AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Excise Day 2024: ದೇಶದ ಅಬಕಾರಿ ಇಲಾಖೆಯ ನೌಕರರ ಕೆಲಸವನ್ನು ಶ್ಲಾಘಿಸುವ ದಿನ

ದೇಶದ ಆರ್ಥಿಕತೆಯಲ್ಲಿ ಅಬಕಾರಿ ಇಲಾಖೆಯ ನೌಕರರ ಪಾತ್ರವು ದೊಡ್ಡದು. ಅಬಕಾರಿ ಇಲಾಖೆಯು ಅಕ್ರಮ ಮಾರಾಟ, ಸಾರಿಗೆ ಹಾಗೂ ಮದ್ಯ ತಯಾರಿಕೆ ಹಾಗೂ ಸಾಮೂಹಿಕ ದಾಳಿಗಳಂತಹ ಚಟುವಟಿಕೆಗಳನ್ನು ತಡೆಯುತ್ತದೆಯುತ್ತದೆ. ಹೀಗಾಗಿ ಈ ಅಧಿಕಾರಿಗಳ ಕೆಲಸದ ಬಗ್ಗೆ ಮಾಹಿತಿ ನೀಡಲು ಅವರ ಸೇವೆಯನ್ನು ಶ್ಲಾಘಿಸಲು ಪ್ರತಿ ವರ್ಷ ಫೆಬ್ರವರಿ 24 ರಂದು ಕೇಂದ್ರ ಅಬಕಾರಿ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಮಹತ್ವ ಹಾಗೂ ಇತಿಹಾಸದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Central Excise Day 2024: ದೇಶದ ಅಬಕಾರಿ ಇಲಾಖೆಯ ನೌಕರರ ಕೆಲಸವನ್ನು ಶ್ಲಾಘಿಸುವ ದಿನ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Feb 22, 2024 | 5:10 PM

Share

ಒಂದು ದೇಶವು ಅಭಿವೃದ್ಧಿಯಾಗಬೇಕಾದರೆ ಎಲ್ಲಾ ಇಲಾಖೆಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸಬೇಕು. ತಮ್ಮ ಕೆಲಸ ಕಾರ್ಯಕ್ರಮಗಳಲ್ಲಿ ಸಣ್ಣ ಪುಟ್ಟ ತಪ್ಪಾದರೂ ದೇಶದ ಆರ್ಥಿಕತೆಯ ಮೇಲೆ ದೊಡ್ಡ ಹೊಡೆತವನ್ನು ತಂದೊಡ್ದುತ್ತದೆ. ಈ ಇಲಾಖೆಯು ತೆರಿಗೆ ಸಂಗ್ರಹಿಸಲು, ಕಳ್ಳಸಾಗಾಣಿಕೆ ತಡೆಗಟ್ಟಲು, ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಕೆಲಸವನ್ನು ಮಾಡುತ್ತದೆ. ತೆರಿಗೆಗಳ ಪಾವತಿ, ಆಮದು ಮತ್ತು ರಫ್ತುಗಳಿಗೆ ಸಂಬಂಧ ಪಟ್ಟ ನಿಯಮಗಳು ಸರಿಯಾಗಿ ಪಾಲನೆಯಾಗುತ್ತಿದೆಯೇ ಎನ್ನುವುದನ್ನು ಗಮನಿಸಿರುತ್ತದೆ. ಈ ಇಲಾಖೆಯ ನೌಕರರ ಕೆಲಸವನ್ನು ಶ್ಲಾಘಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಫೆಬ್ರವರಿ 24 ರಂದು ಇಡೀ ದೇಶಾದ್ಯಂತ ಕೇಂದ್ರ ಅಬಕಾರಿ ದಿನವನ್ನಾಗಿ ಆಚರಿಸುತ್ತ ಬರಲಾಗುತ್ತಿದೆ. ಈ ಅಬಕಾರಿ ಇಲಾಖೆಯ ನೌಕರರು ತಮ್ಮ ಕರ್ತವ್ಯಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ಉತ್ತೇಜಿಸಲು ಹಾಗೂ ಪ್ರಾಮಾಣಿಕವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಇಲಾಖೆಯಲ್ಲಿರುವ ಅಧಿಕಾರಿಗಳನ್ನು ಗೌರವಿಸುವ ದಿನವು ಆಗಿದೆ.

