AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುರ್ತು ಅಗತ್ಯತೆ ಹೊರತಾಗಿ ರೈಲಿನಲ್ಲಿ ಚೈನ್ ಎಳೆದರೆ ಅಪರಾಧಿಗೆ ಶಿಕ್ಷೆ ಏನು ಗೊತ್ತಾ? ಹೊಸಾ ರೂಲ್ಸ್​ ಏನ್​ ಹೇಳತ್ತೆ?

ಪ್ರತಿನಿತ್ಯ ಲಕ್ಷಾಂತರ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸುತ್ತಾರೆ ಜೊತೆಗೆ ಸಾಕಷ್ಟು ಬೋಗಿಗಳಿರುವುದರಿಂದ ನೀವು ಏನಾದರೂ ತಪ್ಪು ಮಾಡಿದರೂ ಅದು ನಾನೆಂದು ತಿಳಿಯಲು ಸಾಧ್ಯವಿಲ್ಲ ಎಂದು ಅಂದುಕೊಳ್ಳಬೇಡಿ. ತುರ್ತು ಅಗತ್ಯತೆ ಹೊರತಾಗಿ ರೈಲಿನಲ್ಲಿ ಚೈನ್ ಎಳೆದರೆ ಅಪರಾಧಿಗೆ ಶಿಕ್ಷೆ ಎನು ಎಂಬುದು ಇಲ್ಲಿ ತಿಳಿದುಕೊಳ್ಳಿ.

ತುರ್ತು ಅಗತ್ಯತೆ ಹೊರತಾಗಿ ರೈಲಿನಲ್ಲಿ ಚೈನ್ ಎಳೆದರೆ ಅಪರಾಧಿಗೆ ಶಿಕ್ಷೆ ಏನು ಗೊತ್ತಾ? ಹೊಸಾ ರೂಲ್ಸ್​ ಏನ್​ ಹೇಳತ್ತೆ?
Chain Pulling in TrainImage Credit source: blog.railyatri
Follow us
ಅಕ್ಷತಾ ವರ್ಕಾಡಿ
| Updated By: Digi Tech Desk

Updated on: Jun 21, 2023 | 5:50 PM

ಭಾರತೀಯ ರೈಲ್ವೇ ವಿಶ್ವದಲ್ಲೇ ನಾಲ್ಕನೇ ಅತಿ ದೊಡ್ಡ ರೈಲ್ವೆ ಜಾಲವಾಗಿದೆ. ಆದರೆ ನೀವು ರೈಲಿನಲ್ಲಿ ಪ್ರಯಾಣಿಸುವಾಗ ಎಂದಿಗೂ ಈ ತಪ್ಪುಗಳನ್ನು ಮಾಡದಿರಿ. ಪ್ರತಿನಿತ್ಯ ಲಕ್ಷಾಂತರ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸುತ್ತಾರೆ ಜೊತೆಗೆ ಸಾಕಷ್ಟು ಬೋಗಿಗಳಿರುವುದರಿಂದ ನೀವು ಏನಾದರೂ ತಪ್ಪು ಮಾಡಿದರೂ ಅದು ನಾನೆಂದು ತಿಳಿಯಲು ಸಾಧ್ಯವಿಲ್ಲ ಎಂದು ಅಂದುಕೊಳ್ಳಬೇಡಿ. ಉದಾಹರಣೆಗೆ ಯಾವುದೇ ಮಾನ್ಯ ಕಾರಣವಿಲ್ಲದೆ ಚಲಿಸುವ ರೈಲನ್ನು ನಿಲ್ಲಿಸಲು ರೈಲುಗಳಲ್ಲಿ ಚೈನ್ ಎಳೆಯುವುದು ಕಾನೂನು ಅಪರಾಧವಾಗಿದೆ. ಹಾಗೆ ಮಾಡಿದ ವ್ಯಕ್ತಿಗೆ ದಂಡ ವಿಧಿಸಬಹುದು ಮತ್ತು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಇದರ ಕುರಿತು ಇನ್ನಷ್ಟು ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

ರೈಲಿನಲ್ಲಿ ಚೈನ್ ಎಳೆಯುವುದು ಯಾವ ಸಂದರ್ಭದಲ್ಲಿ?

ಸಾಮಾನ್ಯವಾಗಿ ಪ್ರಯಾಣಿಕರ ಯೋಗ ಕ್ಷೇಮಕ್ಕಾಗಿಯೇ ಈ ಚೈನ್​​ ಪುಲ್ಲಿಂಗ್​​​​ನ್ನು ಅಳವಡಿಸಲಾಗಿದೆ. ಏನಾದರೂ ತುರ್ತು ಸಮಯದಲ್ಲಿ ಪ್ರಯಾಣಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬಹುದು.

  • ವಯಸ್ಸಾದವರು ಅಥವಾ ವಿಕಲಚೇತನರು ರೈಲು ಹತ್ತಲು ಸಮಯ ತೆಗೆದುಕೊಳ್ಳುತ್ತಾರೆ. ಆ ಸಮಯದಲ್ಲಿ ರೈಲು ಚಲಿಸಲು ಪ್ರಾರಂಭಿಸಿದರೆ ಚೈನ್ ಎಳೆದು ರೈಲು ನಿಲ್ಲಿಸಬಹುದು.
  • ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡರೆ ಪ್ರಯಾಣಿಕರು ಬೋಗಿಯಿಂದ ಪಾರಾಗಲು ಚೈನ್ ಎಳೆದು ರೈಲು ನಿಲ್ಲಿಸಬಹುದು.
  • ರೈಲಿನಲ್ಲಿ ಸರಗಳ್ಳತನ, ಕಳ್ಳತನ ಅಥವಾ ದರೋಡೆ ಘಟನೆ ನಡೆದರೆ, ಇಂತಹ ತುರ್ತು ಸಮಯದಲ್ಲಿ ಇದನ್ನು ಸದುಪಯೋಗ ಪಡಿಸಿಕೊಳ್ಳುವುದು ಉತ್ತಮ.

