AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಡ್ರಾಯ್ಡ್ ಮತ್ತು ಐಫೋನ್​​ನಿಂದ ಕ್ಯಾಪ್ಸಿಕಂ ಬೆಲೆ ನಿರ್ಧಾರ, ಇದು Zepto ಮಹಿಮೆ, ಅನುಭವ ಹಂಚಿಕೊಂಡ ಬೆಂಗಳೂರಿನ ಮಹಿಳೆ

ಆಂಡ್ರಾಯ್ಡ್ ಮತ್ತು ಐಫೋನಿಗೂ ಇರುವ ವ್ಯತ್ಯಾಸವನ್ನು ಒಂದು ಕ್ಯಾಪ್ಸಿಕಂ, ದ್ರಾಕ್ಷಿಯ ಬೆಲೆ ನಿರ್ಧಾರಿಸಿದೆ ನೋಡಿ. ಬೆಂಗಳೂರಿನ ಮಹಿಳೆಯೊಬ್ಬರು ಆಂಡ್ರಾಯ್ಡ್ ಮತ್ತು ಐಫೋನ್ ಒಂದೇ ವಸ್ತುವಿಗೆ ವಿಭಿನ್ನ ಬೆಲೆಯಲ್ಲಿ ನಿರ್ಧಾರಿಸಿದೆ. Zepto ಉತ್ಪನ್ನಗಳು ಇದಕ್ಕೆ ಸಾಕ್ಷಿ. ಇದೀಗ ಈ ಮಹಿಳೆ ಹಂಚಿಕೊಂಡ ಪೋಸ್ಟ್​​ ವೈರಲ್​ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.

ಆಂಡ್ರಾಯ್ಡ್ ಮತ್ತು ಐಫೋನ್​​ನಿಂದ ಕ್ಯಾಪ್ಸಿಕಂ ಬೆಲೆ ನಿರ್ಧಾರ, ಇದು Zepto ಮಹಿಮೆ, ಅನುಭವ ಹಂಚಿಕೊಂಡ ಬೆಂಗಳೂರಿನ ಮಹಿಳೆ
ವೈರಲ್ ಫೋಟೋ
ಸಾಯಿನಂದಾ
| Edited By: |

Updated on: Jan 28, 2025 | 4:55 PM

Share

ಆಂಡ್ರಾಯ್ಡ್ ಮತ್ತು ಐಫೋನ್​​ನಿಂದ ಒಂದು ತರಕಾರಿ ಅಥವಾ ವಸ್ತುವಿನ ಬೆಲೆ ನಿರ್ಧಾರವಾಗುತ್ತದೆ. ಈ ಬಗ್ಗೆ ಒಂದು ಪೋಸ್ಟ್​​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ಬೆಂಗಳೂರಿನ ಮಹಿಳೆಯೊಬ್ಬರು ಆಂಡ್ರಾಯ್ಡ್ ಮತ್ತು ಐಫೋನ್ ಒಂದೇ ವಸ್ತುವಿಗೆ ವಿಭಿನ್ನ ಬೆಲೆಯಲ್ಲಿ ನಿರ್ಧಾರಿಸಿದೆ. Zepto ಉತ್ಪನ್ನಗಳು ಇದಕ್ಕೆ ಸಾಕ್ಷಿ. ಇದೀಗ ಈ ಮಹಿಳೆ ಹಂಚಿಕೊಂಡ ಪೋಸ್ಟ್​​ ವೈರಲ್​ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಅರ್ಧ ಕಿಲೋ ದ್ರಾಕ್ಷಿಗೆ ಆಂಡ್ರಾಯ್ಡ್ನಲ್ಲಿ 65 ರೂ. ಅದೇ ದ್ರಾಕ್ಷಿಗೆ ಐಫೋನ್‌ನಲ್ಲಿ 146 ರೂ. ಕ್ಯಾಪ್ಸಿಕಂ, ಹೂಕೋಸು ಮತ್ತು ಈರುಳ್ಳಿ ಬೆಲೆಗಳು ಈ ವ್ಯತ್ಯಾಸವನ್ನು ಸೂಚಿಸುತ್ತದೆ. Zepto ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಒಂದೇ ಉತ್ಪನ್ನಕ್ಕೆ ವಿಭಿನ್ನ ಬೆಲೆಗಳನ್ನು ವಿಧಿಸುತ್ತಿದೆ ಎಂದು ಆರೋಪಿಸಲಾಗಿದೆ. ವಿನಿತಾ ಸಿಂಗ್ ಎಂಬುವವರು ಈ ಬಗ್ಗೆ ಸ್ಕ್ರೀನ್‌ಶಾಟ್‌ ಹಂಚಿಕೊಂಡಿದ್ದಾರೆ.