ಕೇಂದ್ರ ಅಬಕಾರಿ ದಿನದ ಇತಿಹಾಸ

ಕೇಂದ್ರ ಅಬಕಾರಿ ದಿನದಂದು 1994ರ ಫೆಬ್ರವರಿ 24 ರಂದು ಜಾರಿಗೆ ಬಂದ ಕೇಂದ್ರ ಅಬಕಾರಿ ಮತ್ತು ಉಪ್ಪು ಕಾಯಿದೆಯನ್ನು ನೆನಪಿಸುವ ಸಲುವಾಗಿ ಆಚರಿಸಲಾಗುತ್ತದೆ. ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಅಡಿಯಲ್ಲಿ ಸಂಸ್ಥೆಯ ಒಂದು ಭಾಗವಾಗಿದೆ ಈ ಹಿಂದೆ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿಯು ಈ ಹಿಂದೆ ಕೇಂದ್ರ ಅಬಕಾರಿ ಮತ್ತು ಸುಂಕ ಎಂದು ಕರೆಯಲಾಗುತ್ತಿತ್ತು. ಕಸ್ಟಮ್​​ ಮತ್ತು ಕೇಂದ್ರೀಯ ಅಬಕಾರಿ, ಕೇಂದ್ರ ಜಿಎಸ್​ಟಿ ಇಲಾಖೆಯು ಸುಂಕ ಕಾನೂನುಗಳನ್ನು ಜಾರಿಗೊಳಿಸುವ ಜವಾಬ್ದಾರಿಯು ಈ ಇಲಾಖೆಯ ಮೇಲಿದೆ. ಈ ಇಲಾಖೆಯನ್ನು ಕಂದಾಯ ಇಲಾಖೆ, ಹಣಕಾಸು ಸಚಿವಾಲಯವು ನೋಡಿಕೊಳ್ಳುತ್ತವೆ.

ಇದನ್ನೂ ಓದಿ: ಕೈಯ ರಂಗು ಹೆಚ್ಚಿಸುವ ಮದರಂಗಿಯಲ್ಲಿದೆ ಔಷಧೀಯ ಗುಣ, ಇಲ್ಲಿದೆ ಸರಳ ಮನೆ ಮದ್ದು

ಕೇಂದ್ರ ಅಬಕಾರಿ ದಿನದ ಮಹತ್ವ

ದೇಶದ ಕೈಗಾರಿಕಾ ಅಭಿವೃದ್ಧಿಯಲ್ಲಿ ಕೇಂದ್ರ ಅಬಕಾರಿ ಇಲಾಖೆ ಪ್ರಮುಖ ಪಾತ್ರ ವಹಿಸುತ್ತದೆ. ತೆರಿಗೆ ಲೆಕ್ಕಾಚಾರದಲ್ಲಿ ಸ್ವಲ್ಪ ಏರುಪೇರಾದರೂ ದೇಶದ ಆರ್ಥಿಕತೆಗೆ ನಷ್ಟವಾಗುತ್ತದೆ. ಹೀಗಾಗಿ ಕೇಂದ್ರ ಅಬಕಾರಿ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯು ದೊಡ್ಡ ಮಟ್ಟದಲ್ಲಿದೆ. ಇದೀಗ ತೆರಿಗೆ ಪಾವತಿಯನ್ನು ಸುಲಭಗೊಳಿಸಲು ಸಚಿವಾಲಯವು ತೆರಿಗೆ ವ್ಯವಸ್ಥೆಯನ್ನು ಸುಧಾರಿಸಿದ್ದು, ನೂತನ ತಂತ್ರಜ್ಞಾನವನ್ನು ಬಳಸಲಾಗಿದೆ. ಕೇಂದ್ರೀಯ ಅಬಕಾರಿ ದಿನದಂದು ‘ಕೇಂದ್ರೀಯ ಅಬಕಾರಿ ಮತ್ತು ಕಸ್ಟಮ್ಸ್ ಮಂಡಳಿಯ ಮಹತ್ವದ ಬಗ್ಗೆ ದೇಶದ ಜನತೆಗೆ ತಿಳಿಸಿಕೊಡುವುದಾಗಿದೆ. ಈ ಅಬಕಾರಿ ದಿನದಂದು, ಮಂಡಳಿಯಿಂದ ವಿಚಾರಗೋಷ್ಠಿಗಳು, ಕಾರ್ಯಾಗಾರಗಳು, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾಗೃತಿ ಕಾರ್ಯಕ್ರಮಗಳು, ಪ್ರಶಸ್ತಿ ಪ್ರಧಾನ ಕಾರ್ಯಕ್ರಮಗಳು ನಡೆಯುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು