
Follow us
|

Updated on: Nov 07, 2023 | 4:45 PM

ಕೂದಲು ಮತ್ತು ಉಗುರುಗಳನ್ನು ಯೋಗ ಮತ್ತು ಆಯುರ್ವೇದದಲ್ಲಿ ಚಯಾಪಚಯ ಪ್ರಕ್ರಿಯೆಗಳ ಉಪಉತ್ಪನ್ನಗಳು ಎಂದು ಪರಿಗಣಿಸಲಾಗುತ್ತದೆ. ಯೋಗ ತಜ್ಞರ ಪ್ರಕಾರ, ಕೂದಲಿಗೆ ಸಂಬಂಧಿಸಿದ ಕೆಲವು ಸಮಸ್ಯೆಗಳಿಗೆ ಮುದ್ರೆಗಳಿಂದ ಯಶಸ್ವಿಯಾಗಿ ಚಿಕಿತ್ಸೆ ನೀಡಬಹುದು. ಕೂದಲು ಮತ್ತೆ ಬೆಳೆಯುವಂತೆ ಮಾಡುವುದು, ಮುಂಚಿನ ಕೂದಲು ತೆಳುವಾಗುವುದು, ಬೋಳು ತಲೆ ಮತ್ತು ಇತರ ಅನೇಕ ಕೂದಲಿನ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಿದೆ.

ಬಾಲಯಂ ಮುದ್ರೆಯಿಂದ ಕೂದಲ ಆರೋಗ್ಯ ಮತ್ತು ಬೆಳವಣಿಗೆಯನ್ನು ಹೆಚ್ಚಿಸಬಹುದು ಎಂದು ಅಕ್ಷರ ಯೋಗ ಸಂಸ್ಥೆಗಳು, ಹಿಮಾಲಯ ಯೋಗ ಆಶ್ರಮ ಮತ್ತು ವಿಶ್ವ ಯೋಗ ಸಂಸ್ಥೆಯ ಸಂಸ್ಥಾಪಕ ಹಿಮಾಲಯನ್ ಸಿದ್ಧಾ ಅಕ್ಷರ್ ಹಿಂದುಸ್ತಾನ್ ಟೈಮ್ಸ್​​ಗೆ ನೀಡಿದ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Hair Care: ವಯಸ್ಸಾಗುವ ಮೊದಲೇ ಕೂದಲು ಬೆಳ್ಳಗಾಗಲು ಕಾರಣವೇನು?

ಬಾಲಯಂ ಮುದ್ರೆಯನ್ನು ಮಾಡುವ ವಿಧಾನ ಹೀಗಿದೆ.

– ನಿಮ್ಮ ಬೆರಳುಗಳನ್ನು ಒಳಕ್ಕೆ ತಿರುಗಿಸುವ ಮೂಲಕ ಅರ್ಧ ಮುಷ್ಟಿಯನ್ನು ಮಾಡಿಕೊಳ್ಳಿ.

– ಆ ಮುಷ್ಟಿಯಿಂದ ನಿಮ್ಮ ಹೆಬ್ಬೆರಳನ್ನು ಹೊರತೆಗೆಯಿರಿ.

– ನಿಮ್ಮ ಅಂಗೈಗಳನ್ನು ಪರಸ್ಪರ ಎದುರಿಟ್ಟು ನಿಮ್ಮ ಬೆರಳುಗಳ ಉಗುರುಗಳು ಪರಸ್ಪರ ಸ್ಪರ್ಶಿಸುವಂತೆ ಮಾಡಿ.

– ಬಳಿಕ ನಿಮ್ಮ ಎರಡೂ ಕೈಯ ಉಗುರುಗಳನ್ನು ಪರಸ್ಪರ ವಿರುದ್ಧವಾಗಿ ಉಜ್ಜಿಕೊಳ್ಳಿ.

– ನೆನಪಿಡಿ, ನೀವು ನಿಮ್ಮ ಬೆರಳುಗಳ ಉಗುರುಗಳನ್ನು ಮಾತ್ರ ರಬ್ ಮಾಡಬೇಕೇ ವಿನಃ ಹೆಬ್ಬೆರಳನ್ನಲ್ಲ.

ಇದನ್ನೂ ಓದಿ: Hair Loss: ಕೂದಲು ಉದುರಲು ಕಾರಣವೇನು? ತಡೆಗಟ್ಟಲು ಏನು ಮಾಡಬೇಕು?

ಬಾಲಯಂ ಮುದ್ರೆಯಿಂದ ಏನು ಉಪಯೋಗ?:

– ನಿಮ್ಮ ಉಗುರುಗಳನ್ನು ಉಜ್ಜುವುದು ಶಾಂತಗೊಳಿಸುವ ವ್ಯಾಯಾಮವಾಗಿದ್ದು ಅದು ನಿಮಗೆ ವಿಶ್ರಾಂತಿಗೆ ಸಹಾಯ ಮಾಡುತ್ತದೆ.

– ನೆತ್ತಿಯ ರಕ್ತದ ಹರಿವು ಸುಧಾರಿಸುತ್ತದೆ, ಇದು ಕೂದಲಿನ ಕಿರುಚೀಲಗಳನ್ನು ಬಲಪಡಿಸುತ್ತದೆ ಮತ್ತು ಆರೋಗ್ಯಕರ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.

– ಕೂದಲು ಬಿಳಿಯಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ಕೂದಲಿನ ರಚನೆ, ಟೋನ್ ಅನ್ನು ಸುಧಾರಿಸಲು ಸಹಾಯ ಮಾಡುತ್ತದೆ.

– ರಕ್ತದ ಹರಿವನ್ನು ಸುಧಾರಿಸುತ್ತದೆ. ಇದು ಉತ್ತಮ ಹೃದಯ ಮತ್ತು ಶ್ವಾಸಕೋಶದ ಕಾರ್ಯವನ್ನು ಉತ್ತೇಜಿಸುತ್ತದೆ.

ಮುದ್ರೆಗಳು ನಮ್ಮ ಕೂದಲಿಗೆ ಒಂದು ವರವಾಗಿದೆ. ಏಕೆಂದರೆ ಅವು ಮತ್ತೆ ಕೂದಲು ಬೆಳೆಯಲು ಮತ್ತು ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಉಗುರುಗಳನ್ನು ಉಜ್ಜಿದಾಗ ಆಮ್ಲಜನಕ ಮತ್ತು ರಕ್ತದ ಹರಿವು ಹೆಚ್ಚಾಗುತ್ತದೆ. ಇದನ್ನು ನಿರಂತರವಾಗಿ ದೀರ್ಘಾವಧಿಯವರೆಗೆ ಮಾಡಿದರೆ ಮಾತ್ರ ಪ್ರಯೋಜನ ಸಿಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