ಕ್ಯಾಪ್ಸಿಕಂಗೆ ಆಂಡ್ರಾಯ್ಡ್ ಫೋನ್ 500-600 ಗ್ರಾಂಗೆ 21 ರೂ ಎಂದು ತೋರಿಸಿದೆ, ಆದರೆ ಐಫೋನ್ ಅದೇ ಉತ್ಪನ್ನಕ್ಕೆ 107 ರೂ ತೋರಿಸುತ್ತದೆ. ಎರಡೂ ಸ್ಕ್ರೀನ್‌ಶಾಟ್‌ಗಳನ್ನು ಒಂದೇ ಸಮಯದಲ್ಲಿ ತೆಗೆದುಕೊಳ್ಳಲಾಗಿದೆ. Zepto ಯಾಕೆ ವ್ಯತ್ಯಾಸವನ್ನು ಮಾಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿದೆ.

ಇದನ್ನೂ ಓದಿ:  ಉಡುಗೆಗೆ ಹೊಂದುವಂತೆ ಚೆಂದನೆಯ ಆಭರಣಗಳ ಆಯ್ಕೆ ಹೀಗಿರಲಿ

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜನರು ಚರ್ಚೆ ಮಾಡಿದ್ದಾರೆ. ಜತೆಗೆ ಈ ಪೋಸ್ಟ್​​​ಗೆ ಕಮೆಂಟ್​​ ಕೂಡ ಮಾಡಿದ್ದಾರೆ. ಐಫೋನ್ ಖರೀದಿಸಲು ಅವರಿಗೂ ಹಣ ಬೇಕು. ಅದಕ್ಕೇ ಎಂದು ಹೇಳಿದ್ದಾರೆ. ನಾವೆಲ್ಲರೂ ದಿನಸಿ, ಬುಕ್ ಕ್ಯಾಬ್‌ಗಳು ಇತ್ಯಾದಿಗಳನ್ನು ಖರೀದಿಸಲು ಆಂಡ್ರಾಯ್ಡ್ ಸಾಧನಗಳನ್ನು ಖರೀದಿಸಬೇಕು ಎಂದು ಅನ್ನಿಸುತ್ತಿದೆ ಮತ್ತೊಬ್ಬ ವ್ಯಕ್ತಿ ಹೇಳಿದ್ದಾರೆ. ನಾವೆಲ್ಲ ಒಂದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದೆ. ನಾವೆಲ್ಲರೂ ಈ ಅಪ್ಲಿಕೇಶನ್‌ಗಳ ಮೇಲೆ ಹೆಚ್ಚು ಅವಲಂಬಿತರಾಗಿರುವುದರಿಂದ ಈ ಸಮಸ್ಯೆ ಆಗುತ್ತಿದೆ. ನೀವು ಅದನ್ನು ಐಫೋನ್‌ನೊಂದಿಗೆ ಆರ್ಡರ್ ಮಾಡಿದಾಗ ಅವರು ಕ್ಯಾಪ್ಸಿಕಂ ಅನ್ನು 1 ನಿಮಿಷ ಮುಂಚಿತವಾಗಿ ವಿತರಿಸುತ್ತಿದ್ದಾರೆ. ಅದಕ್ಕಾಗಿಯೇ ಇದು ದುಬಾರಿಯಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!