ಮಾನ್ಯ ಕಾರಣಗಳಿಲ್ಲದೇ ಚೈನ್​​​ ಎಳೆಯುವುದು ಶಿಕ್ಷಾರ್ಹ ಅಪರಾಧ:

ತುರ್ತು ಅಗತ್ಯತೆಗಳ ಹೊರತಾಗಿ ಸಾರ್ವಜನಿಕ ಸ್ಥಳಗಳನ್ನು ಹಾಳು ಮಾಡುವುದು, ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುವುದು ಸರಿಯಲ್ಲ ಎಂಬುದು ಪ್ರತಿಯೊಂದು ಪ್ರಜೆಯೂ ತಿಳಿದಿರಬೇಕು. ಮಾನ್ಯ ಕಾರಣಗಳಿಲ್ಲದೇ ಚೈನ್ ಎಳೆಯುವುರಿಂದ ರೈಲು ಮತ್ತೆ ಚಲಿಸಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಮತ್ತು ಇದು ಸಾಕಷ್ಟು ಪ್ರಯಾಣಿಕರಿಗೆ ಸರಿಯಾದ ಸಮಯಕ್ಕೆ ತಲುಪುವ ಜಾಗಕ್ಕೆ ತಲುಪದಂತೆ ಮಾಡುತ್ತದೆ.

ರೈಲಿನಲ್ಲಿ ಚೈನ್ ಎಳೆದರೆ ಎಷ್ಟು ದಂಡ ವಿಧಿಸಲಾಗುತ್ತದೆ?

ಅಲಾರ್ಮ್ ಚೈನ್ ರೈಲಿನ ಸೌಲಭ್ಯವನ್ನು ದುರುಪಯೋಗಪಡಿಸಿಕೊಳ್ಳುವುದು ರೈಲ್ವೇ ನಿಯಮಗಳ ಅಡಿಯಲ್ಲಿ ಅಪರಾಧ ಕೃತ್ಯವಾಗಿದೆ. ಅಂತಹ ಸ್ಥಿತಿಯಲ್ಲಿ, ಯಾವುದೇ ತುರ್ತು ಪರಿಸ್ಥಿತಿ ಇಲ್ಲದೆ ರೈಲಿನಲ್ಲಿ ಚೈನ್ ಎಳೆದರೆ, ರೈಲ್ವೆ ಕಾಯಿದೆಯ ಸೆಕ್ಷನ್ 141 ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ನಿಯಮದ ಪ್ರಕಾರ, ಅಪರಾಧಿಗೆ 1,000 ರೂಪಾಯಿ ದಂಡ ಅಥವಾ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜೊತೆಗೆ ಭವಿಷ್ಯದಲ್ಲಿ ಅಪರಾಧಿಗೆ ಸರ್ಕಾರಿ ನೌಕರಿ ಪಡೆಯಲು ಸಾಧ್ಯವಿಲ್ಲ.

ಅಪರಾಧಿ ಯಾರೆಂದು ಕಂಡುಹಿಡಿಯುವುದು ಹೇಗೆ?

ಚೈನ್ ಎಳೆದಾಗ ಬೋಗಿಯ ಮೇಲಿನ ಮೂಲೆಯಲ್ಲಿ ಅಳವಡಿಸಿರುವ ವಾಲ್ವ್ ತಿರುಗುತ್ತದೆ. ಇದು ರೈಲಿನ ಚೈನ್ ಅನ್ನು ಎಲ್ಲಿ ಎಳೆಯಲಾಗಿದೆ ಎಂಬುದನ್ನು ತೋರಿಸುತ್ತದೆ. ಏರ್ ಪೈಪ್‌ನ ಮುಚ್ಚಳವು ಹೊರಬಂದ ಕೋಚ್ ಅನ್ನು ಚೈನ್ ಎಳೆದಿರುವ ಬೋಗಿ ಎಂದು ಪರಿಗಣಿಸಲಾಗುತ್ತದೆ.

ರೈಲು ಟಿಟಿಯನ್ನು ಸಂಪರ್ಕಿಸುವುದು ಹೇಗೆ?

ನೀವು ರೈಲಿನಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದರೆ ಸುರಕ್ಷಿತವಾಗಿ ಪ್ರಯಾಣಿಸಬಹುದು. ನೀವಿರುವ ಬೋಗಿಯಲ್ಲಿ ಗಲಾಟೆ, ಹೊಡೆದಾಟ ಉಂಟಾದರೆ ನೀವು ತಕ್ಷಣ ಟಿಟಿಯಿ ಯನ್ನು ಸಂಪರ್ಕಿಸಬಹುದು. ಈ ಕೆಳಗಿನ ಟೋಲ್​​​ ಫ್ರೀ ನಂಬರಿಗೆ ಕರೆಮಾಡಿ ಸಹಾಯ ಪಡೆದುಕೊಳ್ಳಿ.

TTE ದೂರವಾಣಿ ಸಂಖ್ಯೆ: 1800111321

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್