AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲೆಬ್ರಿಟಿಗಳು ಫಾಲೋ ಮಾಡುವ ಐಸ್ ವಾಟರ್ ಬಾತ್, ನೀವು ಪ್ರಯತ್ನಿಸುವ ಮೊದಲು ಈ ವಿಷಯ ತಿಳಿದುಕೊಳ್ಳಿ

ಐಸ್​​ ಕ್ಯೂಬ್​​​ಗಳ ಟಬ್​​​​ನಲ್ಲಿ ಸ್ನಾನ ಮಾಡುವುದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಆದರೆ ಇದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ, ಇದು ಉತ್ತಮವೇ ತಜ್ಞರು ಹೇಳುವುದೇನು? ಇಲ್ಲಿದೆ ಮಾಹಿತಿ

ಸೆಲೆಬ್ರಿಟಿಗಳು ಫಾಲೋ ಮಾಡುವ ಐಸ್ ವಾಟರ್ ಬಾತ್, ನೀವು ಪ್ರಯತ್ನಿಸುವ ಮೊದಲು ಈ ವಿಷಯ ತಿಳಿದುಕೊಳ್ಳಿ
ಐಸ್ ವಾಟರ್ ಬಾತ್
TV9 Web
| Edited By: |

Updated on:Feb 12, 2023 | 2:25 PM

Share

ಸೆಲೆಬ್ರಿಟಿಗಳು ತಣ್ಣನೆಯ ನೀರಿನಲ್ಲಿ ಧುಮುಕುವುದು ಅಥವಾ ಐಸ್​​ ಕ್ಯೂಬ್​​​ಗಳ ಟಬ್​​​​ನಲ್ಲಿ ಸ್ನಾನ ಮಾಡುವುದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಆದರೆ ಇದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ, ಇದು ಉತ್ತಮವೇ ತಜ್ಞರು ಹೇಳುವುದೇನು? ಇಲ್ಲಿದೆ ಮಾಹಿತಿ. ತಜ್ಞರ ಪ್ರಕಾರ ಐಸ್​​ ಬಾತ್​​ ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಮತ್ತು ಹೃದಯದ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ. ಆರೋಗ್ಯವಂತ ಜನರಿಗೆ ಇದು ಸುರಕ್ಷಿತವಾಗಿದೆ ಎಂದು ಅಧ್ಯಯನಗಳು ತಿಳಿಸಿವೆ. ಆದರೆ ಹೃದಯದ ತೊಂದರೆ ಇರುವವರಿಗೆ ಇದು ಅಪಾಯಕಾರಿಯಾಗಬಹುದು, ಕೆಲವೊಮ್ಮೆ ಹೃದಯ ಬಡಿತಗಳ ಹೆಚ್ಚಳಕ್ಕೆ ಕಾರಣವಾಗಬಹುದು. ಆದ್ದರಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವವರು ಈ ರೀತಿಯ ಪ್ರಯತ್ನಗಳನ್ನು ಮಾಡುವ ಮುನ್ನ ವೈದ್ಯರನ್ನು ಸಂಪರ್ಕಿಸುವುದು ಉತ್ತಮ ಎಂದು ತಜ್ಞರು ಎಚ್ಚರಿಸುತ್ತಾರೆ.

ಐಸ್​​ ಬಾತ್​​​​ ರಕ್ತದಲ್ಲಿನ ಸಕ್ಕರೆ ಮತ್ತು ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ದೇಹವು ಕ್ಯಾಲೊರಿಗಳನ್ನು ಸುಡಲು ಸಹಾಯ ಮಾಡುತ್ತದೆ, ಜೊತೆಗೆ ತೂಕವನ್ನು ಕಳೆದುಕೊಳ್ಳಲು ತಣ್ಣೀರಿನ ಇಮ್ಮರ್ಶನ್ ಪರಿಣಾಮಕಾರಿ ಮಾರ್ಗವಾಗಿದೆಯೇ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಕೇವಲ 2 ನಿಮಿಷಗಳಲ್ಲಿ ಚಾಕೊಲೇಟ್ ಮಗ್ ಕೇಕ್ ತಯಾರಿಸಿ

ಇತ್ತೀಚೆಗೆ ಭಾರತದ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ತಮ್ಮ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಐಸ್​​​ ಕ್ಯೂಬ್​​​ಗಳಿಂದ ತುಂಬಿಸಲಾದ ಬಾತ್​​​ ಟಬ್​​ನಲ್ಲಿ ಕೊಹ್ಲಿಯನ್ನು ಕಾಣಬಹುದು. ಇದು ನನ್ನ ದಿನ ಪೂರ್ತಿಯ ವರ್ಕ್​ಔಟ್​​​ ನಂತರದ ನೋವನ್ನು ಶಮನಗೊಳಿಸಲು ಸಹಾಯವಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ ನೀವು ಈ ರೀತಿ ಪ್ರಯತ್ನಿಸುವ ಮುನ್ನ ನಿಮ್ಮ ಹತ್ತಿರದ ವೈದ್ಯರನ್ನು ಭೇಟಿಯಾಗಿ ಸಲಹೆ ಪಡೆದುಕೊಳ್ಳುವುದು ಅಗತ್ಯ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:24 pm, Sun, 12 February 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